Kolar News: ಮೇಲಾಧಿಕಾರಿಗಳಿಂದ ಕಿರುಕುಳ ಆರೋಪ; ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಆತ್ಮಹತ್ಯೆಗೆ ಶರಣು

ಮಂಡ್ಯದಲ್ಲಿ ಕಂಡಕ್ಟರ್​ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಾಸುವ ಮುನ್ನವೇ ಇದೀಗ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Kolar News: ಮೇಲಾಧಿಕಾರಿಗಳಿಂದ ಕಿರುಕುಳ ಆರೋಪ; ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಆತ್ಮಹತ್ಯೆಗೆ ಶರಣು
ಬಸ್​ ಕಂಡಕ್ಟರ್​ ಆತ್ಮಹತ್ಯೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 21, 2023 | 12:45 PM

ಕೋಲಾರ: ಮಂಡ್ಯದಲ್ಲಿ ಕಂಡಕ್ಟರ್​ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಾಸುವ ಮುನ್ನವೇ ಇದೀಗ ಕೋಲಾರ(Kolar) ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಕೆಎಸ್​ಆರ್​ಟಿಸಿ(KSRTC) ಬಸ್ ಕಂಡಕ್ಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉಪ್ಪುಕುಂಟೆ ಗ್ರಾಮದ ಸೋಮಾಚಾರಿ (50) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ‌. ಮೃತ ಕಂಡಕ್ಟರ್​ ಇತ್ತೀಚೆಗೆ ಪೆರಾಲಿಸಿಸ್ ಕಾಯಿಲೆಗೆ ತುತ್ತಾಗಿದ್ದರು. ಈ ಮಧ್ಯೆ ಕೆಲಸದ ವೇಳೆ ಶ್ರೀನಿವಾಸಪುರ ಡಿಪೋ ಮ್ಯಾನೇಜರ್ ವೆಂಕಟೇಶ್ ಎಂಬುವವರು ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪ ಕೇಳಿಬಂದಿದ್ದು, ಇದರಿಂದ ಮಾನಸಿಕವಾಗಿ ನೊಂದಿದ್ದ ಸೋಮಾಚಾರಿ ಅವರು, ಇಂದು(ಜು.21) ಬೆಳಗಿನ ಜಾವ ಅವರ ತೋಟದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗಷ್ಟೇ ಮಂಡ್ಯದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಕಂಡಕ್ಟರ್​

ಹೌದು ಇದೇ ತಿಂಗಳ ಜು.5ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ಡಿಪೋ ಎದುರು ಕೆಎಎಸ್​ಆರ್​​ಟಿಸಿ ಬಸ್ ಚಾಲಕ ಜಗದೀಶ್​ ಎಂಬುವವರು, ಸಚಿವ ಎನ್. ಚಲುವರಾಯಸ್ವಾಮಿಯವರು ರಾಜಕೀಯ ದ್ವೇಷದಿಂದ ನನ್ನನ್ನು ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ, ವರ್ಗಾವಣೆಯಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿತ್ತು. ಕೂಡಲೇ ಅಸ್ವಸ್ಥಗೊಂಡ ಜಗದೀಶ್ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿ, ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದರು.

ಇದನ್ನೂ ಓದಿ:ಉಚಿತ ಬಸ್ ಪಾಸ್ ಘೋಷಣೆ ಆಗಿದ್ದೆ ಕಂಡಕ್ಟರ್​​, ಡ್ರೈವರ್ಸ್​​​ ಫುಲ್​ ಖುಷ್​: ವಜಾಗೊಂಡ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡ್ತಾರಾ ರಾಮಲಿಂಗಾ ರೆಡ್ಡಿ?

ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಪರ ಕೆಲಸ ಮಾಡಿದ್ದಕ್ಕಾಗಿ ನನ್ನನ್ನು, ರಾಜಕೀಯ ದ್ವೇಷದಿಂದ ವರ್ಗಾವಣೆ ಮಾಡಿದ್ದಾರೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಜಗದೀಶ್ ಆಕ್ರೋಶ ವ್ಯಕ್ತಪಡಿಸಿದ್ದರು. ಹೌದು ಚಾಲಕ ಜಗದೀಶ್ ಡಿಪೋ ಬಳಿ ಸಚಿವರಿಗೆ ಬಾಯಿಗೆ ಬಂದಂತೆ ಬೈದು, ಬಳಿಕ ವಿಷ ಸೇವಿಸಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿ, ನಂತರ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಈ ಕಹಿ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಬ್ಬ ಕೆಎಸ್​ಆರ್​ಟಿಸಿ ಕಂಡಕ್ಟರ್​ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:45 pm, Fri, 21 July 23

‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’