AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೊಮ್ಯಾಟೋಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​​: ದುಡ್ಡು ಕೊಟ್ರೂ ಸಿಗ್ತಿಲ್ಲ ನುಗ್ಗೇಕಾಯಿ!

ಹವಾಮಾನ ವೈಪರೀತ್ಯದಿಂದಾಗಿ ಇಳುವರಿ ಕಡಿಮೆಯಾದ ಪರಿಣಾಮ ವಿವಿಧ ತರಕಾರಿಗಳ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಕೋಲಾರದ ಏಷ್ಯಾದ ಅತಿದೊಡ್ಡ ಟೊಮ್ಯಾಟೋ ಮಾರುಕಟ್ಟೆಯಲ್ಲಿಯೇ ಪೂರೈಕೆ ಕೊರತೆ ಎದುರಾಗಿದೆ. 15 ಕೆಜಿ ಟೊಮ್ಯಾಟೋ ಬಾಕ್ಸ್ ಬೆಲೆ ದುಪ್ಪಟ್ಟಾಗಿದ್ರೆ, ಕೆಲ ತರಕಾರಿಗಳು ಮಾರುಕಟ್ಟೆಯಿಂದಲೇ ನಾಪತ್ತೆಯಾಗಿವೆ. ಹಣ ಕೊಡ್ತೀವಿ ಎಂದರೂ ಬೇಕಾದ ತರಕಾರಿ ಮಾತ್ರ ಸಿಗುತ್ತಿಲ್ಲ.

ಟೊಮ್ಯಾಟೋಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​​: ದುಡ್ಡು ಕೊಟ್ರೂ ಸಿಗ್ತಿಲ್ಲ ನುಗ್ಗೇಕಾಯಿ!
ತರಕಾರಿ ಬೆಲೆ ಗಗನಕ್ಕೆ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Dec 03, 2025 | 7:06 PM

Share

ಕೋಲಾರ, ಡಿಸೆಂಬರ್​​ 03: ಹವಾಮಾನ ವೈಪರೀತ್ಯದ ಕಾರಣ ವಿವಿಧ ತರಕಾರಿಗಳ ಬೆಳೆಯ ಇಳುವರಿಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಆದ್ರೆ ಬೇಡಿಕೆ ಮಾತ್ರ ಹೆಚ್ಚಿರುವ ಕಾರಣಕ್ಕೆ ಟೊಮ್ಯಾಟೋ ಸೇರಿ ಹಲವು ತರಕಾರಿಗಳ ಬೆಲೆ ಗಗನಕ್ಕೇರಿದ್ದರೆ, ಇನ್ನು ಕೆಲವು ಮಾರುಕಟ್ಟೆಯಿಂದಲೇ ನಾಪತ್ತೆಯಾಗಿವೆ. ಏಷ್ಯಾದಲ್ಲೇ ಅತಿ ದೊಡ್ಡ ಟೊಮ್ಯಾಟೋ ಮಾರುಕಟ್ಟೆ ಎಂದು ಕರೆಸುಕೊಳ್ಳುವ ಕೋಲಾರ ಎಪಿಎಂಸಿ ಮಾರ್ಕೆಟ್​​ನಲ್ಲಿಯೇ ಪೂರೈಕೆಯ ಅಭಾವ ಕಂಡುಬಂದಿದೆ.

ಬಾಕ್ಸ್​​ ಟೊಮ್ಯಾಟೋ ಬೆಲೆ 600-800 ರೂ.

ಮಾರ್ಕೆಟ್​​ನಲ್ಲಿ ಟೊಮ್ಯಾಟೋಗೆ ಭಾರಿ ಡಿಮ್ಯಾಂಡ್​​ ಬಂದಿದ್ದು, 15 ಕೆಜಿ ತೂಕದ ಒಂದು ಬಾಕ್ಸ್​ 600-800 ರೂಪಾಯಿಗೆ ಮಾರಾಟವಾಗುತ್ತಿದೆ. ಮೊನ್ನೆ ಮೊನ್ನೆವರೆಗೂ ಬಾಕ್ಸ್​​ ಟೊಮ್ಯಾಟೋ ದರ 150-200 ರೂ. ಇತ್ತು. ಟೊಮ್ಯಾಟೋ ಹೆಚ್ಚಾಗಿ ಬೆಳೆಯುವ ರಾಜ್ಯಗಳಾದ ಮಾಹಾರಾಷ್ಟ್ರ, ತಮಿಳುನಾಡು, ಉತ್ತರ ಪ್ರದೇಶ ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಉತ್ಪಾದನೆ ಕಡಿಮೆಯಾಗಿದೆ. ಹೀಗಾಗಿ ಹೊರ ರಾಜ್ಯಗಳಲ್ಲೂ ಟೊಮ್ಯಾಟೋಗೆ ಬೇಡಿಕೆ ಹೆಚ್ಚಿದೆ. ಕೋಲಾರದ ಎಪಿಎಂಸಿ ಮಾರುಕಟ್ಟೆಗೆ ಪಕ್ಕದ ಆಂಧ್ರ ಪ್ರದೇಶ ಹಾಗೂ ತಮಿಳುನಾಡು ರಾಜ್ಯದ ಗಡಿ ಭಾಗಗಳಿಂದ ಟೊಮ್ಯಾಟೋ ಸರಬರಾಜಾಗುತ್ತಿದೆ. ಜೊತೆಗೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ಮಡಿಕೇರಿ, ಮಂಡ್ಯ, ಚಾಮರಾಜನಗರ, ಸೇರಿದಂತೆ ಹೊರ ಜಿಲ್ಲೆಗಳ ಟೊಮ್ಯಾಟೋಗಳೂ ಲಗ್ಗೆ ಇಟ್ಟಿವೆ.

ಇದನ್ನೂ ಓದಿ: ಥರಗುಟ್ಟುವ ಚಳಿ ನಡುವೆ ಜನರಿಗೆ ತರಕಾರಿ ಬೆಲೆ ಏರಿಕೆ ಬಿಸಿ; ಯಾವುದರ ದರ ಎಷ್ಟಿದೆ?

ಮಳೆಯಿಂದ ನುಗ್ಗೇಕಾಯಿ ಬೆಳೆಗೆ ಹೊಡೆತ

ಇನ್ನು ನುಗ್ಗೇಕಾಯಿ ಹೆಚ್ಚಾಗಿ ಬೆಳೆಯುವ ಪ್ರದೇಶವಾದ ತಮಿಳುನಾಡಿನಲ್ಲಿಯೂ ವರುಣ ಅಬ್ಬರ ಮತ್ತು ಚಂಡಮಾರುತದ ಕಾರಣ ಬೆಳೆ ನೆಲ ಕಚ್ಚಿದೆ. ನಿರೀಕ್ಷಿತ ಮಟ್ಟದ ಬೆಳೆ ಮಾರುಕಟ್ಟೆಗೆ ಬಾರದ ಕಾರಣ ಇದಕ್ಕೂ ಬೇಡಿಕೆ ಹೆಚ್ಚಿದೆ. ಬೆಲೆಯಲ್ಲೂ ಗಣನೀಯ ಏರಿಕೆಯಾಗಿದೆ. ಅಲ್ಲದೆ, ಮಾರುಕಟ್ಟೆಯಲ್ಲಿ ನುಗ್ಗೇಕಾಯಿ ಸಿಗೋದೆ ಕಷ್ಟ ಎಂಬ ಸ್ಥಿತಿ ಉದ್ಭವಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ದರ್ಶನ್ ಅರ್ಜಿ
‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ದರ್ಶನ್ ಅರ್ಜಿ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ವಿನೋದ್
‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ವಿನೋದ್
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?