AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೊಮ್ಯಾಟೋಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​​: ದುಡ್ಡು ಕೊಟ್ರೂ ಸಿಗ್ತಿಲ್ಲ ನುಗ್ಗೇಕಾಯಿ!

ಹವಾಮಾನ ವೈಪರೀತ್ಯದಿಂದಾಗಿ ಇಳುವರಿ ಕಡಿಮೆಯಾದ ಪರಿಣಾಮ ವಿವಿಧ ತರಕಾರಿಗಳ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಕೋಲಾರದ ಏಷ್ಯಾದ ಅತಿದೊಡ್ಡ ಟೊಮ್ಯಾಟೋ ಮಾರುಕಟ್ಟೆಯಲ್ಲಿಯೇ ಪೂರೈಕೆ ಕೊರತೆ ಎದುರಾಗಿದೆ. 15 ಕೆಜಿ ಟೊಮ್ಯಾಟೋ ಬಾಕ್ಸ್ ಬೆಲೆ ದುಪ್ಪಟ್ಟಾಗಿದ್ರೆ, ಕೆಲ ತರಕಾರಿಗಳು ಮಾರುಕಟ್ಟೆಯಿಂದಲೇ ನಾಪತ್ತೆಯಾಗಿವೆ. ಹಣ ಕೊಡ್ತೀವಿ ಎಂದರೂ ಬೇಕಾದ ತರಕಾರಿ ಮಾತ್ರ ಸಿಗುತ್ತಿಲ್ಲ.

ಟೊಮ್ಯಾಟೋಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​​: ದುಡ್ಡು ಕೊಟ್ರೂ ಸಿಗ್ತಿಲ್ಲ ನುಗ್ಗೇಕಾಯಿ!
ತರಕಾರಿ ಬೆಲೆ ಗಗನಕ್ಕೆ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Dec 03, 2025 | 7:06 PM

Share

ಕೋಲಾರ, ಡಿಸೆಂಬರ್​​ 03: ಹವಾಮಾನ ವೈಪರೀತ್ಯದ ಕಾರಣ ವಿವಿಧ ತರಕಾರಿಗಳ ಬೆಳೆಯ ಇಳುವರಿಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಆದ್ರೆ ಬೇಡಿಕೆ ಮಾತ್ರ ಹೆಚ್ಚಿರುವ ಕಾರಣಕ್ಕೆ ಟೊಮ್ಯಾಟೋ ಸೇರಿ ಹಲವು ತರಕಾರಿಗಳ ಬೆಲೆ ಗಗನಕ್ಕೇರಿದ್ದರೆ, ಇನ್ನು ಕೆಲವು ಮಾರುಕಟ್ಟೆಯಿಂದಲೇ ನಾಪತ್ತೆಯಾಗಿವೆ. ಏಷ್ಯಾದಲ್ಲೇ ಅತಿ ದೊಡ್ಡ ಟೊಮ್ಯಾಟೋ ಮಾರುಕಟ್ಟೆ ಎಂದು ಕರೆಸುಕೊಳ್ಳುವ ಕೋಲಾರ ಎಪಿಎಂಸಿ ಮಾರ್ಕೆಟ್​​ನಲ್ಲಿಯೇ ಪೂರೈಕೆಯ ಅಭಾವ ಕಂಡುಬಂದಿದೆ.

ಬಾಕ್ಸ್​​ ಟೊಮ್ಯಾಟೋ ಬೆಲೆ 600-800 ರೂ.

ಮಾರ್ಕೆಟ್​​ನಲ್ಲಿ ಟೊಮ್ಯಾಟೋಗೆ ಭಾರಿ ಡಿಮ್ಯಾಂಡ್​​ ಬಂದಿದ್ದು, 15 ಕೆಜಿ ತೂಕದ ಒಂದು ಬಾಕ್ಸ್​ 600-800 ರೂಪಾಯಿಗೆ ಮಾರಾಟವಾಗುತ್ತಿದೆ. ಮೊನ್ನೆ ಮೊನ್ನೆವರೆಗೂ ಬಾಕ್ಸ್​​ ಟೊಮ್ಯಾಟೋ ದರ 150-200 ರೂ. ಇತ್ತು. ಟೊಮ್ಯಾಟೋ ಹೆಚ್ಚಾಗಿ ಬೆಳೆಯುವ ರಾಜ್ಯಗಳಾದ ಮಾಹಾರಾಷ್ಟ್ರ, ತಮಿಳುನಾಡು, ಉತ್ತರ ಪ್ರದೇಶ ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಉತ್ಪಾದನೆ ಕಡಿಮೆಯಾಗಿದೆ. ಹೀಗಾಗಿ ಹೊರ ರಾಜ್ಯಗಳಲ್ಲೂ ಟೊಮ್ಯಾಟೋಗೆ ಬೇಡಿಕೆ ಹೆಚ್ಚಿದೆ. ಕೋಲಾರದ ಎಪಿಎಂಸಿ ಮಾರುಕಟ್ಟೆಗೆ ಪಕ್ಕದ ಆಂಧ್ರ ಪ್ರದೇಶ ಹಾಗೂ ತಮಿಳುನಾಡು ರಾಜ್ಯದ ಗಡಿ ಭಾಗಗಳಿಂದ ಟೊಮ್ಯಾಟೋ ಸರಬರಾಜಾಗುತ್ತಿದೆ. ಜೊತೆಗೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ಮಡಿಕೇರಿ, ಮಂಡ್ಯ, ಚಾಮರಾಜನಗರ, ಸೇರಿದಂತೆ ಹೊರ ಜಿಲ್ಲೆಗಳ ಟೊಮ್ಯಾಟೋಗಳೂ ಲಗ್ಗೆ ಇಟ್ಟಿವೆ.

ಇದನ್ನೂ ಓದಿ: ಥರಗುಟ್ಟುವ ಚಳಿ ನಡುವೆ ಜನರಿಗೆ ತರಕಾರಿ ಬೆಲೆ ಏರಿಕೆ ಬಿಸಿ; ಯಾವುದರ ದರ ಎಷ್ಟಿದೆ?

ಮಳೆಯಿಂದ ನುಗ್ಗೇಕಾಯಿ ಬೆಳೆಗೆ ಹೊಡೆತ

ಇನ್ನು ನುಗ್ಗೇಕಾಯಿ ಹೆಚ್ಚಾಗಿ ಬೆಳೆಯುವ ಪ್ರದೇಶವಾದ ತಮಿಳುನಾಡಿನಲ್ಲಿಯೂ ವರುಣ ಅಬ್ಬರ ಮತ್ತು ಚಂಡಮಾರುತದ ಕಾರಣ ಬೆಳೆ ನೆಲ ಕಚ್ಚಿದೆ. ನಿರೀಕ್ಷಿತ ಮಟ್ಟದ ಬೆಳೆ ಮಾರುಕಟ್ಟೆಗೆ ಬಾರದ ಕಾರಣ ಇದಕ್ಕೂ ಬೇಡಿಕೆ ಹೆಚ್ಚಿದೆ. ಬೆಲೆಯಲ್ಲೂ ಗಣನೀಯ ಏರಿಕೆಯಾಗಿದೆ. ಅಲ್ಲದೆ, ಮಾರುಕಟ್ಟೆಯಲ್ಲಿ ನುಗ್ಗೇಕಾಯಿ ಸಿಗೋದೆ ಕಷ್ಟ ಎಂಬ ಸ್ಥಿತಿ ಉದ್ಭವಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK