AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪು ಸುಂದರಿ ಟೊಮ್ಯಾಟೋ ಬೆಲೆ ಕಳೆದುಕೊಳ್ಳುತ್ತಿದೆ! ಕಾರಣವೇನು ಗೊತ್ತಾ?

ಇತ್ತೀಚಿನ ದಿನಗಳಲ್ಲಿ ಟೊಮ್ಯಾಟೋ ಬೆಲೆ ನೆಲಕಚ್ಚುತ್ತಿದ್ದು ಇಂದೂ ಮತ್ತೆ ಕುಸಿತ ಕಂಡಿದೆ. 15 ಕೆಜಿ ಟೊಮ್ಯಾಟೋ ಬಾಕ್ಸ್ 500 ರಿಂದ 800 ರೂ. ಗೆ ಹರಾಜು ಆಗುತ್ತಿದೆ. ಜಸ್ಟ್​ ವಾರದ ಹಿಂದೆ 15 ಕೆಜಿ ಬಾಕ್ಸ್ ಟೊಮ್ಯಾಟೊ ದರ 2,500 ರೂಪಾಯಿಯ ಗಡಿ ದಾಟಿತ್ತು.

ಕೆಂಪು ಸುಂದರಿ ಟೊಮ್ಯಾಟೋ ಬೆಲೆ ಕಳೆದುಕೊಳ್ಳುತ್ತಿದೆ! ಕಾರಣವೇನು ಗೊತ್ತಾ?
ಕೆಂಪು ಸುಂದರಿ ಟೊಮ್ಯಾಟೋ ಬೆಲೆ ಕಳೆದುಕೊಳ್ಳುತ್ತಿದೆ!
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Aug 11, 2023 | 11:16 AM

Share

ಕೋಲಾರ, ಆಗಸ್ಟ್​ 11: ದೇಶದ ಸಮಸ್ತ ಗೃಹಿಣಿಯರ ಕೆಂಗಣ್ಣಿಗೆ ಗುರಿಯಾಗಿದ್ದ ಕೆಂಪು ಸುಂದರಿ ಟೊಮ್ಯಾಟೋ (Kolar Tomato) ತನ್ನ ಹೊಳಪು ಕಳೆದುಕೊಳ್ಳುತ್ತಿದೆ. ರಾಷ್ಟ್ರದ ರಾಜಧಾನಿ ದಿಲ್ಲಿಯಲ್ಲಿ ಬಹುತೇಕ ತ್ರಿಬಲ್ ಸೆಂಚುರಿ ಬಾರಿಸುವ ಹವಣಿಕೆಯಲ್ಲಿದ್ದ ಟೊಮ್ಯಾಟೋ, ಬೆಲೆ ಕಳೆದುಕೊಳ್ಳುತ್ತಿದೆ. ಇದರಿಂದ ಮಹಿಳೆಯರು ಅಬ್ಬ ಸದ್ಯ ಎಂದು ಸ್ವಲ್ಪಮಟ್ಟಿಗೆ ನಿಟ್ಟುಸಿರುಬಿಟ್ಟಿದ್ದಾರೆ. ಟೊಮ್ಯಾಟೋ ತವರೂರು ಕೋಲಾರದ ಎಪಿಎಂಸಿ (Kolar APMC) ಮಾರುಕಟ್ಟೆಯಲ್ಲಿ ಟೊಮ್ಯಾಟೋ ಬೆಲೆ (Tomato Price) ಇಂದು ಲಕ್ಷ್ಮಿ ದೇವಿಯ ವಾರವಾದ ಶುಕ್ರವಾರ ಮತ್ತೆ ಕುಸಿತ ಕಂಡಿದೆ.

ಇತ್ತೀಚಿನ ದಿನಗಳಲ್ಲಿ ಟೊಮ್ಯಾಟೋ ಬೆಲೆ ನೆಲಕಚ್ಚುತ್ತಿದ್ದು ಇಂದೂ ಮತ್ತೆ ಕುಸಿತ ಕಂಡಿದೆ. 15 ಕೆಜಿ ಟೊಮ್ಯಾಟೋ ಬಾಕ್ಸ್ 500 ರಿಂದ 800 ರೂ. ಗೆ ಹರಾಜು ಆಗುತ್ತಿದೆ. ಜಸ್ಟ್​ ವಾರದ ಹಿಂದೆ 15 ಕೆಜಿ ಬಾಕ್ಸ್ ಟೊಮ್ಯಾಟೊ ದರ 2,500 ರೂಪಾಯಿಯ ಗಡಿ ದಾಟಿತ್ತು.

ಇದನ್ನೂ ಓದಿ:  ಪೆಟ್ರೋಲ್​ಗಿಂತ ದುಬಾರಿಯಾದ ಟೊಮೆಟೋ ಬೆಲೆ ಯಾವಾಗ ಇಳಿಯುತ್ತೆ? ತಜ್ಞರು ಹೇಳೋದೇನು? ಇಲ್ಲಿದೆ ಡೀಟೇಲ್ಸ್

ನೆಲಕಚ್ಚುತ್ತಿದೆ ಟೊಮ್ಯಾಟೋ ಬೆಲೆ! ಕಾರಣವೇನು ಗೊತ್ತಾ?

ಈಗ ಮತ್ತೆ ಮಳೆ ಕಡಿಮೆಯಾಗಿದ್ದು ಹಾಗೂ ಟೊಮ್ಯಾಟೊ ಪೂರೈಕೆ ಹೆಚ್ಚಾದ ಹಿನ್ನೆಲೆ ಬೆಲೆ ಕುಸಿಯುತ್ತಿದೆ. ದುಬಾರಿ ಕೆಂಪು ಸುಂದರಿಯನ್ನು ಅಡುಗೆ ಮನೆಯೊಳಕ್ಕೆ ಬಿಟ್ಟುಕೊಳ್ಳಲು ಹಿಂದುಮುಂದು ನೋಡುತ್ತಿದ್ದ ಗೃಹಿಣಿಯರು ಈಗ ನಿಧಾನಕ್ಕೆ ಟೊಮ್ಯಾಟೋ ತರುವುದಕ್ಕೆ ಮನಸು ಮಾಡುತ್ತಿದ್ದಾರೆ. ಅದಕು ಇದುಕು ಎಲ್ಲದಕೂ ಟೊಮ್ಯಾಟೊ ಬಳಸುವ ಮನಸು ಮಾಡುತ್ತಿದ್ದಾರೆ! ಇನ್ನೂ ಸಮಾಧಾನಕಾರ ಸಂಗತಿ ಏನೆಂದರೆ, ಇನ್ನೆರಡು ದಿನದಲ್ಲಿ ಟೊಮ್ಯಾಟೊ ಬೆಲೆ ಮತ್ತಷ್ಟು ಕುಸಿತ ಕಾಣಲಿದೆ ಎಂದು ವರ್ತಕರು ಅಂದಾಜಿಸಿದ್ದಾರೆ.

ಕೋಲಾರ ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:58 am, Fri, 11 August 23

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?