AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato Price: ಟೊಮೆಟೋ ಬೆಲೆ ದಿಢೀರ್ ಕುಸಿತ, ಕೋಲಾರ ರೈತರಿಗೆ ಕೈಕೊಟ್ಟ ಕೆಂಪು ಸುಂದರಿ

ಟೊಮೆಟೋ ಬೆಲೆ ಕುಸಿತ: ಕೋಲಾರ ಜಿಲ್ಲೆಯಲ್ಲಿ ಕಳೆದ ಹತ್ತು-ಹದಿನೈದು ದಿನಗಳಿಂದ ಸುರಿಯುತ್ತಿರುವ ಮಳೆ ಹಾಗೂ ವಾತಾವರಣ ಏರುಪೇರಿನಿಂದಾಗಿ ಟೊಮೆಟೋ ಬೆಲೆ ದಿಢೀರ್ ಕುಸಿತ ಕಂಡಿದೆ. ಹದಿನೈದು ದಿನಗಳ ಹಿಂದಷ್ಟೇ ಟೊಮೆಟೋ ದರ ಭಾರಿ ಏರಿಕೆಯಾಗಿ ಸುದ್ದಿಯಾಗಿತ್ತು. ಈಗ ಬೆಲೆ ಕುಸಿತದಿಂದ ರೈತರ ಮುಖದಲ್ಲಿ ಮೂಡಿದ್ದ ಸಂತಸ ಕುಂದುವಂತಾಗಿದೆ.

Tomato Price: ಟೊಮೆಟೋ ಬೆಲೆ ದಿಢೀರ್ ಕುಸಿತ, ಕೋಲಾರ ರೈತರಿಗೆ ಕೈಕೊಟ್ಟ ಕೆಂಪು ಸುಂದರಿ
ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೆಟೋ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Aug 31, 2025 | 5:34 PM

Share

ಕೋಲಾರ, ಆಗಸ್ಟ್ 31: ಒಂದೆಡೆ ಮಾರುಕಟ್ಟೆಯಲ್ಲಿ ಕೆಂಪು ಸುಂದರಿ ಟೊಮೆಟೋ (Tomato) ರಾಶಿರಾಶಿ ಬಿದ್ದಿದ್ದರೆ, ಮತ್ತೊಂದೆಡೆ ಅತಿ ಕಡಿಮೆ ಬೆಲೆಗೆ (150 ರಿಂದ 200 ರೂ.) ಹರಾಜಾಗುತ್ತಿದೆ. ಇನ್ನೊಂದೆಡೆ, ಮಳೆಯಿಂದ ಹಾಳಾಗಿರುವ ಟೊಮೆಟೋ. ಕೋಲಾರದ (Kolar) ಎಪಿಎಂಸಿ ಮಾರುಕಟ್ಟೆಯಲ್ಲೀಗ ಈ ದೃಶ್ಯ ಸಾಮಾನ್ಯವಾಗಿದೆ. ಏಷ್ಯಾದಲ್ಲೇ ಎರಡನೇ ಅತಿ ದೊಡ್ಡ ಟೊಮೆಟೋ ಮಾರುಕಟ್ಟೆ ಎಂಬ ಹೆಗ್ಗಳಿಕೆ ಪಡೆದಿರುವ ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕಳೆದ ಹತ್ತು ಹದಿನೈದು ದಿನಗಳ ಹಿಂದೆ ಬಾಕ್ಸ್ ಟೊಮೆಟೋ ದರ 700-800 ರೂ.ವರೆ ಇತ್ತು. ಆದರೆ ಕೇವಲ ಎರಡು ಮೂರು ದಿನಗಳಿಂದ ಈಗ ಬೆಲೆ ದಿಢೀರ್ ಕುಸಿತ ಕಂಡಿದೆ. 15 ಕೆ.ಜಿ ಟೊಮೆಟೋ ಬಾಕ್ಸ್ ಕೇವಲ 150 ರಿಂದ 200 ರೂಪಾಯಿಗೆ ಹರಾಜಾಗುತ್ತಿದೆ.

ಹದಿನೈದು ದಿನಗಳ ಹಿಂದಷ್ಟೇ ಕೆಂಪು ಸುಂದರಿ ಬೆಲೆ ಏರಿಕೆಯಾಗಿತ್ತು. ಇದು ಸಹಜವಾಗಿಯೇ ಜಿಲ್ಲೆಯ ರೈತರಲ್ಲಿ ಮತ್ತು ವರ್ತಕರಲ್ಲಿ ಸಂತಸ ಮೂಡಿಸಿತ್ತು. ಆದರೆ ಕಳೆದ ಹದಿನೈದು ದಿನಗಳಿಂದ ವಾತಾವರಣದಲ್ಲಿನ ಏರುಪೇರು, ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದ ಗುಣಮಟ್ಟ ಕಳೆದುಕೊಂಡ ಟೊಮೆಟೋಗೆ ಬೆಲೆ ಇಲ್ಲದಂತಾಗಿದೆ.

ಹೊರ ರಾಜ್ಯಗಳಿಂದ ಟೊಮೆಟೋಗೆ ಹೆಚ್ಚಿದ ಬೇಡಿಕೆ: ಗುಣಮಟ್ಟ ಕುಸಿತದಿಂದ ಬೆಲೆ ಸಿಗದ ಸ್ಥಿತಿ

ಹೊರ ರಾಜ್ಯಗಳಲ್ಲಿ, ಅದರಲ್ಲೂ ಉತ್ತರ ಭಾರತದ ರಾಜ್ಯಗಳಾದ ರಾಜಸ್ಥಾನ, ಉತ್ತರಪ್ರದೇಶ, ಹರಿಯಾಣ, ದೆಹಲಿ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಟೊಮೆಟೋಗೆ ಬೇಡಿಕೆ ಇದೆ. ಆದರೆ ಮಳೆಯಿಂದಾಗಿ ಗುಣಮಟ್ಟ ಇಲ್ಲದ ಕಾರಣ ಟೊಮೆಟೋಗೆಗೆ ಬೆಲೆ ಇಲ್ಲದೆ 150-200 ರೂಪಾಯಿಗೆ ಬಿಕರಿಯಾಗುತ್ತಿದೆ. ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳಿವೆ. ಹಾಗಾಗಿ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡು ಟೊಮೆಟೋಗೆ ಬೆಳೆದಿದ್ದ ರೈತರಿಗೆ ಸದ್ಯ ನಿರಾಸೆಯಾಗಿದೆ. ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿದ್ದ ಟೊಮೆಟೋಗೆ ಬೆಲೆ ಕುಸಿತದಿಂದ ರೈತ ನಷ್ಟಕ್ಕೆ ಸಿಲುಕಿದ್ದಾನೆ.

ರೈತರಿಗೆ ಬೆಲೆ ಜೊತೆ ಕೈಕೊಟ್ಟ ಟೊಮೆಟೋ ಫಸಲು

ಇನ್ನು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಈ ಸೀಸನ್​ನಲ್ಲಿ ಅತಿ ಹೆಚ್ಚು ಟೊಮೆಟೋಗೆ ಬೆಳೆಯುತ್ತಾರೆ. ಆದರೆ ಇತ್ತೀಚೆಗೆ ವಾತಾವರಣದಲ್ಲಿನ ಏರುಪೇರು, ಮಳೆ ಹಾಗೂ ರೋಗಬಾಧೆಯಿಂದಾಗಿ ಟೊಮೆಟೋ ಬೆಳೆ ನಿರೀಕ್ಷಿತ ಮಟ್ಟದಲ್ಲಿ ಫಸಲು ಬಂದಿಲ್ಲ. ಇನ್ನು ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಕಳೆದ ವರ್​ಷ ಇದೇ ತಿಂಗಳಲ್ಲಿ ಟೊಮೆಟೋಗೆ ಈಗಿರುವ ಬೆಲೆಗಿಂತ ದುಪ್ಪಟ್ಟು ದರ ಇತ್ತು. ಅದರಂತೆ ಹದಿನೈದು ಕೆಜಿಯ ಬಾಕ್ಸ್ ಟೊಮೆಟೋಗೆ 400 ರಿಂದ 600 ರೂಪಾಯಿಗೆ ಮಾರಾಟವಾಗುತ್ತಿತ್ತು. ಅಷ್ಟೇ ಪ್ರಮಾಣದಲ್ಲಿ ಆವಕ ಕೂಡಾ ಇತ್ತು. ಕಳೆದ ವರ್ಷ ಈ ಅವದಿಯಲ್ಲಿ ದಿನಕ್ಕೆ 25 ರಿಂದ 30 ಸಾವಿರ ಕ್ವಿಂಟಾಲ್ ಟೊಮೆಟೋ ಮಾರುಕಟ್ಟೆಗೆ ಬರುತ್ತಿತ್ತು. ಅದರೆ, ಈವರ್ಷ ಅದರ ಅರ್ಧದಷ್ಟು ಅಂದರೆ ಕೇವಲ 10 ರಿಂದ 15 ಸಾವಿರ ಕ್ವಿಂಟಾಲ್​ ಮಾತ್ರ ಮಾರುಕಟ್ಟೆಗೆ ಬರುತ್ತಿದೆ.

ಇದನ್ನೂ ಓದಿ: ಶಿಫಾರಸ್ಸಿನ ಮೇರೆಗೆ ವರ್ಗಾವಣೆ ಮಾಡುವುದು ತಪ್ಪಲ್ಲ: ತಹಶೀಲ್ದಾರ್​​​ಗೆ ಹೈಕೋರ್ಟ್ ಪಾಠ

ಒಟ್ಟಾರೆ ಕೆಂಪು ಸುಂದರಿ, ಕಿಚನ್ ಕ್ವೀನ್ ಎಂದೆಲ್ಲ ಹೆಸರು ಪಡೆದಿರುವ ಟೊಮೆಟೋ ತನ್ನ ಬೆಲೆಯ ಏರಿಳಿತದಿಂದ ರೈತರ ಉಸಿರು ಕೂಡ ಏರಿಳಿಯುವಂತೆ ಮಾಡುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಮಳೆಯಿಂದಾಗಿ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡು, ಸೀಸನ್​ ಎಂದು ಟೊಮೆಟೋ ಬೆಳೆದಿದ್ದ ರೈತರು ಮಳೆಯಿಂದ ತೀವ್ರ ನಷ್ಟಕ್ಕೆ ಸಿಲುಕಿರುವುದಂತೂ ಸುಳ್ಳಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?