AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನದಿಂದ ದಿನಕ್ಕೆ ಕುಸಿಯುತ್ತಿರುವ ಟೊಮೆಟೊ ಬೆಲೆ, ಕೋಲಾರ ಎಪಿಎಂಸಿಯಲ್ಲಿ ಇಂದಿನ ದರ ಎಷ್ಟು ಗೊತ್ತಾ?

ಕಳೆದ ಎರಡು-ಮೂರು ತಿಂಗಳ ಹಿಂದೆ ಪ್ರತಿ ಕೆಜಿಗೆ 200-300 ರೂ.ವರೆಗೆ ಏರಿಕೆ ಕಂಡಿದ್ದ ಟೊಮೆಟೊ ದರ ಈಗ ಏಕಾಏಕಿ ಕುಸಿತ ಕಾಣುತ್ತಿದೆ. ಇದರಿಂದಾಗಿ ಗೃಹಣಿಯರು ಫುಲ್ ಖುಷಿ ಆಗಿದ್ದು ರೈತರಿಗೆ ನಿರಾಸೆಯಾಗಿದೆ. ಟೊಮೆಟೊ ಬೆಳೆದಿರುವ ರೈತರು ಆತಂಕಕ್ಕೊಳಗಾಗಿದ್ದಾರೆ. ಟೊಮೆಟೊ ಬೆಳೆಯಿಂದ ಕೋಟಿ ಕೋಟಿ ಲಾಭ ಮಾಡಿದ್ದ ರೈತರು ಈಗ 15-20 ರೂಗೆ ಟೊಮೆಟೊವನ್ನು ಮಾರಾಟ ಮಾಡುತ್ತಿದ್ದಾರೆ.

ದಿನದಿಂದ ದಿನಕ್ಕೆ ಕುಸಿಯುತ್ತಿರುವ ಟೊಮೆಟೊ ಬೆಲೆ, ಕೋಲಾರ ಎಪಿಎಂಸಿಯಲ್ಲಿ ಇಂದಿನ ದರ ಎಷ್ಟು ಗೊತ್ತಾ?
ಟೊಮೆಟೊ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಆಯೇಷಾ ಬಾನು|

Updated on: Sep 03, 2023 | 11:29 AM

Share

ಕೋಲಾರ, ಸೆ.03: ಕೆಜಿಗೆ 200ಕ್ಕಿಂತ ಹೆಚ್ಚು ಬೆಲೆ ಏರಿಕೆ ಕಂಡಿದ್ದ ಟೊಮೆಟೊ ದರ(Tomato Rate) ಏಕಾಏಕಿ ಕುಸಿತ ಕಾಣುತ್ತಿದೆ. ಕೋಲಾರದ APMC ಮಾರುಕಟ್ಟೆಯಲ್ಲಿ(Kolar APMC Market) 3 ತಿಂಗಳ ಹಿಂದೆ ಒಂದು ಕೆಜಿ ಟೊಮೆಟೊ ಬೆಲೆ 160 ರೂಪಾಯಿ ಇತ್ತು. ಕಳೆದ 3 ತಿಂಗಳು ಒಂದು ಬಾಕ್ಸ್ ಟೊಮೆಟೊ 2700 ರೂ.ಗೆ ಹರಾಜಾಗಿತ್ತು. ಈಗ 15 ಕೆಜಿ 1 ಬಾಕ್ಸ್ ಟೊಮೆಟೊ 150-230 ರೂ.ಗೆ ಹರಾಜಾಗುತ್ತಿದೆ. ಕೆಜಿಗೆ ಕೇವಲ 14 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕುಸಿದ ಹಿನ್ನೆಲೆ ಟೊಮೆಟೊ ದರ ಏಕಾಏಕಿ ಬೆಲೆ ಇಳಿಕೆಯಾಗಿದೆ.

ಕಳೆದ ಎರಡು-ಮೂರು ತಿಂಗಳ ಹಿಂದೆ ಪ್ರತಿ ಕೆಜಿಗೆ 200-300 ರೂ.ವರೆಗೆ ಏರಿಕೆ ಕಂಡಿದ್ದ ಟೊಮೆಟೊ ದರ ಈಗ ಏಕಾಏಕಿ ಕುಸಿತ ಕಾಣುತ್ತಿದೆ. ಇದರಿಂದಾಗಿ ಗೃಹಣಿಯರು ಫುಲ್ ಖುಷಿ ಆಗಿದ್ದು ರೈತರಿಗೆ ನಿರಾಸೆಯಾಗಿದೆ. ಟೊಮೆಟೊ ಬೆಳೆದಿರುವ ರೈತರು ಆತಂಕಕ್ಕೊಳಗಾಗಿದ್ದಾರೆ. ಟೊಮೆಟೊ ಬೆಳೆಯಿಂದ ಕೋಟಿ ಕೋಟಿ ಲಾಭ ಮಾಡಿದ್ದ ರೈತರು ಈಗ 15-20 ರೂಗೆ ಟೊಮೆಟೊವನ್ನು ಮಾರಾಟ ಮಾಡುತ್ತಿದ್ದಾರೆ. ಉತ್ತರ ಭಾರತದಲ್ಲಿ ಮಳೆಯಿಂದಾಗಿ ಟೊಮೆಟೊ ಬೆಳೆಯಲಾಗದೆ ಕೋಲಾರದ ಟೊಮೆಟೊಗಳಿಗೆ ಬೇಡಿಕೆ ಹೆಚ್ಚಾಗಿತ್ತು. ಆದ್ರೆ ಈಗ ಹವಾಮಾನ ಸರಿಯಾಗಿದ್ದು ಟೊಮೆಟೊ ಬೆಳೆಯಲಾಗುತ್ತಿದೆ. ಹೀಗಾಗಿ ಟೊಮೆಟೊ ಬೇಡಿಕೆ ಕುಸಿದಿದೆ.

ಇದನ್ನೂ ಓದಿ: Tomato Price: ಗಗನಕ್ಕೇರಿದ್ದ ಟೊಮೆಟೊ ದರ ದಿಢೀರ್ ಪಾತಾಳಕ್ಕೆ ಕುಸಿತ, ಈಗ ಎಷ್ಟಿದೆ ಬೆಲೆ?

ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೆಟೊ ದರ ಕೆಜಿಗೆ 14 ರೂ.ಗೆ ಕುಸಿದಿದೆ. ಈಗ ಬೆಂಗಳೂರಿನಲ್ಲೂ ಕೆಜಿ ಟೊಮೆಟೊ 15-20ರೂಗೆ ಮಾರಾಟವಾಗುತ್ತಿದೆ. ಉತ್ತರದ ರಾಜ್ಯಗಳಲ್ಲಿ ಟೊಮೆಟೊ ಬೇಡಿಕೆ ಕುಸಿದಿದೆ. ಹಾಗೂ  ನೆರೆಯ ನೇಪಾಳದಿಂದಲೂ ಟೊಮೆಟೊಗಳು ಆಮದಾಗುತ್ತಿವೆ. ಉತ್ತರ ಭಾರತದಲ್ಲಿ ಈಗ ಟೊಮೆಟೊ ಯಾರಿಗೂ ಬೇಡವಾಗಿದೆ. ಟೊಮೆಟೊ ಬೇಡಿಕೆಯಷ್ಟು ಲಭ್ಯವಾಗುತ್ತಿದ್ದು ಮುಂದಿನ ದಿನಗಳಲ್ಲಿ ಸಗಟು ಬೆಲೆಗಳು ಪ್ರತಿ ಕಿಲೋಗ್ರಾಂಗೆ 5 ರಿಂದ 10 ರೂ.ಗೆ ಕುಸಿಯಬಹುದು ಎಂದು ತಜ್ಞರು ಊಹಿಸಿದ್ದಾರೆ.

ಕೋಲಾರದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ