AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನದಿಂದ ದಿನಕ್ಕೆ ಕುಸಿಯುತ್ತಿರುವ ಟೊಮೆಟೊ ಬೆಲೆ, ಕೋಲಾರ ಎಪಿಎಂಸಿಯಲ್ಲಿ ಇಂದಿನ ದರ ಎಷ್ಟು ಗೊತ್ತಾ?

ಕಳೆದ ಎರಡು-ಮೂರು ತಿಂಗಳ ಹಿಂದೆ ಪ್ರತಿ ಕೆಜಿಗೆ 200-300 ರೂ.ವರೆಗೆ ಏರಿಕೆ ಕಂಡಿದ್ದ ಟೊಮೆಟೊ ದರ ಈಗ ಏಕಾಏಕಿ ಕುಸಿತ ಕಾಣುತ್ತಿದೆ. ಇದರಿಂದಾಗಿ ಗೃಹಣಿಯರು ಫುಲ್ ಖುಷಿ ಆಗಿದ್ದು ರೈತರಿಗೆ ನಿರಾಸೆಯಾಗಿದೆ. ಟೊಮೆಟೊ ಬೆಳೆದಿರುವ ರೈತರು ಆತಂಕಕ್ಕೊಳಗಾಗಿದ್ದಾರೆ. ಟೊಮೆಟೊ ಬೆಳೆಯಿಂದ ಕೋಟಿ ಕೋಟಿ ಲಾಭ ಮಾಡಿದ್ದ ರೈತರು ಈಗ 15-20 ರೂಗೆ ಟೊಮೆಟೊವನ್ನು ಮಾರಾಟ ಮಾಡುತ್ತಿದ್ದಾರೆ.

ದಿನದಿಂದ ದಿನಕ್ಕೆ ಕುಸಿಯುತ್ತಿರುವ ಟೊಮೆಟೊ ಬೆಲೆ, ಕೋಲಾರ ಎಪಿಎಂಸಿಯಲ್ಲಿ ಇಂದಿನ ದರ ಎಷ್ಟು ಗೊತ್ತಾ?
ಟೊಮೆಟೊ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Sep 03, 2023 | 11:29 AM

Share

ಕೋಲಾರ, ಸೆ.03: ಕೆಜಿಗೆ 200ಕ್ಕಿಂತ ಹೆಚ್ಚು ಬೆಲೆ ಏರಿಕೆ ಕಂಡಿದ್ದ ಟೊಮೆಟೊ ದರ(Tomato Rate) ಏಕಾಏಕಿ ಕುಸಿತ ಕಾಣುತ್ತಿದೆ. ಕೋಲಾರದ APMC ಮಾರುಕಟ್ಟೆಯಲ್ಲಿ(Kolar APMC Market) 3 ತಿಂಗಳ ಹಿಂದೆ ಒಂದು ಕೆಜಿ ಟೊಮೆಟೊ ಬೆಲೆ 160 ರೂಪಾಯಿ ಇತ್ತು. ಕಳೆದ 3 ತಿಂಗಳು ಒಂದು ಬಾಕ್ಸ್ ಟೊಮೆಟೊ 2700 ರೂ.ಗೆ ಹರಾಜಾಗಿತ್ತು. ಈಗ 15 ಕೆಜಿ 1 ಬಾಕ್ಸ್ ಟೊಮೆಟೊ 150-230 ರೂ.ಗೆ ಹರಾಜಾಗುತ್ತಿದೆ. ಕೆಜಿಗೆ ಕೇವಲ 14 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕುಸಿದ ಹಿನ್ನೆಲೆ ಟೊಮೆಟೊ ದರ ಏಕಾಏಕಿ ಬೆಲೆ ಇಳಿಕೆಯಾಗಿದೆ.

ಕಳೆದ ಎರಡು-ಮೂರು ತಿಂಗಳ ಹಿಂದೆ ಪ್ರತಿ ಕೆಜಿಗೆ 200-300 ರೂ.ವರೆಗೆ ಏರಿಕೆ ಕಂಡಿದ್ದ ಟೊಮೆಟೊ ದರ ಈಗ ಏಕಾಏಕಿ ಕುಸಿತ ಕಾಣುತ್ತಿದೆ. ಇದರಿಂದಾಗಿ ಗೃಹಣಿಯರು ಫುಲ್ ಖುಷಿ ಆಗಿದ್ದು ರೈತರಿಗೆ ನಿರಾಸೆಯಾಗಿದೆ. ಟೊಮೆಟೊ ಬೆಳೆದಿರುವ ರೈತರು ಆತಂಕಕ್ಕೊಳಗಾಗಿದ್ದಾರೆ. ಟೊಮೆಟೊ ಬೆಳೆಯಿಂದ ಕೋಟಿ ಕೋಟಿ ಲಾಭ ಮಾಡಿದ್ದ ರೈತರು ಈಗ 15-20 ರೂಗೆ ಟೊಮೆಟೊವನ್ನು ಮಾರಾಟ ಮಾಡುತ್ತಿದ್ದಾರೆ. ಉತ್ತರ ಭಾರತದಲ್ಲಿ ಮಳೆಯಿಂದಾಗಿ ಟೊಮೆಟೊ ಬೆಳೆಯಲಾಗದೆ ಕೋಲಾರದ ಟೊಮೆಟೊಗಳಿಗೆ ಬೇಡಿಕೆ ಹೆಚ್ಚಾಗಿತ್ತು. ಆದ್ರೆ ಈಗ ಹವಾಮಾನ ಸರಿಯಾಗಿದ್ದು ಟೊಮೆಟೊ ಬೆಳೆಯಲಾಗುತ್ತಿದೆ. ಹೀಗಾಗಿ ಟೊಮೆಟೊ ಬೇಡಿಕೆ ಕುಸಿದಿದೆ.

ಇದನ್ನೂ ಓದಿ: Tomato Price: ಗಗನಕ್ಕೇರಿದ್ದ ಟೊಮೆಟೊ ದರ ದಿಢೀರ್ ಪಾತಾಳಕ್ಕೆ ಕುಸಿತ, ಈಗ ಎಷ್ಟಿದೆ ಬೆಲೆ?

ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೆಟೊ ದರ ಕೆಜಿಗೆ 14 ರೂ.ಗೆ ಕುಸಿದಿದೆ. ಈಗ ಬೆಂಗಳೂರಿನಲ್ಲೂ ಕೆಜಿ ಟೊಮೆಟೊ 15-20ರೂಗೆ ಮಾರಾಟವಾಗುತ್ತಿದೆ. ಉತ್ತರದ ರಾಜ್ಯಗಳಲ್ಲಿ ಟೊಮೆಟೊ ಬೇಡಿಕೆ ಕುಸಿದಿದೆ. ಹಾಗೂ  ನೆರೆಯ ನೇಪಾಳದಿಂದಲೂ ಟೊಮೆಟೊಗಳು ಆಮದಾಗುತ್ತಿವೆ. ಉತ್ತರ ಭಾರತದಲ್ಲಿ ಈಗ ಟೊಮೆಟೊ ಯಾರಿಗೂ ಬೇಡವಾಗಿದೆ. ಟೊಮೆಟೊ ಬೇಡಿಕೆಯಷ್ಟು ಲಭ್ಯವಾಗುತ್ತಿದ್ದು ಮುಂದಿನ ದಿನಗಳಲ್ಲಿ ಸಗಟು ಬೆಲೆಗಳು ಪ್ರತಿ ಕಿಲೋಗ್ರಾಂಗೆ 5 ರಿಂದ 10 ರೂ.ಗೆ ಕುಸಿಯಬಹುದು ಎಂದು ತಜ್ಞರು ಊಹಿಸಿದ್ದಾರೆ.

ಕೋಲಾರದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ