AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನದಿಂದ ದಿನಕ್ಕೆ ಕುಸಿಯುತ್ತಿರುವ ಟೊಮೆಟೊ ಬೆಲೆ, ಕೋಲಾರ ಎಪಿಎಂಸಿಯಲ್ಲಿ ಇಂದಿನ ದರ ಎಷ್ಟು ಗೊತ್ತಾ?

ಕಳೆದ ಎರಡು-ಮೂರು ತಿಂಗಳ ಹಿಂದೆ ಪ್ರತಿ ಕೆಜಿಗೆ 200-300 ರೂ.ವರೆಗೆ ಏರಿಕೆ ಕಂಡಿದ್ದ ಟೊಮೆಟೊ ದರ ಈಗ ಏಕಾಏಕಿ ಕುಸಿತ ಕಾಣುತ್ತಿದೆ. ಇದರಿಂದಾಗಿ ಗೃಹಣಿಯರು ಫುಲ್ ಖುಷಿ ಆಗಿದ್ದು ರೈತರಿಗೆ ನಿರಾಸೆಯಾಗಿದೆ. ಟೊಮೆಟೊ ಬೆಳೆದಿರುವ ರೈತರು ಆತಂಕಕ್ಕೊಳಗಾಗಿದ್ದಾರೆ. ಟೊಮೆಟೊ ಬೆಳೆಯಿಂದ ಕೋಟಿ ಕೋಟಿ ಲಾಭ ಮಾಡಿದ್ದ ರೈತರು ಈಗ 15-20 ರೂಗೆ ಟೊಮೆಟೊವನ್ನು ಮಾರಾಟ ಮಾಡುತ್ತಿದ್ದಾರೆ.

ದಿನದಿಂದ ದಿನಕ್ಕೆ ಕುಸಿಯುತ್ತಿರುವ ಟೊಮೆಟೊ ಬೆಲೆ, ಕೋಲಾರ ಎಪಿಎಂಸಿಯಲ್ಲಿ ಇಂದಿನ ದರ ಎಷ್ಟು ಗೊತ್ತಾ?
ಟೊಮೆಟೊ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Sep 03, 2023 | 11:29 AM

Share

ಕೋಲಾರ, ಸೆ.03: ಕೆಜಿಗೆ 200ಕ್ಕಿಂತ ಹೆಚ್ಚು ಬೆಲೆ ಏರಿಕೆ ಕಂಡಿದ್ದ ಟೊಮೆಟೊ ದರ(Tomato Rate) ಏಕಾಏಕಿ ಕುಸಿತ ಕಾಣುತ್ತಿದೆ. ಕೋಲಾರದ APMC ಮಾರುಕಟ್ಟೆಯಲ್ಲಿ(Kolar APMC Market) 3 ತಿಂಗಳ ಹಿಂದೆ ಒಂದು ಕೆಜಿ ಟೊಮೆಟೊ ಬೆಲೆ 160 ರೂಪಾಯಿ ಇತ್ತು. ಕಳೆದ 3 ತಿಂಗಳು ಒಂದು ಬಾಕ್ಸ್ ಟೊಮೆಟೊ 2700 ರೂ.ಗೆ ಹರಾಜಾಗಿತ್ತು. ಈಗ 15 ಕೆಜಿ 1 ಬಾಕ್ಸ್ ಟೊಮೆಟೊ 150-230 ರೂ.ಗೆ ಹರಾಜಾಗುತ್ತಿದೆ. ಕೆಜಿಗೆ ಕೇವಲ 14 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕುಸಿದ ಹಿನ್ನೆಲೆ ಟೊಮೆಟೊ ದರ ಏಕಾಏಕಿ ಬೆಲೆ ಇಳಿಕೆಯಾಗಿದೆ.

ಕಳೆದ ಎರಡು-ಮೂರು ತಿಂಗಳ ಹಿಂದೆ ಪ್ರತಿ ಕೆಜಿಗೆ 200-300 ರೂ.ವರೆಗೆ ಏರಿಕೆ ಕಂಡಿದ್ದ ಟೊಮೆಟೊ ದರ ಈಗ ಏಕಾಏಕಿ ಕುಸಿತ ಕಾಣುತ್ತಿದೆ. ಇದರಿಂದಾಗಿ ಗೃಹಣಿಯರು ಫುಲ್ ಖುಷಿ ಆಗಿದ್ದು ರೈತರಿಗೆ ನಿರಾಸೆಯಾಗಿದೆ. ಟೊಮೆಟೊ ಬೆಳೆದಿರುವ ರೈತರು ಆತಂಕಕ್ಕೊಳಗಾಗಿದ್ದಾರೆ. ಟೊಮೆಟೊ ಬೆಳೆಯಿಂದ ಕೋಟಿ ಕೋಟಿ ಲಾಭ ಮಾಡಿದ್ದ ರೈತರು ಈಗ 15-20 ರೂಗೆ ಟೊಮೆಟೊವನ್ನು ಮಾರಾಟ ಮಾಡುತ್ತಿದ್ದಾರೆ. ಉತ್ತರ ಭಾರತದಲ್ಲಿ ಮಳೆಯಿಂದಾಗಿ ಟೊಮೆಟೊ ಬೆಳೆಯಲಾಗದೆ ಕೋಲಾರದ ಟೊಮೆಟೊಗಳಿಗೆ ಬೇಡಿಕೆ ಹೆಚ್ಚಾಗಿತ್ತು. ಆದ್ರೆ ಈಗ ಹವಾಮಾನ ಸರಿಯಾಗಿದ್ದು ಟೊಮೆಟೊ ಬೆಳೆಯಲಾಗುತ್ತಿದೆ. ಹೀಗಾಗಿ ಟೊಮೆಟೊ ಬೇಡಿಕೆ ಕುಸಿದಿದೆ.

ಇದನ್ನೂ ಓದಿ: Tomato Price: ಗಗನಕ್ಕೇರಿದ್ದ ಟೊಮೆಟೊ ದರ ದಿಢೀರ್ ಪಾತಾಳಕ್ಕೆ ಕುಸಿತ, ಈಗ ಎಷ್ಟಿದೆ ಬೆಲೆ?

ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೆಟೊ ದರ ಕೆಜಿಗೆ 14 ರೂ.ಗೆ ಕುಸಿದಿದೆ. ಈಗ ಬೆಂಗಳೂರಿನಲ್ಲೂ ಕೆಜಿ ಟೊಮೆಟೊ 15-20ರೂಗೆ ಮಾರಾಟವಾಗುತ್ತಿದೆ. ಉತ್ತರದ ರಾಜ್ಯಗಳಲ್ಲಿ ಟೊಮೆಟೊ ಬೇಡಿಕೆ ಕುಸಿದಿದೆ. ಹಾಗೂ  ನೆರೆಯ ನೇಪಾಳದಿಂದಲೂ ಟೊಮೆಟೊಗಳು ಆಮದಾಗುತ್ತಿವೆ. ಉತ್ತರ ಭಾರತದಲ್ಲಿ ಈಗ ಟೊಮೆಟೊ ಯಾರಿಗೂ ಬೇಡವಾಗಿದೆ. ಟೊಮೆಟೊ ಬೇಡಿಕೆಯಷ್ಟು ಲಭ್ಯವಾಗುತ್ತಿದ್ದು ಮುಂದಿನ ದಿನಗಳಲ್ಲಿ ಸಗಟು ಬೆಲೆಗಳು ಪ್ರತಿ ಕಿಲೋಗ್ರಾಂಗೆ 5 ರಿಂದ 10 ರೂ.ಗೆ ಕುಸಿಯಬಹುದು ಎಂದು ತಜ್ಞರು ಊಹಿಸಿದ್ದಾರೆ.

ಕೋಲಾರದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?