ದಿನದಿಂದ ದಿನಕ್ಕೆ ಕುಸಿಯುತ್ತಿರುವ ಟೊಮೆಟೊ ಬೆಲೆ, ಕೋಲಾರ ಎಪಿಎಂಸಿಯಲ್ಲಿ ಇಂದಿನ ದರ ಎಷ್ಟು ಗೊತ್ತಾ?

ಕಳೆದ ಎರಡು-ಮೂರು ತಿಂಗಳ ಹಿಂದೆ ಪ್ರತಿ ಕೆಜಿಗೆ 200-300 ರೂ.ವರೆಗೆ ಏರಿಕೆ ಕಂಡಿದ್ದ ಟೊಮೆಟೊ ದರ ಈಗ ಏಕಾಏಕಿ ಕುಸಿತ ಕಾಣುತ್ತಿದೆ. ಇದರಿಂದಾಗಿ ಗೃಹಣಿಯರು ಫುಲ್ ಖುಷಿ ಆಗಿದ್ದು ರೈತರಿಗೆ ನಿರಾಸೆಯಾಗಿದೆ. ಟೊಮೆಟೊ ಬೆಳೆದಿರುವ ರೈತರು ಆತಂಕಕ್ಕೊಳಗಾಗಿದ್ದಾರೆ. ಟೊಮೆಟೊ ಬೆಳೆಯಿಂದ ಕೋಟಿ ಕೋಟಿ ಲಾಭ ಮಾಡಿದ್ದ ರೈತರು ಈಗ 15-20 ರೂಗೆ ಟೊಮೆಟೊವನ್ನು ಮಾರಾಟ ಮಾಡುತ್ತಿದ್ದಾರೆ.

ದಿನದಿಂದ ದಿನಕ್ಕೆ ಕುಸಿಯುತ್ತಿರುವ ಟೊಮೆಟೊ ಬೆಲೆ, ಕೋಲಾರ ಎಪಿಎಂಸಿಯಲ್ಲಿ ಇಂದಿನ ದರ ಎಷ್ಟು ಗೊತ್ತಾ?
ಟೊಮೆಟೊ
Edited By: ಆಯೇಷಾ ಬಾನು

Updated on: Sep 03, 2023 | 11:29 AM

ಕೋಲಾರ, ಸೆ.03: ಕೆಜಿಗೆ 200ಕ್ಕಿಂತ ಹೆಚ್ಚು ಬೆಲೆ ಏರಿಕೆ ಕಂಡಿದ್ದ ಟೊಮೆಟೊ ದರ(Tomato Rate) ಏಕಾಏಕಿ ಕುಸಿತ ಕಾಣುತ್ತಿದೆ. ಕೋಲಾರದ APMC ಮಾರುಕಟ್ಟೆಯಲ್ಲಿ(Kolar APMC Market) 3 ತಿಂಗಳ ಹಿಂದೆ ಒಂದು ಕೆಜಿ ಟೊಮೆಟೊ ಬೆಲೆ 160 ರೂಪಾಯಿ ಇತ್ತು. ಕಳೆದ 3 ತಿಂಗಳು ಒಂದು ಬಾಕ್ಸ್ ಟೊಮೆಟೊ 2700 ರೂ.ಗೆ ಹರಾಜಾಗಿತ್ತು. ಈಗ 15 ಕೆಜಿ 1 ಬಾಕ್ಸ್ ಟೊಮೆಟೊ 150-230 ರೂ.ಗೆ ಹರಾಜಾಗುತ್ತಿದೆ. ಕೆಜಿಗೆ ಕೇವಲ 14 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕುಸಿದ ಹಿನ್ನೆಲೆ ಟೊಮೆಟೊ ದರ ಏಕಾಏಕಿ ಬೆಲೆ ಇಳಿಕೆಯಾಗಿದೆ.

ಕಳೆದ ಎರಡು-ಮೂರು ತಿಂಗಳ ಹಿಂದೆ ಪ್ರತಿ ಕೆಜಿಗೆ 200-300 ರೂ.ವರೆಗೆ ಏರಿಕೆ ಕಂಡಿದ್ದ ಟೊಮೆಟೊ ದರ ಈಗ ಏಕಾಏಕಿ ಕುಸಿತ ಕಾಣುತ್ತಿದೆ. ಇದರಿಂದಾಗಿ ಗೃಹಣಿಯರು ಫುಲ್ ಖುಷಿ ಆಗಿದ್ದು ರೈತರಿಗೆ ನಿರಾಸೆಯಾಗಿದೆ. ಟೊಮೆಟೊ ಬೆಳೆದಿರುವ ರೈತರು ಆತಂಕಕ್ಕೊಳಗಾಗಿದ್ದಾರೆ. ಟೊಮೆಟೊ ಬೆಳೆಯಿಂದ ಕೋಟಿ ಕೋಟಿ ಲಾಭ ಮಾಡಿದ್ದ ರೈತರು ಈಗ 15-20 ರೂಗೆ ಟೊಮೆಟೊವನ್ನು ಮಾರಾಟ ಮಾಡುತ್ತಿದ್ದಾರೆ. ಉತ್ತರ ಭಾರತದಲ್ಲಿ ಮಳೆಯಿಂದಾಗಿ ಟೊಮೆಟೊ ಬೆಳೆಯಲಾಗದೆ ಕೋಲಾರದ ಟೊಮೆಟೊಗಳಿಗೆ ಬೇಡಿಕೆ ಹೆಚ್ಚಾಗಿತ್ತು. ಆದ್ರೆ ಈಗ ಹವಾಮಾನ ಸರಿಯಾಗಿದ್ದು ಟೊಮೆಟೊ ಬೆಳೆಯಲಾಗುತ್ತಿದೆ. ಹೀಗಾಗಿ ಟೊಮೆಟೊ ಬೇಡಿಕೆ ಕುಸಿದಿದೆ.

ಇದನ್ನೂ ಓದಿ: Tomato Price: ಗಗನಕ್ಕೇರಿದ್ದ ಟೊಮೆಟೊ ದರ ದಿಢೀರ್ ಪಾತಾಳಕ್ಕೆ ಕುಸಿತ, ಈಗ ಎಷ್ಟಿದೆ ಬೆಲೆ?

ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೆಟೊ ದರ ಕೆಜಿಗೆ 14 ರೂ.ಗೆ ಕುಸಿದಿದೆ. ಈಗ ಬೆಂಗಳೂರಿನಲ್ಲೂ ಕೆಜಿ ಟೊಮೆಟೊ 15-20ರೂಗೆ ಮಾರಾಟವಾಗುತ್ತಿದೆ. ಉತ್ತರದ ರಾಜ್ಯಗಳಲ್ಲಿ ಟೊಮೆಟೊ ಬೇಡಿಕೆ ಕುಸಿದಿದೆ. ಹಾಗೂ  ನೆರೆಯ ನೇಪಾಳದಿಂದಲೂ ಟೊಮೆಟೊಗಳು ಆಮದಾಗುತ್ತಿವೆ. ಉತ್ತರ ಭಾರತದಲ್ಲಿ ಈಗ ಟೊಮೆಟೊ ಯಾರಿಗೂ ಬೇಡವಾಗಿದೆ. ಟೊಮೆಟೊ ಬೇಡಿಕೆಯಷ್ಟು ಲಭ್ಯವಾಗುತ್ತಿದ್ದು ಮುಂದಿನ ದಿನಗಳಲ್ಲಿ ಸಗಟು ಬೆಲೆಗಳು ಪ್ರತಿ ಕಿಲೋಗ್ರಾಂಗೆ 5 ರಿಂದ 10 ರೂ.ಗೆ ಕುಸಿಯಬಹುದು ಎಂದು ತಜ್ಞರು ಊಹಿಸಿದ್ದಾರೆ.

ಕೋಲಾರದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
Follow Us