AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಮ್ಮೆ ಡಿಮ್ಯಾಂಡ್ ಹೆಚ್ಚಿಸಿಕೊಂಡ ಕೆಂಪು ಸುಂದರಿ; ಕೋಲಾರದಲ್ಲಿ ಟೊಮೇಟೊ ಬೆಲೆ ದಿಢೀರ್ ಏರಿಕೆ

Tomato Rate Increase: ಏಷ್ಯಾದಲ್ಲಿಯೇ ಎರಡನೇ ಅತಿದೊಡ್ಡ ಟೊಮೇಟೊ ಮಾರುಕಟ್ಟೆಯಾಗಿರುವ ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೇಟೊ ದರ ಏರಿಕೆ ಕಂಡಿದೆ. ಮಳೆಯ ಎಫೆಕ್ಟ್​ನಿಂದಾಗಿ ಟೊಮೇಟೊ ಕಡಿಮೆ ರಫ್ತಾಗುತ್ತಿದ್ದು ಬೇಡಿಕೆಯಷ್ಟು ಬರುತ್ತಿಲ್ಲ, ಹೀಗಾಗಿ ಟೊಮೇಟೊ ಬೆಲೆ ಏರಿಕೆ ಕಂಡಿದೆ.

ಮತ್ತೊಮ್ಮೆ ಡಿಮ್ಯಾಂಡ್ ಹೆಚ್ಚಿಸಿಕೊಂಡ ಕೆಂಪು ಸುಂದರಿ; ಕೋಲಾರದಲ್ಲಿ ಟೊಮೇಟೊ ಬೆಲೆ ದಿಢೀರ್ ಏರಿಕೆ
ಸಾಂದರ್ಭಿಕ ಚಿತ್ರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಆಯೇಷಾ ಬಾನು|

Updated on: Jun 10, 2024 | 12:49 PM

Share

ಕೋಲಾರ, ಜೂನ್.10: ಮಿತಿಮೀರಿದ ತಾಪಮಾನ ಹಾಗೂ ಮುಂಗಾರು (Monsoon) ಮಳೆ ಚುರುಕುಗೊಳ್ಳುತ್ತಿರುವ ಹಿನ್ನಲೆ ಕೋಲಾರದಲ್ಲಿ (Kolar) ಮತ್ತೆ ಟೊಮೇಟೊ ಬೆಲೆ ಏರಿಕೆ ಕಾಣುತ್ತಿದ್ದು ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಆದರೆ ಟೊಮೇಟೊ (Tomato Rate Increase) ಬೆಲೆ ಗ್ರಾಹಕರಿಗೆ ಬೇಸರ ತಂದಿದೆ. ಮಳೆ ಹೀಗೆ ಮುಂದುವರೆದರೆ ಟೊಮೇಟೊ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಏಷ್ಯಾದಲ್ಲಿಯೇ ಎರಡನೇ ಅತಿದೊಡ್ಡ ಟೊಮೇಟೊ ಮಾರುಕಟ್ಟೆಯಾಗಿರುವ ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ಒಂದು ಕೆಜಿ ಟೊಮೇಟೊ ಬೆಲೆ 60 ರೂಪಾಯಿ ಇದೆ. ಹದಿನೈದು ರೂಪಾಯಿಗೆ ಮಾರಾಟವಾಗುತ್ತಿದ್ದ ಟೊಮೇಟೊ ಈಗ 60ರೂ ಆಗಿದೆ. ಕಳೆದ ಒಂದು ವಾರದ ಹಿಂದೆ 250 ರೂಪಾಯಿ ಇದ್ದ ಬಾಕ್ಸ್ ಟೊಮೇಟೊ ಈಗ 900 ರೂಪಾಯಿಗೆ ಮಾರಾಟವಾಗುತ್ತಿದೆ. ಕಳೆದೊಂದು ವಾರದಿಂದ ಸುರಿದ‌ ಮಳೆಯ ಎಫೆಕ್ಟ್ ಟೊಮೇಟೊ ಬೆಲೆಯಲ್ಲಿ ದಾಖಲೆಯ ಏರಿಕೆ ಕಾಣುವಂತೆ ಮಾಡಿದೆ. ಮಾರುಕಟ್ಟೆಗೆ ಬರುವ ಟೊಮೇಟೊ ಕಡಿಮೆಯಾದ ಹಿನ್ನೆಲೆ ಬೆಲೆ ಏರಿಕೆಯಾಗಿದೆ.

ವರ್ಷದ ಹಿಂದೆ ಇದೇ ರೀತಿ ಕರ್ನಾಟಕ ಸೇರಿದಮತೆ ಇಡೀ ದೇಶದಲ್ಲಿ ಟೊಮೇಟೊ ಬೆಲೆ ಗಗನಕ್ಕೆ ಏರಿಕೆತ್ತು. ಐದು, 10ರೂಗೆ ಸಿಗುತ್ತಿದ್ದ ಟೊಮೇಟೊ 200ರೂ ಕೆಜಿ ಆಗಿತ್ತು. ಸುಮಾರು ಎರಡು ತಿಂಗಳ ಕಾಲ ಟೊಮೇಟೊ ಬೆಲೆ ಕೆಜಿಗೆ 200 ರೂ. ದಾಟಿತ್ತು. ಈ ವೇಳೆ ಅನೇಕ ಟೊಮೇಟೊ ಬೆಳೆಗಾರರು ಭಾರಿ ಲಾಭ ಪಡೆದಿದ್ದರು. ಈ ಬಾರಿ ಮಳೆ ಹೆಚ್ಚಾಗಿರುವ ಕಾರಣ ರಫ್ತು ಕಡಿಮೆ ಆಗಿ ಟೊಮೇಟೊ ಬೆಲೆ ಏರಿದೆ.

ಇದನ್ನೂ ಓದಿ: ಕಳಪೆ ಟೊಮೇಟೊ ಸಸಿ ಮಾರಾಟ! ಬರಗಾಲದ ನಡುವೆ ಬೆಳೆದಿದ್ದ ಬೆಳೆ ಸಂಪೂರ್ಣ ಹಾಳು

ಇನ್ನು ಮೂರು ದಿನಗಳ ಹಿಂದೆ ಬೆಂಗಳೂರಿನಲ್ಲಿ ಟೊಮೇಟೊ ಬೆಲೆ ಕೆಜಿಗೆ 40 ರೂವರೆಗೆ ಇತ್ತು. ಆದರೆ ಈಗ ಅದು 80 ರೂ.ಗೆ ಏರಿಕೆಯಾಗಿದೆ. ಕೋಲಾರ ಸೇರಿದಂತೆ ನಾನಾ ಭಾಗಗಳಿಂದ ಬರುತ್ತಿದ್ದ ಟೊಮೇಟೊ ರಪ್ತು ಕಡಿಮೆ ಆಗಿದ್ದು ಈ ಪರಿಣಾಮ ಟೊಮೇಟೊ ದರ ಏರಿಕೆಗೆ ಮುಖ್ಯ ಕಾರಣವಾಗಿದೆ. ಬೆಂಗಳೂರು ಮಾತ್ರವಲ್ಲದೇ ಮೈಸೂರು, ಶಿವಮೊಗ್ಗ ಸೇರಿದಂತೆ ಹಲವು ಕಡೆಗಳಲ್ಲಿ ಟೊಮೇಟೊ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್