AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato: ಟೊಮೆಟೊ ತುಂಬಿಕೊಂಡು ಕೋಲಾರದಿಂದ ಹೊರಟಿದ್ದ ಲಾರಿ ನಾಪತ್ತೆ, ದೂರು ದಾಖಲು

ಜುಲೈ 27ರಂದು ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದ 21 ಲಕ್ಷ ಮೌಲ್ಯದ ಟೊಮೆಟೊ ತುಂಬಿದ್ದ ಲಾರಿ ನಾಪತ್ತೆಯಾಗಿದೆ.

Tomato: ಟೊಮೆಟೊ ತುಂಬಿಕೊಂಡು ಕೋಲಾರದಿಂದ ಹೊರಟಿದ್ದ ಲಾರಿ ನಾಪತ್ತೆ, ದೂರು ದಾಖಲು
ಟೊಮೆಟೊ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಆಯೇಷಾ ಬಾನು

Updated on:Jul 30, 2023 | 3:13 PM

ಕೋಲಾರ, ಜುಲೈ 30: ರಾಜ್ಯದಲ್ಲಿ ಟೊಮೆಟೊ ಬೆಲೆ ಆಕಾಶ ಮುಟ್ಟಿದ್ದು ಟೊಮೆಟೊ(Tomato Price Hike) ಕಳ್ಳರ ಹಾವಳಿ ಹೆಚ್ಚಾಗಿದೆ. ಹೀಗಾಗಿ ಅನೇಕ ರೈತರು ತಮ್ಮ ಜಮೀನಿಗೆ ಕಾವಲುಗಾರರನ್ನು ನೇಮಿಸಿದ್ದಾರೆ. ಸಿಸಿಟಿವಿಗಳನ್ನು ಅಳವಡಿಸಿ ಟೊಮೆಟೊ ಬೆಳೆ ಕಾಪಾಡಿಕೊಳ್ಳುತ್ತಿದ್ದಾರೆ. ಆದ್ರೆ ಕೋಲಾರದಲ್ಲಿ ಟೊಮೆಟೊ ತುಂಬಿದ ಲಾರಿ ಕಳ್ಳತನವಾಗಿದ್ದು(Tomato Theft) ರೈತ ಕಂಗಾಲಾಗಿದ್ದಾನೆ.

ಜುಲೈ 27ರಂದು ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದ 21 ಲಕ್ಷ ಮೌಲ್ಯದ ಟೊಮೆಟೊ ತುಂಬಿದ್ದ ಲಾರಿ ನಾಪತ್ತೆಯಾಗಿದೆ. ಕೋಲಾರದ ಮೆಹತ್ ಟ್ರಾನ್ಸ್​​ಪೋರ್ಟ್​ಗೆ ಸೇರಿದ ಲಾರಿ ಇದಾಗಿದ್ದು ಇದರಿಲ್ಲಿ ಎ.ಜಿ.ಟ್ರೇಡರ್ಸ್ ಸಕ್ಲೇನ್, ಹಾಗೂ ಎಸ್.ವಿ.ಟಿ ಟ್ರೇಡರ್ಸ್ ಮುನಿರಡ್ಡಿ ಎಂಬುವರಿಗೆ ಸೇರಿದ 21 ಲಕ್ಷ ಮೌಲ್ಯದ ಟೊಮೆಟೊಗಳಿದ್ದವು. ಲಾರಿ ಚಾಲಕ ಮೊಬೈಕ್​ ಸಂಪರ್ಕಕ್ಕೆ ಸಿಗುತ್ತಿಲ್ಲ. ಈ ಹಿನ್ನೆಲೆ ಮಂಡಿ ಮಾಲೀಕರು ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ಇನ್ನು ಟೊಮೆಟೊ ಬೆಲೆ ಏರಿಕೆಯಾಗಿದ್ದು ಕಳ್ಳರು ಕೆಂಪು ರಾಣಿ ಕದಿಯಲು ಹೊಂಚುಹಾಕುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯ INR ಮಂಡಿಯಲ್ಲಿ ಟೊಮೆಟೊ ಕದಿಯುವ ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳೆದ ರಾತ್ರಿ ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಕಳ್ಳ ತನ್ನ ಕರಾಮತ್ತು ತೋರಿಸಿದ್ದಾನೆ. ಸುತ್ತಮುತ್ತ ನೋಡಿ ಒಂದು ಬಾಕ್ಸ್ ಟೊಮೆಟೊ ಎಗರಿಸಿದ್ದಾನೆ. ಕೋಲಾರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Tomato Price Hike: ಇಳಿಕೆ ಕಾಣದ ಟೊಮೆಟೊ ದರ, ಇನ್ನೊಂದು ತಿಂಗಳು ಇದೇ ಪರಿಸ್ಥಿತಿ

ಮೈಸೂರಿನಲ್ಲಿ ಶುಂಠಿ ಕಳುವು

ಇನ್ನು ಮತ್ತೊಂದೆಡೆ ಟೊಮೆಟೊ ಮಾತ್ರವಲ್ಲದೇ ಶುಂಠಿ ಬೆಲೆ ಕೂಡ ಏರಿಕೆಯಾಗಿದೆ. ಬೆಲೆ ಏರಿಕೆ ಹಿನ್ನೆಲೆ ಖದೀಮರು ಶುಂಠಿ ಕಳುವು ಮಾಡಿದ್ದಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಟಿಬೇಟಿಯನ್ ಕಾಲೋನಿಯ ಲಾಖಪಾ ಸೇರಿಂಗ್ ತಮ್ಮ ಜಮೀನಿನಲ್ಲಿ ಶುಂಠಿ ಬೆಳದಿದ್ದರು. ಕಳೆದ ರಾತ್ರಿ ತೋಟಕ್ಕೆ ನುಗ್ಗಿದ ಖದೀಮರು ಎಂಟು ಮೂಟೆಯಷ್ಟು ಫಸಲನ್ನು ಕಟಾವು ಮಾಡಿ ಮೂಟೆಯಲ್ಲಿ ತುಂಬಿಕೊಂಡು ಹೋಗಿದ್ದಾರೆ. ಶುಂಠಿ ಕಳೆದುಕೊಂಡ ಟಿಬೆಟಿಯನ್ ರೈತ ಕಂಗಾಲಾಗಿದ್ದಾನೆ. ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:11 pm, Sun, 30 July 23

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ