Tomato: ಟೊಮೆಟೊ ತುಂಬಿಕೊಂಡು ಕೋಲಾರದಿಂದ ಹೊರಟಿದ್ದ ಲಾರಿ ನಾಪತ್ತೆ, ದೂರು ದಾಖಲು

ಜುಲೈ 27ರಂದು ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದ 21 ಲಕ್ಷ ಮೌಲ್ಯದ ಟೊಮೆಟೊ ತುಂಬಿದ್ದ ಲಾರಿ ನಾಪತ್ತೆಯಾಗಿದೆ.

Tomato: ಟೊಮೆಟೊ ತುಂಬಿಕೊಂಡು ಕೋಲಾರದಿಂದ ಹೊರಟಿದ್ದ ಲಾರಿ ನಾಪತ್ತೆ, ದೂರು ದಾಖಲು
ಟೊಮೆಟೊ
Follow us
| Updated By: ಆಯೇಷಾ ಬಾನು

Updated on:Jul 30, 2023 | 3:13 PM

ಕೋಲಾರ, ಜುಲೈ 30: ರಾಜ್ಯದಲ್ಲಿ ಟೊಮೆಟೊ ಬೆಲೆ ಆಕಾಶ ಮುಟ್ಟಿದ್ದು ಟೊಮೆಟೊ(Tomato Price Hike) ಕಳ್ಳರ ಹಾವಳಿ ಹೆಚ್ಚಾಗಿದೆ. ಹೀಗಾಗಿ ಅನೇಕ ರೈತರು ತಮ್ಮ ಜಮೀನಿಗೆ ಕಾವಲುಗಾರರನ್ನು ನೇಮಿಸಿದ್ದಾರೆ. ಸಿಸಿಟಿವಿಗಳನ್ನು ಅಳವಡಿಸಿ ಟೊಮೆಟೊ ಬೆಳೆ ಕಾಪಾಡಿಕೊಳ್ಳುತ್ತಿದ್ದಾರೆ. ಆದ್ರೆ ಕೋಲಾರದಲ್ಲಿ ಟೊಮೆಟೊ ತುಂಬಿದ ಲಾರಿ ಕಳ್ಳತನವಾಗಿದ್ದು(Tomato Theft) ರೈತ ಕಂಗಾಲಾಗಿದ್ದಾನೆ.

ಜುಲೈ 27ರಂದು ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದ 21 ಲಕ್ಷ ಮೌಲ್ಯದ ಟೊಮೆಟೊ ತುಂಬಿದ್ದ ಲಾರಿ ನಾಪತ್ತೆಯಾಗಿದೆ. ಕೋಲಾರದ ಮೆಹತ್ ಟ್ರಾನ್ಸ್​​ಪೋರ್ಟ್​ಗೆ ಸೇರಿದ ಲಾರಿ ಇದಾಗಿದ್ದು ಇದರಿಲ್ಲಿ ಎ.ಜಿ.ಟ್ರೇಡರ್ಸ್ ಸಕ್ಲೇನ್, ಹಾಗೂ ಎಸ್.ವಿ.ಟಿ ಟ್ರೇಡರ್ಸ್ ಮುನಿರಡ್ಡಿ ಎಂಬುವರಿಗೆ ಸೇರಿದ 21 ಲಕ್ಷ ಮೌಲ್ಯದ ಟೊಮೆಟೊಗಳಿದ್ದವು. ಲಾರಿ ಚಾಲಕ ಮೊಬೈಕ್​ ಸಂಪರ್ಕಕ್ಕೆ ಸಿಗುತ್ತಿಲ್ಲ. ಈ ಹಿನ್ನೆಲೆ ಮಂಡಿ ಮಾಲೀಕರು ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ಇನ್ನು ಟೊಮೆಟೊ ಬೆಲೆ ಏರಿಕೆಯಾಗಿದ್ದು ಕಳ್ಳರು ಕೆಂಪು ರಾಣಿ ಕದಿಯಲು ಹೊಂಚುಹಾಕುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯ INR ಮಂಡಿಯಲ್ಲಿ ಟೊಮೆಟೊ ಕದಿಯುವ ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳೆದ ರಾತ್ರಿ ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಕಳ್ಳ ತನ್ನ ಕರಾಮತ್ತು ತೋರಿಸಿದ್ದಾನೆ. ಸುತ್ತಮುತ್ತ ನೋಡಿ ಒಂದು ಬಾಕ್ಸ್ ಟೊಮೆಟೊ ಎಗರಿಸಿದ್ದಾನೆ. ಕೋಲಾರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Tomato Price Hike: ಇಳಿಕೆ ಕಾಣದ ಟೊಮೆಟೊ ದರ, ಇನ್ನೊಂದು ತಿಂಗಳು ಇದೇ ಪರಿಸ್ಥಿತಿ

ಮೈಸೂರಿನಲ್ಲಿ ಶುಂಠಿ ಕಳುವು

ಇನ್ನು ಮತ್ತೊಂದೆಡೆ ಟೊಮೆಟೊ ಮಾತ್ರವಲ್ಲದೇ ಶುಂಠಿ ಬೆಲೆ ಕೂಡ ಏರಿಕೆಯಾಗಿದೆ. ಬೆಲೆ ಏರಿಕೆ ಹಿನ್ನೆಲೆ ಖದೀಮರು ಶುಂಠಿ ಕಳುವು ಮಾಡಿದ್ದಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಟಿಬೇಟಿಯನ್ ಕಾಲೋನಿಯ ಲಾಖಪಾ ಸೇರಿಂಗ್ ತಮ್ಮ ಜಮೀನಿನಲ್ಲಿ ಶುಂಠಿ ಬೆಳದಿದ್ದರು. ಕಳೆದ ರಾತ್ರಿ ತೋಟಕ್ಕೆ ನುಗ್ಗಿದ ಖದೀಮರು ಎಂಟು ಮೂಟೆಯಷ್ಟು ಫಸಲನ್ನು ಕಟಾವು ಮಾಡಿ ಮೂಟೆಯಲ್ಲಿ ತುಂಬಿಕೊಂಡು ಹೋಗಿದ್ದಾರೆ. ಶುಂಠಿ ಕಳೆದುಕೊಂಡ ಟಿಬೆಟಿಯನ್ ರೈತ ಕಂಗಾಲಾಗಿದ್ದಾನೆ. ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:11 pm, Sun, 30 July 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ