AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ತಾಲಿಬಾನಿಗಳಿಗೆ, ಮೈಸೂರು ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಬುದ್ಧಿ ಕಲಿಸುತ್ತಿರುವ ಪರಿಕಲ್ಪನೆಯಲ್ಲಿ ಗಣೇಶ

ಟಿವಿ9 ವರದಿಗಳಿಂದ ಪ್ರಭಾವಿತರಾದ ಶಿಕ್ಷಕ ದಂಪತಿಯೋರ್ವರು ಅದನ್ನು ಆಧರಿಸಿ ವಿಭಿನ್ನ ಶೈಲಿಯಲ್ಲಿ ಗಣೇಶನನ್ನು ಕೂರಿಸಿದ್ದು, ಎಲ್ಲರ ಮನಗೆದ್ದಿದೆ. ಅದರ ಚಿತ್ರ- ವರದಿ ಇಲ್ಲಿದೆ.

ಕೋಲಾರ: ತಾಲಿಬಾನಿಗಳಿಗೆ, ಮೈಸೂರು ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಬುದ್ಧಿ ಕಲಿಸುತ್ತಿರುವ ಪರಿಕಲ್ಪನೆಯಲ್ಲಿ ಗಣೇಶ
ಕೋಲಾರದ ಶಿಕ್ಷಕ ದಂಪತಿ ತಯಾರಿಸಿರುವ ಮೈಸೂರು ಅತ್ಯಾಚಾರ ಆರೋಪಿಗಳಿಗೆ ಶಿಕ್ಷೆ ನೀಡುತ್ತಿರುವ ಕಲ್ಪನೆಯ ಗಣಪ
TV9 Web
| Edited By: |

Updated on:Sep 10, 2021 | 12:55 PM

Share

ಕೋಲಾರ: ಗಣಪತಿಯನ್ನು ವಿವಿಧ ರೀತಿಯಲ್ಲಿ, ವಿವಿಧ ಪರಿಕಲ್ಪನೆಯಲ್ಲಿ ಪ್ರತಿಷ್ಠಾಪಿಸಿ ಪೂಜಿಸಲಾಗುತ್ತದೆ. ಇದೇ ವೇಳೆ ಸೃಜನಶೀಲತೆಯನ್ನು ಬಳಸಿಕೊಂಡು ವರ್ತಮಾನದ ಸಮಸ್ಯೆಗಳ ಕುರಿತು ಬೆಳಕು ಚೆಲ್ಲುವ ಕಾರ್ಯಗಳನ್ನೂ ಕಲಾಕಾರರು ಮಾಡುತ್ತಾರೆ. ಮಾಸ್ಕ್ ಧರಿಸಿರುವ ಗಣಪ ಇದಕ್ಕೆ ಉತ್ತಮ ಉದಾಹರಣೆ. ಅಂತೆಯೇ ಸಿನಿ ರಂಗದ ಪ್ರೇಮಿಗಳು ತಮ್ಮ ನೆಚ್ಚಿನ ನಟನ ನೂತನ ಚಿತ್ರದ ಪರಿಕಲ್ಪನೆಯಲ್ಲಿ ಗಣೇಶನನ್ನು ತಯಾರಿಸಿ ಈ ಬಾರಿ ಗಮನ ಸೆಳೆದಿದ್ಧಾರೆ. ಅಂತೆಯೇ ಕೋಲಾರದ ಶಿಕ್ಷಕ ದಂಪತಿ, ಟಿವಿ9ನಲ್ಲಿ ಪ್ರಸಾರವಾದ ವಿಶೇಷ ಸುದ್ದಿಗಳನ್ನು ಆಧರಿಸಿ ಗಣೇಶನ ಮೂರ್ತಿಗಳನ್ನು ತಯಾರಿಸಿ ಗಮನ ಸೆಳೆದಿದ್ದಾರೆ.

Kolar Ganapathi

ಅಫ್ಘಾನಿಸ್ತಾನದಲ್ಲಿ ಅಸಹಾಯಕರಿಗೆ ಸಹಾಯ ಮಾಡುತ್ತಿರುವ ಕಲ್ಪನೆಯಲ್ಲಿ ಮೂಡಿಬಂದ ಗಣೇಶ

ಟಿವಿ9 ಅಭಿಮಾನಿ ಕುಟುಂಬದಿಂದ ವಿನೂತನ ಗಣೇಶನ ಪ್ರತಿಷ್ಠಾಪನೆ ಮಾಡಲಾಗಿದ್ದು ಎಲ್ಲರ ಗಮನ ಸೆಳೆದಿದೆ. ಕೋಲಾರ ಜಿಲ್ಲೆ ಮಾಲೂರು ಪಟ್ಟಣದ ದಯಾನಂದ್ ಹಾಗೂ ಕೋಮಲ ಶಿಕ್ಷಕ ದಂಪತಿಯು ವಿನೂತನ ಪ್ರಯತ್ನ ನಡೆಸಿದ್ದಾರೆ. ಕಾಬೂಲ್ ಏರ್ಪೋರ್ಟ್ ನಿರ್ಮಾಣ ಮಾಡಿ ತಾಲಿಬಾನಿಗಳ ಅಟ್ಟಹಾಸದ ಚಿತ್ರಣ, ಸ್ಟಾಪ್ ಟೆರರಿಸಂ ಅನ್ನೋ ಸಂದೇಶದ ಚಿತ್ರಣ, ತಾಲಿಬಾನಿಗಳಿಗೆ ಬುದ್ದಿ ಕಲಿಸುತ್ತಿರುವ ಗಣೇಶ ಮೊದಲಾದ ಪರಿಕಲ್ಪನೆಯಲ್ಲಿ ಗಣೇಶನನ್ನು ಸ್ಥಾಪಿಸಿದ್ದಾರೆ.

Kolar Ganapathi

ವಿಭಿನ್ನ ಶೈಲಿಯಲ್ಲಿ ಗಣಪತಿ ತಯಾರಿಸಿರುವ ದಯಾನಂದ್ ಹಾಗೂ ಕೋಮಲ ಶಿಕ್ಷಕ ದಂಪತಿ

Kolar Ganapathi

ವಿಭಿನ್ನ ಪರಿಕಲ್ಪನೆಯ ಮೂರ್ತಿ ತಯಾರಿಕೆಯಲ್ಲಿ ಕುಟುಂಬ

ಇದರೊಂದಿಗೆ, ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳ ರುಂಡ ಕತ್ತರಿಸಿ ಶಿಕ್ಷೆ ನೀಡುತ್ತಿರುವ ಗಣೇಶನ ಕಲ್ಪನೆಯಲ್ಲೂ ಮೂರ್ತಿ ರಚಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಟಿವಿ9 ಮಾಡಿದ ಅಭಿಯಾನಕ್ಕೆ ಗಣೇಶನ ಶ್ಲಾಘನೆ ಪರಿಕಲ್ಪನೆಯಲ್ಲಿ ಕಲಾಕೃತಿ ರಚಿಸಿದ್ದಾರೆ. ಈ ಮೂಲಕ ಗಣೇಶ ಹಬ್ಬದಂದು ಸಮಾಜಕ್ಕ ಸಂದೇಶ ಕೊಡುವ ಪ್ರಯತ್ನ ನಡೆಸಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ:

‘ಮಾಸ್ಕ್​ ಧರಿಸಿ ವ್ಯಾಕ್ಸಿನ್ ಹಿಡಿದ ಗಣಪ’ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಗಣೇಶ ಚತುರ್ಥಿಗೆ ಶುಭಾಶಯ

Vikrant Rona: ವಿಕ್ರಾಂತ್​ ರೋಣ ಗೆಟಪ್​ನಲ್ಲಿ ಕಂಗೊಳಿಸುತ್ತಿರುವ ಗಣೇಶ; ಹೇಗಿದೆ ನೋಡಿ ಸುದೀಪ್​ ಸಿನಿಮಾ ಕ್ರೇಜ್​

(TV9 fan family recreate Afghanisthan and Mysuru issue news with Ganapathi imgination see pics)

Published On - 12:51 pm, Fri, 10 September 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ