AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯಪ್ಪ ಮಾಲೆ ಧರಿಸಿ ವಂಚನೆ ಪ್ರಕರಣ ಹೆಚ್ಚಳ, ಮಂಗಳೂರು ಆಯ್ತು ಈಗ ಕೋಲಾರದಲ್ಲೂ ಸಿಕ್ಕಿಬಿದ್ದರು

ಶಬರಿಮಲೆ ಎಂದಾಕ್ಷಣ ನಮಗೆ ಮೊದಲು ನೆನಪಿಗೆ ಬರೋದು ಅಯ್ಯಪ್ಪ ಸ್ವಾಮಿ ಮತ್ತು ಮಾಲೆ ಧರಿಸುವ ಭಕ್ತರು. ಆದ್ರೆ, ಅಯ್ಯಪ್ಪ ಮಾಲೆ ಧರಿಸಿ ವಂಚನೆ ಮಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಮೊನ್ನೇ ಅಷ್ಟೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಯ್ಯಪ್ಪ ಮಾಲೆ ಧರಿಸಿ, ಸಂಸ್ಥೆಯೊಂದರ ಹೆಸರನ್ನು ದುರುಪಯೋಗಪಡಿಸಿಕೊಂಡು ದೇಣಿಗೆ ಸಂಗ್ರಹಿಸುವಾಗ ಸಿಕ್ಕಿಬಿದ್ದಿದ್ದರು. ಇದೀಗ ಕೋಲಾರದಲ್ಲೂ ಸಹ ಇಬ್ಬರು ಸಿಕ್ಕಿಬಿದ್ದಿದ್ದಾರೆ.

ಅಯ್ಯಪ್ಪ ಮಾಲೆ ಧರಿಸಿ ವಂಚನೆ ಪ್ರಕರಣ ಹೆಚ್ಚಳ, ಮಂಗಳೂರು ಆಯ್ತು ಈಗ ಕೋಲಾರದಲ್ಲೂ ಸಿಕ್ಕಿಬಿದ್ದರು
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Dec 11, 2023 | 8:06 PM

Share

ಕೋಲಾರ, (ಡಿಸೆಂಬರ್ 11): ಕೋಲಾರ (Kolar) ತಾಲೂಕಿನ ತೊಟ್ಲಿ ಗ್ರಾಮದ ಬಳಿ ಅಯ್ಯಪ್ಪ ಮಾಲೆ(Ayyappa Swamy Male) ಧರಿಸಿ ದೇವರ ಯಂತ್ರ ಕೊಡುವ ನೆಪದಲ್ಲಿ ಹಣ, ಮೊಬೈಲ್​ ದೋಚಲು ಯತ್ನಿಸುತ್ತಿದ್ದ ಇಬ್ಬರು ಯುವಕರು ಸಿಕ್ಕಿಬಿದ್ದಿದ್ದಾರೆ. ಅಯ್ಯಪ್ಪ ಮಾಲೆ ಧರಿಸಿ ವಂಚನೆ ಮಾಡುತ್ತಿದ್ದ ಇಬ್ಬರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆಂಧ್ರ ಪ್ರದೇಶ ಮೂಲದ ನರಸಿಂಹ ಮತ್ತು ಗಣೇಶ್ ಎನ್ನುವರನ್ನು ಜನರು ಹಿಡಿದು ಕೋಲಾರ ಗ್ರಾಮಾಂತರ ಪೊಲೀಸರಿಗೆ ನೀಡಿದ್ದಾರೆ.

ನರಸಿಂಹ ಮತ್ತು ಗಣೇಶ್ ಎನ್ನುವ ಯುವಕರು ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ದೇವರ ಯಂತ್ರಗಳನ್ನು ಕೊಡುವ ನೆಪದಲ್ಲಿ ಹಣ, ಮೊಬೈಲ್​ ದೋಚಲು ಯತ್ನಿಸಿದ್ದಾರೆ. ಇದನ್ನು ಗಮನಿಸಿದ ತೊಟ್ಲಿ ಗ್ರಾಮಸ್ಥರು ಇಬ್ಬರನ್ನು ಹಿಡಿದಿದ್ದಾರೆ.

ಇದನ್ನೂ ಓದಿ: ಮಂಗಳೂರು: ಅಯ್ಯಪ್ಪ ಮಾಲೆ ಧರಿಸಿ ದೇಣಿಗೆ ಸಂಗ್ರಹಿಸಿ ವಂಚಿಸುತ್ತಿದ್ದ ಆರೋಪಿಗಳ ಸೆರೆ

ದಕ್ಷಿಣ ಕನ್ನಡದಲ್ಲೂ ದೇಣಿಗೆ ಸಂಗ್ರಹ

ಅಯ್ಯಪ್ಪ ಮಾಲೆ (Ayyappa Male) ಧರಿಸಿ, ಸಂಸ್ಥೆಯೊಂದರ ಹೆಸರನ್ನು ದುರುಪಯೋಗಪಡಿಸಿಕೊಂಡು ದೇಣಿಗೆ ಸಂಗ್ರಹಿಸುತ್ತಿದ್ದ ಇಬ್ಬರು ಯುವಕರನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದರು. ಯುವಕರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ, ಬೆಂಗಳೂರಿನ ಸ್ವಾಮಿ ವಿವೇಕಾನಂದ ಸೋಷಿಯಲ್‌ ಸರ್ವಿಸ್‌ ಟ್ರಸ್ಟ್‌ (ರಿ) ಹೆಸರಿನಲ್ಲಿ ದೇಣಿಗೆ ಕೇಳುತ್ತಿದ್ದರು.

ಯುವಕರು ಬೆಂಗಳೂರಿನ ಸ್ವಾಮಿ ವಿವೇಕಾನಂದ ಸೋಷಿಯಲ್‌ ಸರ್ವಿಸ್‌ ಟ್ರಸ್ಟ್‌ (ರಿ) ಹೆಸರಲ್ಲಿ ನಿಡ್ಲೆ ಗ್ರಾಮದ ಧನುಷ್‌ ಎಂಬವರ ಬಳಿ ದೇಣಿಗೆ ಕೇಳಿದ್ದಾರೆ. ಅನುಮಾನಗೊಂಡ ಧನುಷ್ ಸಂಸ್ಥೆಯ ಮೊಬೈಲ್‌ ನಂಬರ್‌ಗೆ ಕರೆ ಮಾಡಿ ವಿಚಾರಿಸಿದ್ದಾರೆ. ಆಗ ಸಂಸ್ಥೆಯವರು ನಾವು ಯಾರನ್ನೂ ಕಳುಹಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​