AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್‌ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣೆಯಲ್ಲಿ ಕೋಲಾರದ ಎಂಜಿನಿಯರ್​ ಭಾಗಿ

ಉತ್ತರಾಖಂಡ್ ರಾಜ್ಯದ ಸಿಲ್​ಕ್ಯಾರಾ ಸುರಂಗ ಕುಸಿತಗೊಂಡ ಪರಿಣಾಮ ಕಳೆದ ಎರಡು ವಾರಗಳಿಂದ 41 ಮಂದಿ ಸಿಲುಕಿಕೊಂಡಿದ್ದರು. ಸತತ 17 ದಿನಗಳ ಕಾಲ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಎಲ್ಲರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗಿದೆ. ಈ ರಕ್ಷಣಾ ಕಾರ್ಯಾಚರಣೆಯಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಎಂಜಿನಿಯರ್​ ಸಹ ಭಾಗಿಯಾಗಿದ್ದರು.

ಉತ್ತರಾಖಂಡ್‌ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣೆಯಲ್ಲಿ ಕೋಲಾರದ ಎಂಜಿನಿಯರ್​ ಭಾಗಿ
ಎಂಜಿನಿಯರ್​ ಹೆಚ್​​.ಎಸ್​ ವೆಂಕಟೇಶ್​ ಪ್ರಸಾದ್​
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Dec 01, 2023 | 10:30 AM

Share

ಕೋಲಾರ ಡಿ.01: ಉತ್ತರಾಖಂಡ್ ರಾಜ್ಯದ ಉತ್ತರಕಾಶಿ ಬಳಿ ಸಿಲ್​ಕ್ಯಾರಾ ಸುರಂಗ (Silkyara tunnel)ದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಈ ರಕ್ಷಣಾ ಕಾರ್ಯಾಚರಣೆಯಲ್ಲಿ ಕೋಲಾರ ಜಿಲ್ಲೆಯ ಓರ್ವ ಎಂಜಿನಿಯರ್ (Engineer)​ ಕೂಡ ಭಾಗಿಯಾಗಿದ್ದರು. ಹೌದು ಬಂಗಾರಪೇಟೆ (Bangarpete) ಪಟ್ಟಣದ ಹೆಚ್.ಎಲ್.ಸುರೇಶ್ ಮತ್ತು ಕಲಾವತಿ ದಂಪತಿಯ ಪುತ್ರ ಹೆಚ್. ಎಸ್​ ವೆಂಕಟೇಶ್​​ ಪ್ರಸಾದ್ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದರು.

ವೆಂಕಟೇಶ್ ಪ್ರಸಾದ್ 2015 ರಲ್ಲಿ ಮೈನಿಂಗ್ ಇಂಜನಿಯರ್ ಆಗಿ ಉತ್ತೀರ್ಣರಾಗಿದ್ದಾರೆ. ನಂತರ‌ ಗುಜರಾತಿನ ಹಿಂದೂಸ್ಥಾನ್ ಜಿಂಕ್ ಲಿಮಿಟೆಡ್​ನಲ್ಲಿ 6 ವರ್ಷ ಸೇವೆ ಸಲ್ಲಿಸಿದ್ದಾರೆ. ಸದ್ಯ ಬೆಂಗಳೂರಿನ ಸ್ಕ್ವಾಡ್ರೋನ್ ಇನ್ಫ್ರಾ ಅಂಡ್ ಮೈನಿಂಗ್ ಪ್ರೈವೇಟ್ ಲಿಮಿಟೆಡ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: ಉತ್ತರಕಾಶಿ ಸುರಂಗ ಕುಸಿತ; ಸಿಲುಕಿದ್ದ 41 ಕಾರ್ಮಿಕರ ರಕ್ಷಣೆ, ರಕ್ಷಣಾ ಕಾರ್ಯಾಚರಣೆಯ ಟೈಮ್​​​ಲೈನ್

ಉತ್ತರಕಾಶಿ ಬಳಿ ಸುರಂಗದಲ್ಲಿ 41 ಜನ ಕಾರ್ಮಿಕರು ಸಿಲುಕಿಕೊಂಡ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭವಾಗುತ್ತದೆ. ಈ ವೇಳೆ ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆ ಹಾಗೂ ಭಾರತೀಯ ಸೇನಾ ಪಡೆಯ ಮೇಲಾಧಿಕಾರಿಗಳ ಸೂಚನೆ ಮೇರೆಗೆ ಮೈನಿಂಗ್ ಇಂಜನಿಯರ್ ವೆಂಕಟೇಶ್ ಪ್ರಸಾದ್ ಸಹ ಕಾರ್ಯಾಚರಣೆಯಲ್ಲಿ ‌ಭಾಗಿಯಾಗಿ ಕಾರ್ಮಿಕರನ್ನು ಹೊರತರಲು ಶ್ರಮಿಸಿದ್ದಾರೆ.

ನವೆಂಬರ್​ 12 ರಂದು ಸಿಲುಕಿದ್ದ ಕಾರ್ಮಿಕರು

ನವೆಂಬರ್ 12 ರಂದು ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಭೂಕುಸಿತ ಸಂಭವಿಸಿ ಸುರಂಗದ ಒಂದು ಭಾಗ ಕುಸಿದು ನಲವತ್ತೊಂದು ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡಿದ್ದರು. ರಕ್ಷಣಾ ಕಾರ್ಯಾಚರಣೆ ತಕ್ಷಣವೇ ಪ್ರಾರಂಭವಾಗಿತ್ತು. ಈ ರಕ್ಷಣಾ ಕಾರ್ಯಾಚರಣೆಗೆ ಅಂತರಾಷ್ಟ್ರೀಯ ಸುರಂಗ ತಜ್ಞನನ್ನು ಕರೆಸಲಾಗಿತ್ತು. ಸತತ 17 ದಿನಗಳ ಕಾಲ ಕಾರ್ಯಾಚರಣೆ  ನಡೆಸಿದ ಬಳಿಕ ನವೆಂಬರ್​​ 28ರ ಸಂಜೆ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಗೆ ಕರೆ ತರಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ