AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ವೃಷಭಾದ್ರಿ ಬೆಟ್ಟದಲ್ಲಿ ಕೃತಕ ಮರಳು ಉತ್ಪಾದನಾ ಘಟಕ; ಪರಿಸರ ಹೋರಾಟ ಸಮಿತಿ, ಗ್ರಾಮಸ್ಥರಿಂದ ವಿರೋಧ

ಅದು ರಾಮಾಯಣ ಮಹಾಭಾರತದ ಐತಿಹ್ಯ ಹೊಂದಿರೋ ಪುರಾತನ ಬೆಟ್ಟ. ಅಂಥಾ ಬೆಟ್ಟವನ್ನ ನಂಬಿ ಈಗಲೂ ಹತ್ತಾರು ಗ್ರಾಮಗಳ ಜನ, ಜಾನುವಾರುಗಳು ಬದುಕು ಕಟ್ಟಿಕೊಂಡಿವೆ. ಆದ್ರೆ ರಾಜ್ಯ ಸರ್ಕಾರದ ನಿರ್ಧಾರವೊಂದು ಹತ್ತಾರು ಗ್ರಾಮಗಳ ಜನರನ್ನ ಆತಂಕಕ್ಕೀಡು ಮಾಡಿದೆ.

ಐತಿಹಾಸಿಕ ವೃಷಭಾದ್ರಿ ಬೆಟ್ಟದಲ್ಲಿ ಕೃತಕ ಮರಳು ಉತ್ಪಾದನಾ ಘಟಕ; ಪರಿಸರ ಹೋರಾಟ ಸಮಿತಿ, ಗ್ರಾಮಸ್ಥರಿಂದ ವಿರೋಧ
ವೃಷಭಾದ್ರಿ ಬೆಟ್ಟ
TV9 Web
| Updated By: ಆಯೇಷಾ ಬಾನು|

Updated on: Jul 27, 2021 | 7:08 AM

Share

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ದೇವರಾಯಸಮುದ್ರ ಗ್ರಾಮದಲ್ಲಿ ಕಾಣೋ ಏಕಶಿಲಾ ಬೆಟ್ಟ ಜಿಲ್ಲೆಯ ಬೃಹತ್‌ ಹಾಗೂ ಐತಿಹಾಸಿಕ ಹಿನ್ನೆಲೆವುಳ್ಳ ಬೆಟ್ಟ ಅನ್ನೋ ಖ್ಯಾತಿ ಹೊಂದಿದೆ. ಇದನ್ನ ವೃಷಭಾದ್ರಿ ಬೆಟ್ಟ ಎಂದು ಕರೆಯಲಾಗುತ್ತದೆ. ಇಲ್ಲಿ ಸೀತಾಮಾತೆ ವನವಾಸಕ್ಕೆ ಬಂದಿದ್ದಾಗ ವಾಸವಿದ್ದಳು ಅನ್ನೋ ಐತಿಹ್ಯವಿದೆ. ರಾಮಾಯಣ ಮಹಾಭಾರತದ ಕುರುಹುಗಳು ಇಲ್ಲಿವೆ. ಪುರಾಣ ಪ್ರಸಿದ್ಧ ದೇವಾಲಯಗಳು ಬೆಟ್ಟದ ತಪ್ಪಲಿನಲ್ಲಿವೆ. ಜೊತೆಗೆ ಬೆಟ್ಟದ ಸುತ್ತಲೂ 30 ಗ್ರಾಮಗಳು ಹಾಗೂ ಸಾವಿರಾರು ಸಂಖ್ಯೆಯ ಪ್ರಾಣಿ ಪಕ್ಷಿಗಳು ಬೆಟ್ಟವನ್ನೇ ನಂಬಿ ತಮ್ಮದೇ ಆದ ಸುಂದರ ಬದುಕು ಕಟ್ಟಿಕೊಂಡಿವೆ. ಆದ್ರೆ ಇಂಥಾ ಬೆಟ್ಟದಲ್ಲಿ ರಾಜ್ಯ ಸರ್ಕಾರ ಕೃತಕ ಮರಳು ಉತ್ಪಾದನಾ ಘಟಕ ಸ್ಥಾಪನೆಗೆ ಮುಂದಾಗಿದ್ದು, ಇದಕ್ಕೆ ಸ್ಥಳೀಯವಾಗಿ ಸಾಕಷ್ಟು ವಿರೋಧಗಳು ವ್ಯಕ್ತವಾಗ್ತಿವೆ. ಟೆಂಡರ್‌ ಮೂಲಕ ದೇವರಾಯ ಸಮುದ್ರದ ಸರ್ವೆ ನಂ.199ರಲ್ಲಿ 50 ಎಕರೆಗೂ ಹೆಚ್ಚು ಪ್ರದೇಶವನ್ನ ವಿವಿಧ ಕಂಪನಿಗಳಿಗೆ ಗುತ್ತಿಗೆ ನೀಡಲು ಮುಂದಾಗಿದೆ.

ಇನ್ನು ಜಿಲ್ಲೆಯಲ್ಲಿ ಹೀಗಾಗಲೇ ಮರಳು, ಕಲ್ಲು ಗಣಿಗಾರಿಕೆಯಿಂದ ಅಪಾರ ಪ್ರಮಾಣದ ಪ್ರಕೃತಿ ಸಂಪತ್ತು ಅವನತಿಯತ್ತ ಸಾಗಿದೆ. ಇಂಥಾ ಪರಿಸ್ಥಿತಿಯಲ್ಲಿ ಕ್ರಶರ್‌ ಅಥವಾ ಎಂ. ಸ್ಯಾಂಡ್‌ ಘಟಕ ಸ್ಥಾಪನೆಗೆ ಅನುಮತಿ ನೀಡೋ ಮೂಲಕ ಈ ಗ್ರಾಮಗಳ ಪಾಲಿಗೆ ಮರಣ ಶಾಸನ ಬರೆಯಲು ಮುಂದಾಗಿದೆ. ಇದು ಸುತ್ತಮುತ್ತಲ ಹತ್ತಾರು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಸ್ಥಳೀಯರ ಅಭಿಪ್ರಾಯ ಸಂಗ್ರಹಿಸದೇ ಸರ್ಕಾರ ತೆಗೆದುಕೊಂಡಿರೋ ಈ ಕ್ರಮಕೈಗೊಳ್ಳಲಾಗಿದ್ಯಂತೆ. ಹೀಗಾಗಿ ಪರಿಸರ ಹೋರಾಟ ಸಮಿತಿ ಕ್ರಶರ್‌ಗೆ ಅನುಮತಿ ನೀಡದಂತೆ ಕೋರ್ಟ್ ಮೊರೆಹೋಗಿದೆ.

ಒಟ್ನಲ್ಲಿ ಮರಳು, ಕಲ್ಲು ಗಣಿಗಾರಿಕೆಯಿಂದ ಕೋಲಾರ ಜಿಲ್ಲೆಯಲ್ಲಿರೋ ಪ್ರಕೃತಿ ಸಂಪತ್ತಿಗೆ ಉಳಿಗಾಲವಿರೋದಿಲ್ಲ. ಇನ್ನಾದ್ರು ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಗ್ರಾಮಗಳನ್ನ ಗಣಿಗಾರಿಕೆಯಿಂದ ರಕ್ಷಿಸೋ ಕೆಲ್ಸ ಮಾಡ್ಬೇಕಿದೆ.

klr betta

ವೃಷಭಾದ್ರಿ ಬೆಟ್ಟ

klr betta

ವೃಷಭಾದ್ರಿ ಬೆಟ್ಟ

ಇದನ್ನೂ ಓದಿ: ಮದುವೆಯ ವಯಸ್ಸು ಮೀರುತ್ತಿದ್ದರೂ ಅಡೆತಡೆ ನಿಂತಿಲ್ಲವೇ; ಸಮಸ್ಯೆ ನಿವಾರಣೆಗೆ ಸರಳ ಮಾರ್ಗಗಳು ಇಲ್ಲಿವೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!