AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ವೈರಲ್ ಫೀವರ್: ಹೆಚ್1ಎನ್1 ಸೋಂಕು ಹೆಚ್ಚಳ; ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ಐಸೋಲೇಶನ್ ವಾರ್ಡ್

Kolar H1N1 Outbreak: ಕೋಲಾರದಲ್ಲಿ ವೈರಲ್ ಜ್ವರ ಮತ್ತು H1N1 ಸೋಂಕುಗಳು ಹೆಚ್ಚಾಗುತ್ತಿವೆ. ಕಳೆದ ಆರು ತಿಂಗಳಲ್ಲಿ 16 H1N1 ಪ್ರಕರಣಗಳು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಐಸೋಲೇಶನ್ ವಾರ್ಡ್‌ಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ಕೈಗಳನ್ನು ಆಗಾಗ ತೊಳೆಯುವುದು, ವೈಯಕ್ತಿಕ ನೈರ್ಮಲ್ಯ ಕಾಪಾಡುವುದು, ಮತ್ತು ಜ್ವರ ಬಂದ ತಕ್ಷಣ ವೈದ್ಯರ ಸಲಹೆ ಪಡೆಯುವ ಮೂಲಕ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸೂಚಿಸಲಾಗಿದೆ.

ಕೋಲಾರದಲ್ಲಿ ವೈರಲ್ ಫೀವರ್: ಹೆಚ್1ಎನ್1 ಸೋಂಕು ಹೆಚ್ಚಳ; ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ಐಸೋಲೇಶನ್ ವಾರ್ಡ್
ವೈರಲ್ ಫೀವರ್Image Credit source: tv9 kannada
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Aug 29, 2026 | 6:22 PM

Share

ಕೋಲಾರ, ಆಗಸ್ಟ್​ 29: ಕೋಲಾರ (kolar) ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿಂದ ವೈರಲ್ ಫೀವರ್ ಹಾಗೂ ಸಾಂಕ್ರಾಮಿಕ ರೋಗಗಳ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿವೆ. ಕಳೆದ ಆರು ತಿಂಗಳ ಅವಧಿಯಲ್ಲಿ ಒಟ್ಟು 2,010 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 56 ತೀವ್ರ ಉಸಿರಾಟದ ಸೋಂಕು ಪ್ರಕರಣಗಳು ಹಾಗೂ 16 ಹೆಚ್1ಎನ್1 (H1N1) ಸೋಂಕು ಪ್ರಕರಣಗಳು ದೃಢಪಟ್ಟಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ ಆರೋಗ್ಯ ಇಲಾಖೆಯು ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಐಸೋಲೇಶನ್ ವಾರ್ಡ್‌ಗಳನ್ನು ತೆರೆಯಲು ಮುಂದಾಗಿದೆ.

ಎಸ್‌ಎನ್‌ಆರ್ ಆಸ್ಪತ್ರೆಯಲ್ಲಿ ಸಕಲ ಸಿದ್ಧತೆ: ಔಷಧಗಳ ದಾಸ್ತಾನು

ಸೋಂಕಿತರಿಗೆ ತ್ವರಿತ ಚಿಕಿತ್ಸೆ ನೀಡುವ ಉದ್ದೇಶದಿಂದ ನಗರದ ಎಸ್‌ಎನ್‌ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಐಸೋಲೇಶನ್ ವಾರ್ಡ್‌ಗಳು, ರ‍್ಯಾಪಿಡ್ ರೆಸ್ಪಾನ್ಸ್ ಬೆಡ್‌ಗಳು ಹಾಗೂ 12 ಬೆಡ್‌ಗಳ ವಿಶೇಷ ವಾರ್ಡ್ ಅನ್ನು ಸಜ್ಜುಗೊಳಿಸಲಾಗಿದೆ. ವಾರ್ಡ್‌ಗಳ ವ್ಯವಸ್ಥೆಯನ್ನು ಜಿಲ್ಲಾ ಆರೋಗ್ಯಾಧಿಕಾರಿ ಶ್ರೀನಿವಾಸ್​ ಖುದ್ದು ಪರಿಶೀಲನೆ ಮಾಡಿದ್ದಾರೆ. ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ರೀತಿಯ ಔಷಧಿಗಳು ಹಾಗೂ ವಿಶೇಷವಾಗಿ ‘ಓಸೆಲ್ಟಾಮಿವಿರ್’ ಮಾತ್ರೆಗಳನ್ನು ಆಸ್ಪತ್ರೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಆತಂಕ ಬೇಡ, ಮುನ್ನೆಚ್ಚರಿಕೆ ಅಗತ್ಯ: ಜಿಲ್ಲಾ ಶಸ್ತ್ರಚಿಕಿತ್ಸಕರ ಕಿವಿಮಾತು

ಇನ್ನು ಜಿಲ್ಲೆಯಲ್ಲಿ ಸದ್ಯ ಆತಂಕಪಡುವಂತಹ ಪರಿಸ್ಥಿತಿ ಇಲ್ಲ ಎಂದು ಸ್ಪಷ್ಟಪಡಿಸಿರುವ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶರೀಫ್, ‘ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಸಲಹೆ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜ್ವರದ ನಿಯಂತ್ರಣ ಮತ್ತು ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ’ ಎಂದರು.

ಸೋಂಕಿನಿಂದ ರಕ್ಷಣೆ ಹೇಗೆ?

‘ಮನೆಯಲ್ಲಿ ಯಾರಿಗಾದರೂ ಜ್ವರ ಕಾಣಿಸಿಕೊಂಡರೆ ತಕ್ಷಣ ಸ್ವಯಂ ಪ್ರತ್ಯೇಕವಾಗಿರಬೇಕು, ಆಗಾಗ ಕೈಗಳನ್ನು ತೊಳೆಯುವುದು, ವೈಯಕ್ತಿಕ ನೈರ್ಮಲ್ಯ ಕಾಪಾಡುವುದು ಹಾಗೂ ಸಾಕಷ್ಟು ನೀರು, ಹಣ್ಣಿನ ರಸ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸಬೇಕು’ ಎಂದು ತಿಳಿಸಿದ್ದಾರೆ. ‘ಜ್ವರ ಬಂದಾಗ ಸ್ವಯಂ ಚಿಕಿತ್ಸೆ ಅಥವಾ ಮಾತ್ರೆಗಳನ್ನು ತೆಗೆದುಕೊಳ್ಳದೆ, ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಅಥವಾ ಎಸ್‌ಎನ್‌ಆರ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುವಂತೆ’ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಹೆಚ್1ಎನ್1 ಭೀತಿ: ಕಿಮ್ಸ್​​ನಲ್ಲಿ ರೋಗಿಗಳ ಸಂಖ್ಯೆ ಹೆಚ್ಚಳ; ಆತಂಕ ಬೇಡ ಎಂದ ವೈದ್ಯರು

ಒಟ್ಟಾರೆಯಾಗಿ ವೈರಲ್ ಜ್ವರ ಹಾಗೂ ಹೆಚ್1ಎನ್1 ಸೋಂಕು ಹರಡದಂತೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಯಾವುದೇ ರೀತಿಯ ಜ್ವರ ಅಥವಾ ಉಸಿರಾಟದ ತೊಂದರೆ ಕಂಡುಬಂದರೆ ನಿರ್ಲಕ್ಷ್ಯ ಮಾಡದೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್
ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್
ನಾಗೇಂದ್ರ ರಾಜೀನಾಮೆ ಹಿಂದಿನ ಮರ್ಮವನ್ನು ಬಿಚ್ಚಿಟ್ಟ ಸಚಿವ ಬಾಲಕೃಷ್ಣ
ನಾಗೇಂದ್ರ ರಾಜೀನಾಮೆ ಹಿಂದಿನ ಮರ್ಮವನ್ನು ಬಿಚ್ಚಿಟ್ಟ ಸಚಿವ ಬಾಲಕೃಷ್ಣ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ನಾಗೇಂದ್ರ ಜತೆಗೆ ಜನಾರ್ದನ ರೆಡ್ಡಿ. ರೇಣುಕಾಚಾರ್ಯಗೂ ಸಂಕಷ್ಟ?
ನಾಗೇಂದ್ರ ಜತೆಗೆ ಜನಾರ್ದನ ರೆಡ್ಡಿ. ರೇಣುಕಾಚಾರ್ಯಗೂ ಸಂಕಷ್ಟ?
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ
ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ
ದಾವಣಗೆರೆಯಲ್ಲಿ ಅಡಿಕೆ ಬೆಳೆಗಾರರ ಬೃಹತ್ ಪ್ರತಿಭಟನೆ
ದಾವಣಗೆರೆಯಲ್ಲಿ ಅಡಿಕೆ ಬೆಳೆಗಾರರ ಬೃಹತ್ ಪ್ರತಿಭಟನೆ