AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಯಲ್ಲಿ ಸುಡುವ ಸೂರ್ಯನಿಂದ ಬೆಂದ ಜನರಿಗೆ ಕಲ್ಲಂಗಡಿಯೇ ಪರಿಹಾರ! ಬೆಳೆಗಾರರ ಮುಖದಲ್ಲಿ ಮಂದಹಾಸ

Watermelon in Kolar: ಈ ಬಾರಿಯ ಬಿರು ಬಿಸಿಲು ಜನರ ನೆತ್ತಿ ಸುಡುತ್ತಿದೆ, ಸೂರ್ಯ ಪ್ರಖರವಾಗುತ್ತಿದ್ದಂತೆ ಜನರು ಮನೆಯಿಂದ ಹೊರಬರೋದಕ್ಕೂ ಯೋಚಿಸುವ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ಬಿಸಿಲಿನ ತಾಪಕ್ಕೆ ಬೆಂಡಾಗಿರುವ ಜನರು ದಣಿವಾರಿಸಿಕೊಳ್ಳಲು ಏನೆಲ್ಲಾ ಸರ್ಕಸ್​ ಮಾಡುತ್ತಿದ್ದಾರೆ, ಹೇಗಿದೆ ಈ ಬಾರಿಯ ಬಿಸಿಲ ಬೇಗೆ ಇಲ್ಲಿದೆ ಡೀಟೇಲ್ಸ್​...

ಬೇಸಿಗೆಯಲ್ಲಿ ಸುಡುವ ಸೂರ್ಯನಿಂದ ಬೆಂದ ಜನರಿಗೆ ಕಲ್ಲಂಗಡಿಯೇ ಪರಿಹಾರ! ಬೆಳೆಗಾರರ ಮುಖದಲ್ಲಿ ಮಂದಹಾಸ
ಬೇಸಿಗೆಯ ಬಿರು ಬಿಸಿಯಲ್ಲಿ ಸುಡುವ ಸೂರ್ಯನಿಂದ ಬೆಂದ ಜನರಿಗೆ ಕಲ್ಲಂಗಡಿಯೇ ಪರಿಹಾರ! ಬೆಳೆಗಾರರ ಮುಖದಲ್ಲಿ ಮಂದಹಾಸ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Apr 05, 2022 | 8:49 PM

ಈ ಬಾರಿಯ ಬಿರು ಬಿಸಿಲು ಜನರ ನೆತ್ತಿ ಸುಡುತ್ತಿದೆ, ಸೂರ್ಯ ಪ್ರಖರವಾಗುತ್ತಿದ್ದಂತೆ ಜನರು ಮನೆಯಿಂದ ಹೊರಬರೋದಕ್ಕೂ ಯೋಚಿಸುವ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ಬಿಸಿಲಿನ ತಾಪಕ್ಕೆ ಬೆಂಡಾಗಿರುವ ಜನರು ದಣಿವಾರಿಸಿಕೊಳ್ಳಲು ಏನೆಲ್ಲಾ ಸರ್ಕಸ್​ ಮಾಡುತ್ತಿದ್ದಾರೆ, ಹೇಗಿದೆ ಈ ಬಾರಿಯ ಬಿಸಿಲ ಬೇಗೆ ಇಲ್ಲಿದೆ ಡೀಟೇಲ್ಸ್​…

ಕೋಲಾರದಲ್ಲಿ ಬಿಸಿಲಿನ ತಾಪಕ್ಕೆ ಬೆಂಡಾಗಿ ಕಲ್ಲಂಗಡಿ ಮೊರೆ ಹೋದ ಜನರು..! ಕೋಲಾರ ಅಂದ್ರೆನೆ ಬರದ ಜಿಲ್ಲೆ… ವರ್ಷಪೂರ್ತಿ ಸುಡುವ ಬಿಸಿಲು, ಧಗ ಧಗಿಸುವ ಸೂರ್ಯ ಜನರ ನೆತ್ತಿ ಸುಡುತ್ತಿರುತ್ತಾನೆ. ಹೀಗಿರುವಾಗ ಈ ವರ್ಷ ಮುಂಗಾರು ಮಳೆಗೆ ಇನ್ನೂ ಸಾಕಷ್ಟು ಸಮಯವಿದೆ. ಹಿಂದಿರುಗಿ ನೋಡಿದಾಗ ಮಳೆ ಬಿದ್ದು ಹಲವು ತಿಂಗಳುಗಳೇ ಕಳೆದಿವೆ. ಕೆರೆಗಳಲ್ಲಿ ನೀರಿದ್ದರೂ ಪ್ರಯೋಜನವಿಲ್ಲ ಎನ್ನುಂತಾಗಿ ಕಾದು ಕೆಂಡದಂತಾಗಿರುವ ಭೂಮಿಯನ್ನು ನೋಡಿದಾಗ! ಹೀಗಿರುವಾಗ ಮಾರ್ಚ್​ ಆರಂಭದಲ್ಲೇ ಬೇಸಿಗೆ ತೀವ್ರತೆ ಹೆಚ್ಚಾಗಿತ್ತು. ಪ್ರತಿ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಜಿಲ್ಲೆಯಲ್ಲಿ ಈ ಬಾರಿ ಅತಿಹೆಚ್ಚು ತಾಪಮಾನ 34-38 ಡಿಗ್ರಿ ದಾಖಲಾಗಿದೆ. ಎಂದೂ ಕಂಡರಿಯದ ಈ ರಣಬಿಸಿಲಿಗೆ ಜನ ತತ್ತರಿಸಿ ಹೋಗಿದ್ದು, ಜನ ಬಿಸಿಲಿನಿಂದ ತಪ್ಪಿಸಿಕೊಳ್ಳಲು ಕಲ್ಲಂಗಡಿ ಹಣ್ಣು, ಎಳೆ ನೀರು, ಮಜ್ಜಿಗೆಯಂತಹ ತಂಪು ಪಾನೀಯಗಳತ್ತ ಬಾಯ್ಬಿಟ್ಟುಕೊಂಡು ನೋಡುವಂತಾಗಿದೆ. ಹಾಗಾಗಿ ನಗರದ ಒಳಗೆ ಹಾಗೂ ಹೊರಗೆ ಎಲ್ಲೆಂದರಲ್ಲಿ ಕಲ್ಲಂಗಡಿ ಹಣ್ಣಿನ ಸ್ಟಾಲ್​ಗಳು ಜೋರಾಗಿವೆ. ಎಲ್ಲಾ ಕಡೆಯೂ ಜನರು ಮುಗಿಬಿದ್ದು, ಬಿಸಿಲಲ್ಲಿ ಕಲ್ಲಂಗಡಿ ಸವಿಯುತ್ತಾ ಬಿಸಿಲಿನಿಂದ ಬೆಂದು ಕೊಂಚ ನಿಟ್ಟುಸಿರು ಬಿಡುತ್ತಿದ್ದಾರೆ.

Watermelon to pacify starched kolar people in the summer watermelon growers get good money and sellers good profit

ಕೋಲಾರ ಜಿಲ್ಲೆಯಲ್ಲಿ ಕಲ್ಲಂಗಡಿ ಬೆಳೆದ ರೈತರಿಗೆ ಬಂಪರ್​!

ಇನ್ನು… ಜಿಲ್ಲೆಯಲ್ಲಿ ಕಲ್ಲಂಗಡಿ ಬೆಳೆದ ರೈತರಿಗೆ ಬಂಪರ್​! ಕೋಲಾರ ಜಿಲ್ಲೆಯಲ್ಲೂ ಈ ಬಾರಿ ತಾಪಮಾನ ಏರಿಕೆಯಾಗಿದೆ. ಕಳೆದ ನವೆಂಬರ್​ ತಿಂಗಳಲ್ಲಿ ಉತ್ತಮ ಮಳೆ ಆಗಿದೆ, ಜಿಲ್ಲೆಯ ಬಹುತೇಕ ಕೆರೆಗಳಲ್ಲಿ ನೀರಿದೆ. ಆದರೂ ಕೂಡಾ ತಾಪಪಾನ ಮಾತ್ರ ಹೇಳತೀರದಂತಾಗಿದೆ. ಇನ್ನು ಜಿಲ್ಲೆಯಲ್ಲಿ ನೀರಾವರಿ ಹೆಚ್ಚಾಗಿದ್ದು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಕಳೆದ ಬಾರಿ ಹೆಚ್ಚಾಗಿ ತಮಿಳುನಾಡು, ಆಂಧ್ರ ಪ್ರದೇಶಗಳಿಂದ ಕಲ್ಲಂಗಡಿ ಹಣ್ಣುಗಳನ್ನು ತರಿಸಿಕೊಳ್ಳಬೇಕಿತ್ತು. ಆದರೆ ಈ ವರ್ಷ ಹೆಚ್ಚಾಗಿ ಜಿಲ್ಲೆಯ ಕೆರೆಗಳಲ್ಲಿ ನೀರಿದೆ, ಜೊತೆಗೆ ಜಿಲ್ಲೆಯಲ್ಲಿ ಉತ್ತಮ ಮಳೆಯ ಪರಿಣಾಮ ಹೆಚ್ಚಿನ ರೈತರು ಜಿಲ್ಲೆಯಲ್ಲಿ ಕಲ್ಲಂಗಡಿ ಹಣ್ಣು ಬೆಳೆದಿದ್ದಾರೆ. ಹಾಗಾಗಿ ಕಲ್ಲಂಗಡಿ ಹಣ್ಣು ಬೆಳೆದಿರುವ ರೈತರಿಗೆ ಒಳ್ಳೆಯ ಬೆಲೆ ಸಿಗುತ್ತಿದೆ, ಅದರ ಜೊತೆಗೆ ಕಲ್ಲಂಗಡಿ ಹಣ್ಣಿನ ವ್ಯಾಪಾರಸ್ಥರಿಗೂ ಒಳ್ಳೆಯ ಲಾಭ ಎನ್ನುವಂತಾಗಿದೆ.

ರಸ್ತೆಯ ಬದಿಗಳಲ್ಲಿ ಕಿ.ಮೀ.ಗೆ ಎರಡರಂತೆ ಇವೆ ಕಲ್ಲಂಗಡಿ ಸ್ಟಾಲ್​ಗಳು! ಬಿಸಿಲಿನ ತಾಪ ಜನರ ನೆತ್ತಿ ಸುಡುವ ಜೊತೆಗೆ ಬಾಯಾರಿಕೆಯಾಗಿ ಏನಾದರೂ ಒಂದಷ್ಟು ದಣಿವಾರಿಸಿಕೊಳ್ಳಲು ಸಿಕ್ಕರೆ ಸಾಕಪ್ಪಾ ಎನ್ನುವ ಸ್ಥಿತಿ ಇದೆ. ಅದಕ್ಕಾಗಿಯೇ ಕೋಲಾರ ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಪ್ರತೀ ಕಿ.ಮೀ ವ್ಯಾಪ್ತಿಯಲ್ಲಿ ಒಂದು ಎರಡು ಕಲ್ಲಂಗಡಿ ಹಣ್ಣಿನ ವ್ಯಾಪಾರಿಗಳು ಟೆಂಟ್​ ಹಾಕಿಕೊಂಡು ವ್ಯಾಪಾರ ಶುರುಮಾಡಿದ್ದಾರೆ. ಎಲ್ಲಾ ವ್ಯಾಪಾರಸ್ಥರಿಗೂ ಒಳ್ಳೆಯ ವ್ಯಾಪಾರ, ಒಂದಷ್ಟು ಆದಾಯ ಮಾಡಿಕೊಳ್ಳುವಂತಾಗಿದೆ ಎಂದು ವ್ಯಾಪಾರಸ್ಥರು ಖಷಿಯಾಗಿದ್ದಾರೆ.

ಒಟ್ಟಾರೆ ಬಯಲು ಸೀಮೆ ಕೋಲಾರದಲ್ಲಿ ಬಿಸಿಲ ತಾಪ ಹೆಚ್ಚಾಗಿದೆ. ಹೀಗಾಗಿ ಜನರು ಬಿಸಿಲ ಬೇಗೆಯಿಂದ ತತ್ತರಿಸಿದ್ದು, ತಂಪಾದ ಹಣ್ಣು ಹಂಪಲು ತಿಂದು, ಜ್ಯೂಸ್​ ಕುಡಿದು, ದಣಿವಾರಿಸಿಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಹೇಗಿರುತ್ತೋ ಆ ದೇವರೇ ಬಲ್ಲ. -ರಾಜೇಂದ್ರ ಸಿಂಹ

ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್