AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF​ನಲ್ಲಿ ಕೈಗಾರಿಕಾ ಟೌನ್ ಶಿಪ್ ನಿರ್ಮಾಣ, ಕೋಚಿಮುಲ್​ ವಿಭಜಿಸಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ

ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೆಸಿ ವ್ಯಾಲಿ ಹಾಗೂ ಹೆಚ್.ಎನ್.ವ್ಯಾಲಿ ನೀರಾವರಿ ಕೊಟ್ಟಿದ್ದು ನಾನು (ಸಿದ್ದರಾಮಯ್ಯ) ಮುಖ್ಯಮಂತ್ರಿಯಾಗಿದ್ದಾಗ. ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕೆಸಿ ವ್ಯಾಲಿ ವಿಷ ಎಂದು ಟೀಕೆ ಮಾಡುತ್ತಿದ್ದರು. ಆದರೆ ಕೆಸಿ ವ್ಯಾಲಿಗೆ ವಿಶ್ವಸಂಸ್ಥೆಯವರು ಶಬ್ಬಾಷ್​​ ಗಿರಿ ಕೊಟ್ಟಿದ್ದಾರೆ. ಇದು ಒಳ್ಳೆಯ ಯೋಜನೆ ಎಂದು ಹೇಳಿದ್ದಾರೆ. ಮಿಸ್ಟರ್ ಹೆಚ್​ಡಿ ಕುಮಾರಸ್ವಾಮಿ ಕೇಳಿ ತಿಳಿದುಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

KGF​ನಲ್ಲಿ ಕೈಗಾರಿಕಾ ಟೌನ್ ಶಿಪ್ ನಿರ್ಮಾಣ, ಕೋಚಿಮುಲ್​ ವಿಭಜಿಸಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ
ಸಿಎಂ ಸಿದ್ದರಾಮಯ್ಯ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ವಿವೇಕ ಬಿರಾದಾರ|

Updated on: Nov 11, 2023 | 3:03 PM

Share

ಕೋಲಾರ ನ.11: ನಗರದ ಅಭಿವೃದ್ಧಿ ಹಾಗೂ ಉದ್ಯೋಗಾವಕಾಶ ಒದಗಿಸುವ ನಿಟ್ಟಿನಲ್ಲಿ ಕೆಜಿಎಫ್​ನಲ್ಲಿ (KGF) ಕೈಗಾರಿಕಾ ಟೌನ್ ಶಿಪ್ ನಿರ್ಮಾಣಕ್ಕೆ ಅನುಮತಿ ನೀಡಿದ್ದೇನೆ. ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆ ಹಾಲು ಒಕ್ಕೂಟ (ಕೋಚಿಮುಲ್​) ವಿಭಜನೆ ಮಾಡುವುದಿಲ್ಲ. ಕೋಲಾರ (Kolar) ಹಾಲು ಒಕ್ಕೂಟಕ್ಕೆ ಸೋಲಾರ್ ಪ್ಲಾಂಟ್ ನಿರ್ಮಾಣಕ್ಕೆ ಅನುಮತಿ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಭರವಸೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ನ.11) ಬಂಗಾರಪೇಟೆ ತಾಲ್ಲೂಕು ಯರಗೋಳ್ ಗ್ರಾಮದ ಬಳಿ ನಿರ್ಮಾಣ ಮಾಡಿರುವ ಯರಗೋಳ್ ಅಣೆಕಟ್ಟನ್ನು ಲೋಕಾರ್ಪಣೆ ಮಾಡಿ, ಭಾಗಿನ‌ ಅರ್ಪಿಸಿದರು. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೆಸಿ ವ್ಯಾಲಿ ಹಾಗೂ ಹೆಚ್.ಎನ್.ವ್ಯಾಲಿ ನೀರಾವರಿ ಕೊಟ್ಟಿದ್ದು ನಾನು (ಸಿದ್ದರಾಮಯ್ಯ) ಮುಖ್ಯಮಂತ್ರಿಯಾಗಿದ್ದಾಗ. ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕೆಸಿ ವ್ಯಾಲಿ ವಿಷ ಎಂದು ಟೀಕೆ ಮಾಡುತ್ತಿದ್ದರು. ಆದರೆ ಕೆಸಿ ವ್ಯಾಲಿಗೆ ವಿಶ್ವಸಂಸ್ಥೆಯವರು ಶಬ್ಬಾಷ್​​ ಗಿರಿ ಕೊಟ್ಟಿದ್ದಾರೆ. ಇದು ಒಳ್ಳೆಯ ಯೋಜನೆ ಎಂದು ಹೇಳಿದ್ದಾರೆ. ಮಿಸ್ಟರ್ ಹೆಚ್​ಡಿ ಕುಮಾರಸ್ವಾಮಿ ಕೇಳಿ ತಿಳಿದುಕೊಳ್ಳಿ ಎಂದು ವಾಗ್ದಾಳಿ ಮಾಡಿದರು.

ಕೆ.ಸಿ.ವ್ಯಾಲಿ ಮಾಡಬೇಡಿ, ಜನರಿಗೆ ವಿಷ ಕೊಡುತ್ತಾರೆ ಎಂದು ಕುಮಾರಸ್ವಾಮಿ ಹೇಳುತ್ತಿದ್ದರು. ವಿಷದ ನೀರು ಎಂದು ಹೇಳುತ್ತಿದ್ದರು. ಇದರಿಂದ ಜಾನುವಾರುಗಳು ಸತ್ತಿವೆಯಾ? ಇದಕ್ಕೆ ಕುಮಾರಸ್ವಾಮಿ ಅವರಿಗೆ ಉತ್ತರ ಕೊಡಿ. ವಿಶ್ವಸಂಸ್ಥೆ ಅವರೇ ಬಂದು ಪರೀಕ್ಷೆ ನಡೆಸಿ ಹೋಗಿದ್ದಾರೆ. ಅವರನ್ನಾದರೂ ಕೇಳಿ ತಿಳಿದುಕೊಳ್ಳಿ.

ಇದನ್ನೂ ಓದಿ: ಬಹುನಿರೀಕ್ಷಿತ ಯರಗೋಳ್ ಡ್ಯಾಂ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ

ರಾಜಕೀಯಕ್ಕೋಸ್ಕರ ಟೀಕೆ ಮಾಡಬೇಡಿ. ಜನರನ್ನ ದಾರಿ ತಪ್ಪಿಸುವ ಕೆಲಸ ಮಾಡಬಾರದು, ಜನರಿಗೆ ವಿರುದ್ಧವಾದ ಕೆಲಸ ಮಾಡಬಾರದು. ಸಂಪೂರ್ಣ ಕೋಲಾರ ಮಲೆನಾಡು ಆಗೇ ಆಗುತ್ತದೆ ಎಂದು ಭರವಸೆ ನೀಡಿದರು. ರೈತರ ಪಂಪ್ ಸೆಟ್​ಗಳಿಗೆ ಏಳು ಗಂಟೆ ವಿದ್ಯುತ್ ಕೊಡಬೇಕೆಂದು ಹೇಳಿದ್ದೇವೆ, ಯಾವುದೇ ಕಾರಣಕ್ಕೂ ತಪ್ಪದಂತೆ ವಿದ್ಯುತ್ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನು ಸಿಎಂ ಸಿದ್ದರಾಮಯ್ಯ ಭಾಷಣದ ಭರದಲ್ಲಿ ಕೆ.ಸಿ. ವ್ಯಾಲಿ ಯೋಜನೆಗೆ ಶ್ರಮವಹಿಸಿದ ಜಿಲ್ಲೆಯ ಕಾಂಗ್ರೆಸ್​ ಶಾಸಕರ ಹೆಸರು ಹೇಳುತ್ತಾ ಹೆಚ್​​ ಡಿ ಕುಮಾರಸ್ವಾಮಿ ಅವರ ಹೆಸರು ಹೇಳಿದರು. ಆಮೇಲೆ ಹೆಚ್​ಡಿ ಕುಮಾರಸ್ವಾಮಿ ಅಲ್ಲ ಎಂಬ ಪ್ರಸಂಗವೂ ನಡೆಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು