AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF​ನಲ್ಲಿ ಕೈಗಾರಿಕಾ ಟೌನ್ ಶಿಪ್ ನಿರ್ಮಾಣ, ಕೋಚಿಮುಲ್​ ವಿಭಜಿಸಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ

ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೆಸಿ ವ್ಯಾಲಿ ಹಾಗೂ ಹೆಚ್.ಎನ್.ವ್ಯಾಲಿ ನೀರಾವರಿ ಕೊಟ್ಟಿದ್ದು ನಾನು (ಸಿದ್ದರಾಮಯ್ಯ) ಮುಖ್ಯಮಂತ್ರಿಯಾಗಿದ್ದಾಗ. ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕೆಸಿ ವ್ಯಾಲಿ ವಿಷ ಎಂದು ಟೀಕೆ ಮಾಡುತ್ತಿದ್ದರು. ಆದರೆ ಕೆಸಿ ವ್ಯಾಲಿಗೆ ವಿಶ್ವಸಂಸ್ಥೆಯವರು ಶಬ್ಬಾಷ್​​ ಗಿರಿ ಕೊಟ್ಟಿದ್ದಾರೆ. ಇದು ಒಳ್ಳೆಯ ಯೋಜನೆ ಎಂದು ಹೇಳಿದ್ದಾರೆ. ಮಿಸ್ಟರ್ ಹೆಚ್​ಡಿ ಕುಮಾರಸ್ವಾಮಿ ಕೇಳಿ ತಿಳಿದುಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

KGF​ನಲ್ಲಿ ಕೈಗಾರಿಕಾ ಟೌನ್ ಶಿಪ್ ನಿರ್ಮಾಣ, ಕೋಚಿಮುಲ್​ ವಿಭಜಿಸಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ
ಸಿಎಂ ಸಿದ್ದರಾಮಯ್ಯ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ವಿವೇಕ ಬಿರಾದಾರ|

Updated on: Nov 11, 2023 | 3:03 PM

Share

ಕೋಲಾರ ನ.11: ನಗರದ ಅಭಿವೃದ್ಧಿ ಹಾಗೂ ಉದ್ಯೋಗಾವಕಾಶ ಒದಗಿಸುವ ನಿಟ್ಟಿನಲ್ಲಿ ಕೆಜಿಎಫ್​ನಲ್ಲಿ (KGF) ಕೈಗಾರಿಕಾ ಟೌನ್ ಶಿಪ್ ನಿರ್ಮಾಣಕ್ಕೆ ಅನುಮತಿ ನೀಡಿದ್ದೇನೆ. ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆ ಹಾಲು ಒಕ್ಕೂಟ (ಕೋಚಿಮುಲ್​) ವಿಭಜನೆ ಮಾಡುವುದಿಲ್ಲ. ಕೋಲಾರ (Kolar) ಹಾಲು ಒಕ್ಕೂಟಕ್ಕೆ ಸೋಲಾರ್ ಪ್ಲಾಂಟ್ ನಿರ್ಮಾಣಕ್ಕೆ ಅನುಮತಿ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಭರವಸೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ನ.11) ಬಂಗಾರಪೇಟೆ ತಾಲ್ಲೂಕು ಯರಗೋಳ್ ಗ್ರಾಮದ ಬಳಿ ನಿರ್ಮಾಣ ಮಾಡಿರುವ ಯರಗೋಳ್ ಅಣೆಕಟ್ಟನ್ನು ಲೋಕಾರ್ಪಣೆ ಮಾಡಿ, ಭಾಗಿನ‌ ಅರ್ಪಿಸಿದರು. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೆಸಿ ವ್ಯಾಲಿ ಹಾಗೂ ಹೆಚ್.ಎನ್.ವ್ಯಾಲಿ ನೀರಾವರಿ ಕೊಟ್ಟಿದ್ದು ನಾನು (ಸಿದ್ದರಾಮಯ್ಯ) ಮುಖ್ಯಮಂತ್ರಿಯಾಗಿದ್ದಾಗ. ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕೆಸಿ ವ್ಯಾಲಿ ವಿಷ ಎಂದು ಟೀಕೆ ಮಾಡುತ್ತಿದ್ದರು. ಆದರೆ ಕೆಸಿ ವ್ಯಾಲಿಗೆ ವಿಶ್ವಸಂಸ್ಥೆಯವರು ಶಬ್ಬಾಷ್​​ ಗಿರಿ ಕೊಟ್ಟಿದ್ದಾರೆ. ಇದು ಒಳ್ಳೆಯ ಯೋಜನೆ ಎಂದು ಹೇಳಿದ್ದಾರೆ. ಮಿಸ್ಟರ್ ಹೆಚ್​ಡಿ ಕುಮಾರಸ್ವಾಮಿ ಕೇಳಿ ತಿಳಿದುಕೊಳ್ಳಿ ಎಂದು ವಾಗ್ದಾಳಿ ಮಾಡಿದರು.

ಕೆ.ಸಿ.ವ್ಯಾಲಿ ಮಾಡಬೇಡಿ, ಜನರಿಗೆ ವಿಷ ಕೊಡುತ್ತಾರೆ ಎಂದು ಕುಮಾರಸ್ವಾಮಿ ಹೇಳುತ್ತಿದ್ದರು. ವಿಷದ ನೀರು ಎಂದು ಹೇಳುತ್ತಿದ್ದರು. ಇದರಿಂದ ಜಾನುವಾರುಗಳು ಸತ್ತಿವೆಯಾ? ಇದಕ್ಕೆ ಕುಮಾರಸ್ವಾಮಿ ಅವರಿಗೆ ಉತ್ತರ ಕೊಡಿ. ವಿಶ್ವಸಂಸ್ಥೆ ಅವರೇ ಬಂದು ಪರೀಕ್ಷೆ ನಡೆಸಿ ಹೋಗಿದ್ದಾರೆ. ಅವರನ್ನಾದರೂ ಕೇಳಿ ತಿಳಿದುಕೊಳ್ಳಿ.

ಇದನ್ನೂ ಓದಿ: ಬಹುನಿರೀಕ್ಷಿತ ಯರಗೋಳ್ ಡ್ಯಾಂ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ

ರಾಜಕೀಯಕ್ಕೋಸ್ಕರ ಟೀಕೆ ಮಾಡಬೇಡಿ. ಜನರನ್ನ ದಾರಿ ತಪ್ಪಿಸುವ ಕೆಲಸ ಮಾಡಬಾರದು, ಜನರಿಗೆ ವಿರುದ್ಧವಾದ ಕೆಲಸ ಮಾಡಬಾರದು. ಸಂಪೂರ್ಣ ಕೋಲಾರ ಮಲೆನಾಡು ಆಗೇ ಆಗುತ್ತದೆ ಎಂದು ಭರವಸೆ ನೀಡಿದರು. ರೈತರ ಪಂಪ್ ಸೆಟ್​ಗಳಿಗೆ ಏಳು ಗಂಟೆ ವಿದ್ಯುತ್ ಕೊಡಬೇಕೆಂದು ಹೇಳಿದ್ದೇವೆ, ಯಾವುದೇ ಕಾರಣಕ್ಕೂ ತಪ್ಪದಂತೆ ವಿದ್ಯುತ್ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನು ಸಿಎಂ ಸಿದ್ದರಾಮಯ್ಯ ಭಾಷಣದ ಭರದಲ್ಲಿ ಕೆ.ಸಿ. ವ್ಯಾಲಿ ಯೋಜನೆಗೆ ಶ್ರಮವಹಿಸಿದ ಜಿಲ್ಲೆಯ ಕಾಂಗ್ರೆಸ್​ ಶಾಸಕರ ಹೆಸರು ಹೇಳುತ್ತಾ ಹೆಚ್​​ ಡಿ ಕುಮಾರಸ್ವಾಮಿ ಅವರ ಹೆಸರು ಹೇಳಿದರು. ಆಮೇಲೆ ಹೆಚ್​ಡಿ ಕುಮಾರಸ್ವಾಮಿ ಅಲ್ಲ ಎಂಬ ಪ್ರಸಂಗವೂ ನಡೆಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!