AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF​ನಲ್ಲಿ ಕೈಗಾರಿಕಾ ಟೌನ್ ಶಿಪ್ ನಿರ್ಮಾಣ, ಕೋಚಿಮುಲ್​ ವಿಭಜಿಸಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ

ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೆಸಿ ವ್ಯಾಲಿ ಹಾಗೂ ಹೆಚ್.ಎನ್.ವ್ಯಾಲಿ ನೀರಾವರಿ ಕೊಟ್ಟಿದ್ದು ನಾನು (ಸಿದ್ದರಾಮಯ್ಯ) ಮುಖ್ಯಮಂತ್ರಿಯಾಗಿದ್ದಾಗ. ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕೆಸಿ ವ್ಯಾಲಿ ವಿಷ ಎಂದು ಟೀಕೆ ಮಾಡುತ್ತಿದ್ದರು. ಆದರೆ ಕೆಸಿ ವ್ಯಾಲಿಗೆ ವಿಶ್ವಸಂಸ್ಥೆಯವರು ಶಬ್ಬಾಷ್​​ ಗಿರಿ ಕೊಟ್ಟಿದ್ದಾರೆ. ಇದು ಒಳ್ಳೆಯ ಯೋಜನೆ ಎಂದು ಹೇಳಿದ್ದಾರೆ. ಮಿಸ್ಟರ್ ಹೆಚ್​ಡಿ ಕುಮಾರಸ್ವಾಮಿ ಕೇಳಿ ತಿಳಿದುಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

KGF​ನಲ್ಲಿ ಕೈಗಾರಿಕಾ ಟೌನ್ ಶಿಪ್ ನಿರ್ಮಾಣ, ಕೋಚಿಮುಲ್​ ವಿಭಜಿಸಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ
ಸಿಎಂ ಸಿದ್ದರಾಮಯ್ಯ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Nov 11, 2023 | 3:03 PM

Share

ಕೋಲಾರ ನ.11: ನಗರದ ಅಭಿವೃದ್ಧಿ ಹಾಗೂ ಉದ್ಯೋಗಾವಕಾಶ ಒದಗಿಸುವ ನಿಟ್ಟಿನಲ್ಲಿ ಕೆಜಿಎಫ್​ನಲ್ಲಿ (KGF) ಕೈಗಾರಿಕಾ ಟೌನ್ ಶಿಪ್ ನಿರ್ಮಾಣಕ್ಕೆ ಅನುಮತಿ ನೀಡಿದ್ದೇನೆ. ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆ ಹಾಲು ಒಕ್ಕೂಟ (ಕೋಚಿಮುಲ್​) ವಿಭಜನೆ ಮಾಡುವುದಿಲ್ಲ. ಕೋಲಾರ (Kolar) ಹಾಲು ಒಕ್ಕೂಟಕ್ಕೆ ಸೋಲಾರ್ ಪ್ಲಾಂಟ್ ನಿರ್ಮಾಣಕ್ಕೆ ಅನುಮತಿ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಭರವಸೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ನ.11) ಬಂಗಾರಪೇಟೆ ತಾಲ್ಲೂಕು ಯರಗೋಳ್ ಗ್ರಾಮದ ಬಳಿ ನಿರ್ಮಾಣ ಮಾಡಿರುವ ಯರಗೋಳ್ ಅಣೆಕಟ್ಟನ್ನು ಲೋಕಾರ್ಪಣೆ ಮಾಡಿ, ಭಾಗಿನ‌ ಅರ್ಪಿಸಿದರು. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೆಸಿ ವ್ಯಾಲಿ ಹಾಗೂ ಹೆಚ್.ಎನ್.ವ್ಯಾಲಿ ನೀರಾವರಿ ಕೊಟ್ಟಿದ್ದು ನಾನು (ಸಿದ್ದರಾಮಯ್ಯ) ಮುಖ್ಯಮಂತ್ರಿಯಾಗಿದ್ದಾಗ. ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕೆಸಿ ವ್ಯಾಲಿ ವಿಷ ಎಂದು ಟೀಕೆ ಮಾಡುತ್ತಿದ್ದರು. ಆದರೆ ಕೆಸಿ ವ್ಯಾಲಿಗೆ ವಿಶ್ವಸಂಸ್ಥೆಯವರು ಶಬ್ಬಾಷ್​​ ಗಿರಿ ಕೊಟ್ಟಿದ್ದಾರೆ. ಇದು ಒಳ್ಳೆಯ ಯೋಜನೆ ಎಂದು ಹೇಳಿದ್ದಾರೆ. ಮಿಸ್ಟರ್ ಹೆಚ್​ಡಿ ಕುಮಾರಸ್ವಾಮಿ ಕೇಳಿ ತಿಳಿದುಕೊಳ್ಳಿ ಎಂದು ವಾಗ್ದಾಳಿ ಮಾಡಿದರು.

ಕೆ.ಸಿ.ವ್ಯಾಲಿ ಮಾಡಬೇಡಿ, ಜನರಿಗೆ ವಿಷ ಕೊಡುತ್ತಾರೆ ಎಂದು ಕುಮಾರಸ್ವಾಮಿ ಹೇಳುತ್ತಿದ್ದರು. ವಿಷದ ನೀರು ಎಂದು ಹೇಳುತ್ತಿದ್ದರು. ಇದರಿಂದ ಜಾನುವಾರುಗಳು ಸತ್ತಿವೆಯಾ? ಇದಕ್ಕೆ ಕುಮಾರಸ್ವಾಮಿ ಅವರಿಗೆ ಉತ್ತರ ಕೊಡಿ. ವಿಶ್ವಸಂಸ್ಥೆ ಅವರೇ ಬಂದು ಪರೀಕ್ಷೆ ನಡೆಸಿ ಹೋಗಿದ್ದಾರೆ. ಅವರನ್ನಾದರೂ ಕೇಳಿ ತಿಳಿದುಕೊಳ್ಳಿ.

ಇದನ್ನೂ ಓದಿ: ಬಹುನಿರೀಕ್ಷಿತ ಯರಗೋಳ್ ಡ್ಯಾಂ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ

ರಾಜಕೀಯಕ್ಕೋಸ್ಕರ ಟೀಕೆ ಮಾಡಬೇಡಿ. ಜನರನ್ನ ದಾರಿ ತಪ್ಪಿಸುವ ಕೆಲಸ ಮಾಡಬಾರದು, ಜನರಿಗೆ ವಿರುದ್ಧವಾದ ಕೆಲಸ ಮಾಡಬಾರದು. ಸಂಪೂರ್ಣ ಕೋಲಾರ ಮಲೆನಾಡು ಆಗೇ ಆಗುತ್ತದೆ ಎಂದು ಭರವಸೆ ನೀಡಿದರು. ರೈತರ ಪಂಪ್ ಸೆಟ್​ಗಳಿಗೆ ಏಳು ಗಂಟೆ ವಿದ್ಯುತ್ ಕೊಡಬೇಕೆಂದು ಹೇಳಿದ್ದೇವೆ, ಯಾವುದೇ ಕಾರಣಕ್ಕೂ ತಪ್ಪದಂತೆ ವಿದ್ಯುತ್ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನು ಸಿಎಂ ಸಿದ್ದರಾಮಯ್ಯ ಭಾಷಣದ ಭರದಲ್ಲಿ ಕೆ.ಸಿ. ವ್ಯಾಲಿ ಯೋಜನೆಗೆ ಶ್ರಮವಹಿಸಿದ ಜಿಲ್ಲೆಯ ಕಾಂಗ್ರೆಸ್​ ಶಾಸಕರ ಹೆಸರು ಹೇಳುತ್ತಾ ಹೆಚ್​​ ಡಿ ಕುಮಾರಸ್ವಾಮಿ ಅವರ ಹೆಸರು ಹೇಳಿದರು. ಆಮೇಲೆ ಹೆಚ್​ಡಿ ಕುಮಾರಸ್ವಾಮಿ ಅಲ್ಲ ಎಂಬ ಪ್ರಸಂಗವೂ ನಡೆಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ