AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Robertson pet: ಕಬ್ಬಿನ ಹಾಲು ಯಂತ್ರಕ್ಕೆ ಬುರ್ಕಾ ಸಿಲುಕಿ ಮಹಿಳೆ ಸಾವು

ಕೌಸರ್ (37) ಕಬ್ಬಿನ ಹಾಲು ತಗೆಯುವ ಯಂತ್ರಕ್ಕೆ ಸಿಲುಕಿ ಮೃತಪಟ್ಟ ಮಹಿಳೆ. ಕಬ್ಬಿನ ಹಾಲು ತೆಗೆಯುವ ವೇಳೆ ಮಹಿಳೆ ಧರಿಸಿದ್ದ ಬೂರ್ಕಾ ಯಂತ್ರಕ್ಕೆ ಸಿಲುಕಿದ ಪರಿಣಾಮ ಕುತ್ತಿಗೆ ಬಿಗಿದು ಸಾವು ಸಂಭವಿಸಿದೆ.

Robertson pet: ಕಬ್ಬಿನ ಹಾಲು ಯಂತ್ರಕ್ಕೆ ಬುರ್ಕಾ ಸಿಲುಕಿ ಮಹಿಳೆ ಸಾವು
Robertson pet: ಕಬ್ಬಿನ ಹಾಲು ಯಂತ್ರಕ್ಕೆ ಬೂರ್ಕಾ ಸಿಲುಕಿ ಮಹಿಳೆ ಸಾವು
TV9 Web
| Edited By: |

Updated on:Jul 05, 2022 | 4:20 PM

Share

ಕೋಲಾರ: ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ತಾವು ಧರಿಸಿದ್ದ ಬಟ್ಟೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಆಕಸ್ಮಿಕ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ರಾಬರ್ಟ್ ಸನ್ ಪೇಟೆಯ ತಹಶೀಲ್ದಾರ್ ಕಚೇರಿ ಬಳಿ ಈ ಘಟನೆ ನಡೆದಿದೆ.

ಕೌಸರ್ (37) ಕಬ್ಬಿನ ಹಾಲು ತಗೆಯುವ ಯಂತ್ರಕ್ಕೆ ಸಿಲುಕಿ ಮೃತಪಟ್ಟ ಮಹಿಳೆ. ಕಬ್ಬಿನ ಹಾಲು ತೆಗೆಯುವ ವೇಳೆ ಮಹಿಳೆ ಧರಿಸಿದ್ದ ಬುರ್ಕಾ (Burqa) ಯಂತ್ರಕ್ಕೆ ಸಿಲುಕಿದ ಪರಿಣಾಮ ಕುತ್ತಿಗೆ ಬಿಗಿದು ಸಾವು ಸಂಭವಿಸಿದೆ. ರಾಬರ್ಟ್‌ ಸನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಜೆಸಿಬಿ ವಾಹನದ ಟೈಯರ್ ಸ್ಫೋಟಗೊಂಡು ಯುವಕನ ಸಾವು

ದಾವಣಗೆರೆ: ಹರಿಹರ ತಾಲೂಕಿನ ಕುರಬರಹಳ್ಳಿಯಲ್ಲಿ ಜೆಸಿಬಿ ವಾಹನದ ಟೈಯರ್ ಸ್ಫೋಟಗೊಂಡು ಯುವಕ ಗಂಭೀರವಾಗಿ ಗಾಯಗೊಂಡಿದ್ದ ಪ್ರಕರಣದಲ್ಲಿ ಎಸ್​.ಎಸ್​. ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಯುವಕ ಮಾರುತಿ (28) ಕೊನೆಯುಸಿರೆಳೆದಿದ್ದಾರೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ನಿಟ್ಟೂರು ಗ್ರಾಮದ ನಿವಾಸಿ. ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತಿದ್ದ ಯುವಕ.

ದಿನಾಂಕ 3 ರಂದು ಜೆಸಿಬಿ ಮತ್ತು ಅಗ್ನಿ ಶಾಮಕ ವಾಹನದ 3 ಟೈಯರ್ ಪಂಕ್ಚರ್ ಹಾಕಿಸಲು ಕುರಬರಹಳ್ಳಿ ಗ್ರಾಮದ ಸಂದೀಪ್ ಮತ್ತು ಪರಮೇಶ್ವರಪ್ಪ ಅವರ ಗ್ಯಾರೇಜ್ ಗೆ ತಂದಿದ್ದ ಮಾರುತಿ. ಜೆಸಿಬಿ ವಾಹನದ ಟೈಯರ್ ಗೆ ಹವಾ ತುಂಬಿಸುವಾಗ ಗಾಳಿ ಹೆಚ್ಚಾಗಿ ಟೈಯರ್ ಸ್ಪೋಟಗೊಂಡಿತ್ತು. ಈ ವೇಳೆ ಟೈಯರ್ ಸ್ಫೋಟಗೊಂಡು, ಮೇಲೆ ಹಾರಿ ಕೆಳಕ್ಕೆ ಬಿದಿದ್ದ ಮಾರುತಿ. ಈ ವೇಳೆ ಕಾಲು, ಪಕ್ಕೆಲಬು, ಎದೆಗೆ ಪೆಟ್ಟಾಗಿ ನೆಲಕ್ಕೆ ಬಿದ್ದಿದ್ದ. ದಾವಣಗೆರೆ S S ಹೈಟೆಕ್ ಆಸ್ಪತ್ರೆಗೆ ಸೇರಿಸಿದಾಗ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾನೆ.

ಕೆಲಸದಲ್ಲಿ ನಿರ್ಲಕ್ಷ್ಯ ವಹಿಸಿದ ಗ್ಯಾರೇಜ್ ಸಿಬ್ಬಂದಿ ಸಂದೀಪ್ ಮತ್ತು ಪರಮೇಶ್ವರಪ್ಪ ವಿರುದ್ಧ ಹರಿಹರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲು ಮಾಡಿಕೊಳ್ಳಲಾಗಿದೆ.

ಕಾಡುಗೋಡಿ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಂಗಳೂರಿನ ಕಾಡುಗೋಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತ ದೇಹ ಪತ್ತೆಯಾಗಿದೆ. ಕೊಲೆ ಮಾಡಿ ಮೂಟೆಯಲ್ಲಿ ಕಟ್ಟಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತೂರು ಅಪಾರ್ಟ್ಮೆಂಟ್ ಬಳಿ ಮೃತದೇಹವನ್ನ ಪ್ಲಾಸ್ಟಿಕ್ ಚೀಲದಲ್ಲಿ ಮೂಟೆ ಕಟ್ಟಿ ಎಸೆಯಲಾಗಿದೆ. ಘಟನಾ ಸ್ಥಳಕ್ಕೆ ಕಾಡುಗೋಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇತ್ತೀಚೆಗೆ ಕೆಂಗೇರಿಯ ರಾಮಸಂದ್ರ ಬಳಿ ಯುವತಿ ಮೃತದೇಹ ಪತ್ತೆಯಾಗಿತ್ತು: ರಾಮಸಂದ್ರ ಬಳಿ ಯುವತಿ ಮೃತದೇಹ ಪತ್ತೆ ಪ್ರಕರಣ ಸಂಬಂಧ ಇನ್ನೂ ಮೃತ ಯುವತಿಯ ಗುರುತು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಈಗಾಗಲೇ ಸ್ಥಳದಲ್ಲಿ ಸಿಕ್ಕ ಸಣ್ಣ ಮಾದರಿಯನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಅದಾಗ್ಯೂ ಪೊಲೀಸರು ಯುವತಿಯ ಗುರುತು ಪತ್ತೆ ಹಚ್ಚುವ ನಿಟ್ಟಿನಲ್ಲಿ ಅಪಹರಣ ಮತ್ತು ಕಾಣೆಯಾದವರ ಪ್ರಕರಣವನ್ನು ಪರಿಶೀಲಿಸಲು ಮುಂದಾಗಿದ್ದಾರೆ.

ಯುವತಿಯನ್ನು ಜೀವಂತವಾಗಿ‌ ಸುಟ್ಟುಹಾಕಲಾಗಿಲ್ಲ. ಬದಲಾಗಿ ಬೇರೊಂದು ಸ್ಥಳದಲ್ಲಿ ಕೊಲೆ ಮಾಡಿ ರಾಮಸಂದ್ರ ಬಳಿ ಸುಟ್ಟು ಹಾಕಿರುವುದು ದೃಢವಾಗಿದೆ. ಏಕೆಂದರೆ ಮೃತದೇಹ ಸಿಕ್ಕ ಜಾಗದಲ್ಲಿ ಯಾವುದೇ ಒದ್ದಾಟದ ಕುರುಹು ಪೊಲೀಸರ ಕಣ್ಣಿಗೆ ಪತ್ತೆಯಾಗಿಲ್ಲ. ಸದ್ಯ ಆರೋಪಿಗಳ ಪತ್ತೆ ಪೊಲೀಸರಿಗೆ ಅತಿದೊಡ್ಡ ಸವಾಲು ಆಗಿದ್ದು, ಯಾವಾಗ ಕೃತ್ಯ ನಡೆದಿದೆ ಎಂದು ಇನ್ನೂ ಗೊತ್ತಾಗಿಲ್ಲ. ಹಾಗಾಗಿ‌ ಟವರ್ ಡಂಪ್ ಆಧಾರದ ಮೇಲೆ ಪತ್ತೆಹಚ್ಚುವುದು ಕಷ್ಟವಾಗಿದೆ. ಸರಿಯಾದ ಸಮಯ ಗೊತ್ತಾದರೆ ಟವರ್ ಡಂಪ್ ಮೂಲಕ ಆರೋಪಿಗಳನ್ನು ಪತ್ತೆ ಮಾಡಬಹುದು. ಸದ್ಯ ಯಾವಾಗ ಕೃತ್ಯ ನಡೆದಿದೆ ಅನ್ನೋದನ್ನ ಪತ್ತೆ‌ ಮಾಡಲು ಪೊಲೀಸರು ಮುಂದಾಗಿದ್ದಾರೆ.

Published On - 3:56 pm, Tue, 5 July 22

ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ