AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ನವಜಾತ ಶಿಶುವನ್ನು ಕದ್ದಿದ್ದ ಕಳ್ಳಿ ಅರೆಸ್ಟ್​: ತಾಯಿ ಮಡಿಲು ಸೇರಿದ ಮಗು

ಕೋಲಾರ ಜಿಲ್ಲಾ ಆಸ್ಪತ್ರೆಯಿಂದ ನವಾಜಾತ ಶಿಶುವನ್ನು ಕದ್ದು ಪರಾರಿಯಾಗುತ್ತಿದ್ದ ಆರೋಪಿಗಳನ್ನು ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿ ಹೆಡೆಮುರಿ ಕಟ್ಟಿದ್ದಾರೆ. ಅಪರಿಚಿತ ಮೂವರು ಮಹಿಳೆಯರು ನವಜಾತ ಶಿಶುವನ್ನು ಕದ್ದು ತಮಿಳುನಾಡಿಗೆ ಸಾಗಿಸುತ್ತಿದ್ದರು.

ಕೋಲಾರ: ನವಜಾತ ಶಿಶುವನ್ನು ಕದ್ದಿದ್ದ ಕಳ್ಳಿ ಅರೆಸ್ಟ್​: ತಾಯಿ ಮಡಿಲು ಸೇರಿದ ಮಗು
ತಾಯಿ ಮಡಿಲು ಸೇರಿದ ಮಗು
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ವಿವೇಕ ಬಿರಾದಾರ|

Updated on:Oct 27, 2023 | 3:12 PM

Share

ಕೋಲಾರ ಅ.27: ಎಸ್‌ಎನ್‌‌ ಜಿಲ್ಲಾ ಆಸ್ಪತ್ರೆ(Diaristic Hospital) ಹೆರಿಗೆ ವಾರ್ಡ್‌ನಿಂದ ಕಳುವಾಗಿದ್ದ ನವಜಾತ ಶಿಶುವನ್ನು (Baby) ಕೋಲಾರ (Kolar) ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ. ಮಗು ಕಳ್ಳತನ ಮಾಡಿದ್ದ ಆರೋಪಿಗಳ ಪೈಕಿ ಓರ್ವ ಮಹಿಳೆಯನ್ನು ಬಂಧಿಸಲಾಗಿದೆ.

ಗುರುವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ವಾರ್ಡ್‌ನಲ್ಲಿ ತಾಯಿ ನಿದ್ದೆ ಹೋದ ಸಂದರ್ಭದಲ್ಲಿ ಮೂವರು ಅಪರಿಚಿತ ಮಹಿಳೆಯರು ಹೊಂಚು ಹಾಕಿ ಮಗುವನ್ನು ಕದ್ದೊಯ್ದಿದಿದ್ದಾರೆ. ಮೂವರು ಮಹಿಳೆಯರು ನವಜಾತ ಗಂಡು ಶಿಶುವನ್ನು ಯಾರಿಗೂ ಗೊತ್ತಾಗದಂತೆ ಕಾಲೇಜು ಬ್ಯಾಗಿನಲ್ಲಿ ಬಚ್ಚಿಟ್ಟುಕೊಂಡು ಪರಾರಿಯಾಗಿದ್ದಾರೆ. ಆಸ್ಪತ್ರೆಯಿಂದ ಹೊರ ಬಂದು ಆಟೊ ಹತ್ತುತ್ತಿರುವ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಇದನ್ನೂ ಓದಿ: ಕೊಪ್ಪಳ: ಮನೆ ಮುಂದಿನ ಕಾಲುವೆಗೆ ಬಿದ್ದು 14 ತಿಂಗಳ ಮಗು ಸಾವು

ವಿಷಯ ತಿಳಿದು ಪೊಲೀಸರು ಕ್ಷಿಪ್ರವಾಗಿ ಕಾರ್ಯಾಚರಣೆಗೆ ಇಳಿದ ಮಹಿಳಾ ಪೊಲೀಸರು ಆರೋಪಿಗಳ ಚಲನವನದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅಲ್ಲದೆ ಆಸ್ಪತ್ರೆ ಮತ್ತು ನಗರದ ವಿವಿಧ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಆರೋಪಿಗಳು ಬೈಕ್​​ನಲ್ಲಿ ತಮಿಳುನಾಡಿನ ಕಡೆ ಹೋಗುತ್ತಿರುವುದು ಗೊತ್ತಾಗಿದೆ. ಕೂಡಲೆ ಪೊಲೀಸರು ಆರೋಪಿಗಳನ್ನು ಚೇಸ್​​ ಮಾಡಿ ತಮಿಳುನಾಡಿನ ಬೇರಿಕೆ ಬಳಿ ಹಿಡಿದಿದ್ದಾರೆ. ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಉಳಿದ‌ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ನಾಲ್ಕು ದಿನದ ಕಂದಮ್ಮ ತಾಯಿ ಮಡಿಲು ಸೇರಿದೆ. ಮಗುವನ್ನು ಕಂಡು ತಾಯಿಯ ಕಣ್ಣೀರು ಹಾಕಿದ್ದಾರೆ. ತಾಯಿ ಮಗುವನ್ನು ಬಿಗಿದಪ್ಪಿ ಸಂತೋಷಪಟ್ಟಿದ್ದಾಳೆ. ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಿಎಂ ಸಿದ್ದರಾಮಯ್ಯ ಶ್ಲಾಘನೆ

ನವಜಾತ ಶಿಶು ಅಪಹರಣ ಪ್ರಕರಣ ಸುಖ್ಯಾಂತ ಕಂಡ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಗೆ ಟ್ವೀಟ್​ ಮೂಲಕ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಅಭಿನಂದನೆ ತಿಳಿಸಿದ್ದಾರೆ. ಅಪಹರಣವಾಗಿದ್ದ ನವಜಾತ ಶಿಶುವನ್ನು ಕೋಲಾರ ಪೊಲೀಸ್ ಇಲಾಖೆ ಕೇವಲ 5 ಗಂಟೆಯಲ್ಲಿ ಪತ್ತೆ ಹಚ್ಚಿದೆ. ಮಗುವನ್ನು ಮತ್ತೆ ತಾಯಿ ಮಡಿಲಿಗೆ ಸೇರಿಸಿದ್ದ ಪೊಲೀಸರ ಕಾರ್ಯವೈಖರಿಗೆ ಮೆಚ್ಚಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ 

Published On - 7:41 am, Fri, 27 October 23

Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ