ಮದ್ವೆಯೂ ಇಲ್ಲ, ಕೆಲ್ಸವೂ ಸಿಗ್ತಿಲ್ಲ: ಕೊಲ್ಕತ್ತಾ ಯುವತಿ ಕಂಗಾಲು! ಯಾಕೆ ಗೊತ್ತಾ?

ಬೆಂಗಳೂರು: ಲವ್ ಬ್ರೇಕಪ್ ಆಗಿದ್ದಕ್ಕೆ ಮಾಜಿ ಪ್ರಿಯಕರ ಪ್ರೀತಿಸಿದ ಯುವತಿಗೆ ಬ್ಲಾಕ್‌ಮೇಲ್ ಮಾಡಿದ್ದಾನೆ. ಕಳೆದ ಎರಡು ವರ್ಷಗಳಿಂದ ರೆಸ್ಟೊರೆಂಟ್ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೊಲ್ಕತ್ತಾ ಮೂಲದ ಯುವತಿ ಸದ್ಯ ಬೆಂಗಳೂರಿನಲ್ಲಿ ಬಂದು ಕಾರ್ಯ ನಿರ್ವಹಿಸುತ್ತಿದ್ದರು. ಈ ಮೇಳೆ ಕಾರಣಾಂತರಗಳಿಂದ ಪ್ರಿಯಕರನ ಜೊತೆ ಬ್ರೇಕಪ್ ಆಗಿದೆ. ಹೀಗಾಗಿ ಆರೋಪಿ ಸಂತ್ರಸ್ಥ ಯುವತಿಯ ಅಶ್ಲೀಲ ಫೋಟೋಗಳನ್ನ ತೋರಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದಾನೆ. ಫೇಸ್​ಬುಕ್​ ಪ್ರೀತಿಗೆ ಜೀವನ ಹಾಳು: ಸಂತ್ರಸ್ಥ ಯುವತಿ ಕೊಲ್ಕತ್ತಾದಲ್ಲಿ ಕಾರ್ಯನಿರ್ವಹಿಸುತ್ತಿರುವಾಗ ಫೇಸ್​ಬುಕ್ ಮೂಲಕ ಸ್ಟಾಲೋನ್ ವುಡ್ ಎಂಬಾ ಯುವಕನ […]

ಮದ್ವೆಯೂ ಇಲ್ಲ, ಕೆಲ್ಸವೂ ಸಿಗ್ತಿಲ್ಲ: ಕೊಲ್ಕತ್ತಾ ಯುವತಿ ಕಂಗಾಲು! ಯಾಕೆ ಗೊತ್ತಾ?
ಸಾಧು ಶ್ರೀನಾಥ್​

Updated on: Jan 28, 2020 | 12:38 PM

ಬೆಂಗಳೂರು: ಲವ್ ಬ್ರೇಕಪ್ ಆಗಿದ್ದಕ್ಕೆ ಮಾಜಿ ಪ್ರಿಯಕರ ಪ್ರೀತಿಸಿದ ಯುವತಿಗೆ ಬ್ಲಾಕ್‌ಮೇಲ್ ಮಾಡಿದ್ದಾನೆ. ಕಳೆದ ಎರಡು ವರ್ಷಗಳಿಂದ ರೆಸ್ಟೊರೆಂಟ್ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೊಲ್ಕತ್ತಾ ಮೂಲದ ಯುವತಿ ಸದ್ಯ ಬೆಂಗಳೂರಿನಲ್ಲಿ ಬಂದು ಕಾರ್ಯ ನಿರ್ವಹಿಸುತ್ತಿದ್ದರು. ಈ ಮೇಳೆ ಕಾರಣಾಂತರಗಳಿಂದ ಪ್ರಿಯಕರನ ಜೊತೆ ಬ್ರೇಕಪ್ ಆಗಿದೆ. ಹೀಗಾಗಿ ಆರೋಪಿ ಸಂತ್ರಸ್ಥ ಯುವತಿಯ ಅಶ್ಲೀಲ ಫೋಟೋಗಳನ್ನ ತೋರಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದಾನೆ.

ಫೇಸ್​ಬುಕ್​ ಪ್ರೀತಿಗೆ ಜೀವನ ಹಾಳು:
ಸಂತ್ರಸ್ಥ ಯುವತಿ ಕೊಲ್ಕತ್ತಾದಲ್ಲಿ ಕಾರ್ಯನಿರ್ವಹಿಸುತ್ತಿರುವಾಗ ಫೇಸ್​ಬುಕ್ ಮೂಲಕ ಸ್ಟಾಲೋನ್ ವುಡ್ ಎಂಬಾ ಯುವಕನ ಪರಿಚಯವಾಗುತ್ತೆ. ನಂತರ ಆ ಪರಿಚಯ ಇಬ್ಬರ ನಡುವೆ ಪ್ರೇಮವಾಗುವಂತೆ ಮಾಡುತ್ತೆ. ಕೆಲ ದಿನಗಳ ಕಾಲ ಇಬ್ಬರು ಪ್ರೇಮ ಪಕ್ಷಿಗಳಾಗಿ ಕೊಲ್ಕತ್ತಾದಲ್ಲಿ ಹಾರಾಡಿದ್ದಾರೆ. ಆದರೆ ಇತ್ತೀಚೆಗೆ ಸಂತ್ರಸ್ಥ ಯುವತಿ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದಾರೆ. ಈ ವೇಳೆ ಆರೋಪಿಯ ಜೊತೆ ಜಗಳವಾಗಿ ಲವ್ ಬ್ರೇಕಪ್ ಆಗಿದೆ. ಹೀಗಾಗಿ ಕೊಲ್ಕತ್ತಾದಲ್ಲಿ ಇಬ್ಬರು ಜೊತೆಯಲ್ಲಿ ತೆಗೆಸಿಕೊಂಡ ಫೋಟೋಗಳು, ಯುವತಿಯ ಅಶ್ಲೀಲ ಫೋಟೋಗಳು, ಖಾಸಗಿ ಫೋಟೋಗಳನ್ನ ಇಟ್ಟಿಕೊಂಡು ಬ್ಲಾಕ್‌ಮೇಲ್ ಮಾಡ್ತಿದ್ದಾನೆ. ಅಲ್ಲದೆ ತನ್ನ ಇಬ್ಬರು ಸ್ನೇಹಿತರಿಗೆ ಯುವತಿಯ ಫೋಟೋ ಶೇರ್ ಮಾಡಿದ್ದಾನೆ.

ಫೋಟೋಯಿಂದ ಮುರಿದು ಬಿತ್ತು ಮದುವೆ:
ಸಂತ್ರಸ್ಥ ಯುವತಿಗೆ ಮದುವೆ ನಿಶ್ಚಯವಾಗಿತ್ತು. ಇದನ್ನು ತಿಳಿದ ಆರೋಪಿ ಸ್ಟಾಲೋನ್ ಹಾಗೂ ಆತನ ಗೆಳೆಯ ಇಕ್ಬಾಲ್ ಸಂತ್ರಸ್ಥ ಯುವತಿಯ ಅಶ್ಲೀಲ ಫೋಟೋವನ್ನು ಮದುವೆ ನಿಶ್ಚಯವಾಗಿದ್ದ ಮದುವೆ ಗಂಡಿಗೆ ಶೇರ್ ಮಾಡಿದ್ದಾರೆ. ಸದ್ಯ ಮದುವೆಯೂ ಇಲ್ಲದೇ, ಬೆಂಗಳೂರಲ್ಲಿ ಕೆಲಸವೂ ಸಿಗದೇ ಯುವತಿ ಕಂಗಾಲಾಗಿದ್ದಾಳೆ. ನೊಂದ ಯುವತಿಯಿಂದ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Published On - 5:28 pm, Mon, 27 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us