AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ಕೋಟಿ ರೂ. ಕಾಮಗಾರಿಗೆ 5,000 ಕೋಟಿ ಪರಿಹಾರ ಬೇಡಿಕೆ! ಸರ್ಕಾರಕ್ಕೇ ಸಂಕಷ್ಟ ತಂದಿಟ್ಟ ಹೊರ ರಾಜ್ಯದ ಗುತ್ತಿಗೆದಾರ

ಕೊಪ್ಪಳ ಜಿಲ್ಲೆಯ ಆನೆಗೊಂದಿ ತೂಗು ಸೇತುವೆ ಕುಸಿತದ ಪ್ರಕರಣದಲ್ಲಿ ಗುತ್ತಿಗೆದಾರರು ಸರ್ಕಾರದ ವಿರುದ್ಧ ಐದು ಸಾವಿರ ಕೋಟಿ ರೂ. ಪರಿಹಾರಕ್ಕೆ ಬೇಡಿಕೆ ಇಟ್ಟ ಪ್ರಕರಣ ಇದೀಗ ಕುತೂಹಲದ ಘಟ್ಟ ತಲುಪಿದೆ. ಒಂದು ಸಣ್ಣ ಕಾಮಗಾರಿಗೆ ಭಾರಿ ಪರಿಹಾರದ ಬೇಡಿಕೆಯಿಂದ ಸರ್ಕಾರಕ್ಕೆ ದೊಡ್ಡ ಸವಾಲು ಎದುರಾಗಿದೆ. ಲೆಕ್ಕಪತ್ರ ಸಮಿತಿ ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಮಧ್ಯಸ್ಥಿಕೆಗೆ ಶಿಫಾರಸು ಮಾಡಿದೆ. ಪ್ರಕರಣದ ಹಿನ್ನೆಲೆ ಏನು? ಯಾಕೆ ಹೀಗಾಯ್ತು? ಸಮಗ್ರ ವಿವರ ಇಲ್ಲಿದೆ.

6 ಕೋಟಿ ರೂ. ಕಾಮಗಾರಿಗೆ 5,000 ಕೋಟಿ ಪರಿಹಾರ ಬೇಡಿಕೆ! ಸರ್ಕಾರಕ್ಕೇ ಸಂಕಷ್ಟ ತಂದಿಟ್ಟ ಹೊರ ರಾಜ್ಯದ ಗುತ್ತಿಗೆದಾರ
ಸ್ಪೀಕರ್‌ ಯುಟಿ ಖಾದರ್‌ ಆದೇಶದಂತೆ ವಿಧಾನಸಭೆಯ ಮೊಗಸಾಲೆಯಲ್ಲಿ 15 ರಿಕ್ಲೈನರ್‌ ಮತ್ತು 2 ಮಸಾಜ್ ಚೇರ್‌ಗಳನ್ನು ವಿಧಾನಸಭೆ ಸಚಿವಾಲಯ ಅಳವಡಿಸಿದ್ದು, ಮಂಗಳವಾರದಿಂದ ವಿಧಾನಸೌಧದ ಲಾಂಜ್‌ನಲ್ಲಿ ಶಾಸಕರಿಗೆ 17 ಆರಾಮ ಆಸನಗಳ ಸೌಲಭ್ಯ ಸಿಗಲಿದೆ.
ಪ್ರಸನ್ನ ಗಾಂವ್ಕರ್​
| Edited By: |

Updated on:Feb 06, 2025 | 11:02 AM

Share

ಬೆಂಗಳೂರು, ಫೆಬ್ರವರಿ 6: ಅರಮನೆ ಮೈದಾನದ ಟಿಡಿಆರ್ ಪರಿಹಾರಕ್ಕಿಂತಲೂ ದೊಡ್ಡ ಪ್ರಕರಣ ಒಂದು ಈಗ ಬಹಿರಂಗವಾಗಿದೆ. ಕೊಪ್ಪಳ ಜಿಲ್ಲೆಯ ಆನೆಗೊಂದಿ ತೂಗು ಸೇತುವೆ ಕಾಮಗಾರಿ ನಷ್ಟ ಪರಿಹಾರ ಸಂಬಂಧ ಗುತ್ತಿಗೆದಾರರೊಬ್ಬರು ಸರ್ಕಾರಕ್ಕೆ ಸೆಡ್ಡು ಹೊಡೆದ ಪರಿಣಾಮ ಇದೀಗ ಮುಖ್ಯ ಕಾರ್ಯದರ್ಶಿಗೆ ಅರೆಸ್ಟ್ ವಾರಂಟ್ ಜಾರಿಯಾಗಿದೆ. 6 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗೆ 5000 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಬೇಡಿಕೆ ಇಟ್ಟ ವಿಶೇಷ ಪ್ರಕರಣ ಇದಾಗಿದೆ.

ತೂಗು ಸೇತುವೆ ಕಾಮಗಾರಿ ನಷ್ಟ ಪರಿಹಾರ ವಿಚಾರದಲ್ಲಿ ಹೊರ ರಾಜ್ಯದ ಗುತ್ತಿಗೆದಾರರೊಂದಿಗೆ ಕಾನೂನು ಸಂಘರ್ಷ ಎದುರಾಗಿದ್ದು, 5,219 ಕೋಟಿ ರೂಪಾಯಿ ಪರಿಹಾರ ಕೊಡಬೇಕು ಎಂದು ಅವರು ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

ಗುತ್ತಿಗೆದಾರನ ವರಸೆ ಕಂಡು ಕಂಗಾಲಾದ ಸಾರ್ವಜನಿಕ ಲೆಕ್ಕಪತ್ರ ಸಮಿತಿ, ಮಧ್ಯಸ್ಥಿಕೆ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡಿದೆ.

ಪ್ರಕರಣದ ಹಿನ್ನೆಲೆ, ಟೈಮ್​ಲೈನ್

  • ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗೊಂದಿ ಹತ್ತಿರ ತುಂಗಭದ್ರ ನದಿಗೆ ಅಡ್ಡಲಾಗಿ ತೂಗು ಸೇತುವೆ ನಿರ್ಮಾಣ ಕಾಮಗಾರಿ. 1993ರಲ್ಲಿ ಶಂಕುಸ್ಥಾಪನೆ ಮಾಡಲಾಗಿತ್ತು.
  • ನಬಾರ್ಡ್ ಸಾಲ ಸಹಾಯದ ಆರ್‌ಐಡಿಎಫ್-2 ಯೋಜನೆಯಡಿ ರೂ. 4.12 ಕೋಟಿ ಮೊತ್ತದಲ್ಲಿ ಅನುಮೋದನೆ ಪಡೆಯಲಾಗಿತ್ತು
  • ತುಂಗಭದ್ರಾ ನದಿಯ ಪಾತ್ರದಲ್ಲಿ ತೂಗು ಸೇತುವೆ ನಿರ್ಮಾಣ ಮಾಡುವ ಕಾಮಗಾರಿಯನ್ನು ಹೈದರಾಬಾದ್ ಮೂಲದ ಬಿವಿ ಸುಬ್ಬಾರೆಡ್ಡಿ ಅಂಡ್ ಸನ್ಸ್ ಟೆಂಡರ್‌ ಪಡೆದು 1997ರಲ್ಲಿ, ಪ್ರಾರಂಭಿಸಲಾಗಿತ್ತು.
  • ಕಾಮಗಾರಿಯು ಪ್ರಗತಿಯಲ್ಲಿದ್ದಾಗಲೇ 1999ರಲ್ಲೇ ಹಂಪಿ ವಿಶ್ವಪರಾಂಪರಿಕ ಪ್ರದೇಶ ಘೋಷಣೆಯಾಯ್ತು. ಆಗ ಕಾಮಗಾರಿ ಸ್ಥಗಿತವಾಯ್ತು.
  • ರಾಜ್ಯ ಸರ್ಕಾರದ ಒತ್ತಾಯ ಹಾಗೂ ಕೇಂದ್ರ ಸರ್ಕಾರದ ಮಧ್ಯಸ್ತಿಕೆಯಿಂದ ಮತ್ತೆ 2005ರಂದು ಯುನೆಸ್ಕೊ ತಂಡ ಸೇತುವೆ ನಿರ್ಮಾಣಕ್ಕೆ‌ ಅನುಮತಿ ನೀಡಿತು.
  • ಈ ಕಾಮಗಾರಿಯನ್ನು ಮತ್ತೆ ಬಿವಿ ರೆಡ್ಡಿ ಅಂಡ್ ಸನ್ಸ್ ಕಂಪನಿ, ಹೈದರಾಬಾದ್ ಇವರಿಗೆ ರೂ. 6.62 ಕೋಟಿ ರೂ.ಗೆ ವಹಿಸಲಾಯಿತು.
  • ಗುತ್ತಿಗೆ ಕರಾರಿನಂತೆ ಗುತ್ತಿಗೆದಾರರು ಈ ಕಾಮಗಾರಿಗೆ ಬೇಕಾದ ತಾಂತ್ರಿಕ ವಿನ್ಯಾಸ, ನಕ್ಷೆ, ಅನುಷ್ಠಾನ ಯೋಜನೆ ಇವುಗಳನ್ನು ನುರಿತ ತಜ್ಞರಿಂದ ತಯಾರಿಸಿ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯಬೇಕಿತ್ತು.
  • ಆದರೆ ಗುತ್ತಿಗೆದಾರರು ಒಡಂಬಡಿಕೆಯ ಷರತ್ತುಗಳನ್ನು ಪಾಲಿಸಲಿಲ್ಲ. ಕಾಮಗಾರಿಗೆ ಬೇಕಾಗಿರುವ ಅವಶ್ಯ ವಿನ್ಯಾಸ, ನಕ್ಷೆ ಇವುಗಳನ್ನು ಸಲ್ಲಿಸಿ, ಇಲಾಖೆಯ ಅನುಮೋದನೆ ಪಡೆಡಿರಲಿಲ್ಲ.
  • ಬಾಕಿ ಇದ್ದ 24 ಮೀಟರ್ ಅಂಕಣ ನಿರ್ಮಿಸಲು ಮುಂದಾದಾಗ 22-01-2009ರಂದು ಕಾಂಕ್ರೀಟ್ ಹಾಕುವ ಸಮಯದಲ್ಲಿ ಸೇತುವೆಯು ಕುಸಿಯಿತು.
  • ಈ ಘಟನೆಯಿಂದ ಲೋಕೋಪಯೋಗಿ ಇಲಾಖೆಗೆ ಗುತ್ತಿಗೆದಾರರ ಬೇಜವಾಬ್ದಾರಿಯಿಂದ 5.95 ಕೋಟಿ ನಷ್ಟವಾಗಿದೆ.
  • ಈ ದುರ್ಘಟನೆಯಲ್ಲಿ 8 ಜನ ಕಾರ್ಮಿಕರು ಮರಣ ಹೊಂದಿದ್ದು, 41 ಜನರು ಗಾಯಗೊಂಡಿದ್ದರು.
  • ಗುತ್ತಿಗೆದಾರ ಬಿವಿ ರೆಡ್ಡಿ ಸರ್ಕಾರದ ವಿರುದ್ಧ ಗಂಗಾವತಿ ನ್ಯಾಯಾಲಯದಲ್ಲಿ 2012 ರಂದು 7.00 ಕೋಟಿ ಪರಿಹಾರ ಕೋರಿ ಕೇಸ್ ದಾಖಲಿಸ್ತಾರೆ.
  • ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 20-02-2021ರಲ್ಲಿ ತೀರ್ಪು ಪ್ರಕಟವಾಯ್ತು.
  • ಅದರಂತೆ ಗುತ್ತಿಗೆದಾರರಿಗೆ 5.64 ಕೋಟಿ ರೂ. ಮೊತ್ತ ಪರಿಹಾರ ಶೇ 18 ರಷ್ಟು ಬಡ್ಡಿ ನೀಡುವಂತೆ ಆದೇಶ ನೀಡಿತು.
  • ಈ ಆದೇಶದ ವಿರುದ್ಧ ಸರ್ಕಾರ ಹೈಕೋರ್ಟ್ ಧಾರವಾಡ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿತು.
  • ಗುತ್ತಿಗೆದಾರರು ಪುನಃ ಕೊಪ್ಪಳ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಪರಿಣಾಮ ಹಿನ್ನೆಲೆಯಲ್ಲಿ ನ್ಯಾಯಾಧೀಶರು 20-02-2021 ರಂದು 7.00 ಕೋಟಿ ರೂ. ಪರಿಹಾರ ಶೇ 24 ರಷ್ಟು ಬಡ್ಡಿ ನೀಡಬೇಕು ಎಂದು ಆದೇಶಿಸಿದರು.
  • ಗುತ್ತಿಗೆದಾರ ಬಿವಿ ರೆಡ್ಡಿ ಕೊಪ್ಪಳ ಜಿಲ್ಲಾ ನ್ಯಾಯಾಲಯದ ತೀರ್ಪಿನ ಮೊತ್ತ ರೂ. 7.00 ಕೋಟಿಗೆ ಹೆಚ್ಚುವರಿಯಾಗಿ ಆದಾಯದ ನಷ್ಟ – 15%, ವಾರ್ಷಿಕ ಬಡ್ಡಿ – 15%, ಓವರ್ ಹೆಡ್ ಚಾರ್ಜಸ್ – 25%, ಜೊತೆಗೆ ಹಡ್ಸನ್ ಫಾರ್ಮುಲಾ‌ ಪ್ರಕಾರ ಒಟ್ಟು ನಷ್ಟವನ್ನು ಅಂದಾಜಿಸಿ ಈ ಮೊತ್ತಕ್ಕೆ ಒಟ್ಟಾರೆ ಬಡ್ಡಿ 24% ಸೇರಿಸಿ ಒಟ್ಟು ಪರಿಹಾರದ ಮೊತ್ತ 2351.35 ಕೋಟಿ ಕೊಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. – ಈ ಬಗ್ಗೆ ಗುತ್ತಿಗೆದಾರರು ಪರಿಹಾರ ಮೊತ್ತವನ್ನು ನೀಡಲು ಕೋರಿ ಅನೇಕ ಮನವಿ ಪತ್ರಗಳನ್ನು ಸಲ್ಲಿಸಿದ್ದರು.
  • ಅದರಂತೆ 24-09-2024 ರಲ್ಲಿ 4645.59 ಕೋಟಿ ರೂ. ಪರಿಹಾರಕ್ಕೆ ಗುತ್ತಿಗೆದಾರ ಮನವಿ ಪತ್ರ ಸಲ್ಲಿಸಿದ್ದರು.
  • ಜಿಲ್ಲಾ ನ್ಯಾಯಾಲಯದ ತೀರ್ಪಿನ ಮೊತ್ತವನ್ನು ಗುತ್ತಿಗೆದಾರರು ಹೆಚ್ಚಳ ಮಾಡಿ ಭಾರಿ ಮೊತ್ತದ ಪರಿಹಾರ ಕೋರುತ್ತಿರುವುದರಿಂದ ಈ ಬಗ್ಗೆ ಯಾವುದೇ ಕ್ರಮ ವಹಿಸಲಾಗಿರುವುದಿಲ್ಲ.
  • ಈ ನಡುವೆ ಗುತ್ತಿಗೆದಾರರು ಕೊಪ್ಪಳ ನ್ಯಾಯಾಲಯದಲ್ಲಿ ಹೂಡಿದ 2021 ರ ಅಫಿಡೆವಿಟ್ಅನ್ನು‌ ಮತ್ತೊಮ್ಮೆ 05-09-2024ರಂದು ಸಲ್ಲಿಸಿ 5219.76 ಕೋಟಿ ರೂ. ಮೊತ್ತಕ್ಕೆ ಮನವಿ ಸಲ್ಲಿಸಿರುತ್ತಾರೆ
  • ಇದೇ ವಿಚಾರಕ್ಕೆ ಕೋರ್ಟ್ ಶೋಕಾಸ್ ನೋಟೀಸ್ ನೀಡಲು ಹಾಗೂ ಪರಿಹಾರ ಮೊತ್ತವನ್ನು ಪಾವತಿಸದ ಕಾರಣ ಸಿವಿಲ್ ಬಂಧನಕ್ಕೆ ಆದೇಶ ನೀಡಿರುತ್ತಾರೆ.

ಇದೀಗ ಪ್ರಕರಣ ಸರ್ಕಾರದ ಲೆಕ್ಕಪತ್ರ ಸಮಿತಿ ಎದುರಿಗೆ ಬಂದಿದ್ದು, ಇಡೀ‌ ಪ್ರಕರಣ ನೋಡಿ ಸಮಿತಿ ಸದಸ್ಯರು ದಿಗ್ಭ್ರಮೆಗೊಂಡಿದ್ದಾರೆ.

ಲೆಕ್ಕಪತ್ರ ಸಮಿತಿ ಹೇಳಿದ್ದೇನು? ಶಿಫಾರಸುಗಳೇನು?

ಈ ಪ್ರಕರಣದಲ್ಲಿ ಗುತ್ತಿಗೆದಾರನ ವಿರುದ್ಧ ಪೊಲೀಸ್ ಇಲಾಖೆ ಕೂಡ ಕ್ರಮಕೈಗೊಂಡಿಲ್ಲ. ಆತನಿಂದ ನಷ್ಟ ಪರಿಹಾರ ಕೂಡ ಸರ್ಕಾರದಿಂದ ವಸೂಲಿ ಮಾಡಲು ಸಾಧ್ಯವಾಗಿಲ್ಲ. ಇದರ ನಡುವೆ 5219 ಕೋಟಿ ರೂ. ಪರಿಹಾರದ ಕೊಡಬೇಕು ಎಂದು ಕೋರ್ಟ್ ಮೆಟ್ಟಿಲೇರಿದ್ದಾನೆ ಗುತ್ತಿಗೆದಾರ ಬಿವಿ ರೆಡ್ಡಿ. ಹೀಗಾಗಿ ಮುಖ್ಯಮಂತ್ರಿ ಮಧ್ಯಸ್ಥಿಕೆಯಲ್ಲಿ ಸಭೆ ನಡೆಸಬೇಕು ಲೆಕ್ಕಪತ್ರ ಸಮಿತಿ ಶಿಫಾರಸು ಮಾಡಿದೆ. ಗೃಹ ಸಚಿವರು ಹಾಗೂ ಲೋಕೋಪಯೋಗಿ ಸಚಿವರ ನೇತೃತ್ವದಲ್ಲಿ, ಸಿಎಂ ಸಭೆ ನಡೆಸಲು ಲೆಕ್ಕಪತ್ರ ಸಮಿತಿ ಸಿಎಂ ಕಚೇರಿಗೆ ಕಡತ ಮಂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:44 am, Thu, 6 February 25

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ