AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Koppal: ಹುಲಿಹೈದರ್​ ಗುಂಪು ಘರ್ಷಣೆ ಪ್ರಕರಣ: 15ಕ್ಕೂ ಹೆಚ್ಚು ಆರೋಪಿಗಳ ಬಂಧನ

Koppal News: ಕನಕಗಿರಿ ತಾಲೂಕಿನ ಹುಲಿಹೈದರ್​ ಗ್ರಾಮದಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಇಬ್ಬರ ಸಾವನ್ನಪ್ಪಿದ ಪ್ರಕರಣ ಸಂಬಂಧ 15ಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಬಂಧನಕ್ಕೆ 6 ವಿಶೇಷ ತಂಡಗಳನ್ನು ರಚಿಸಲಾಗಿದೆ.

Koppal: ಹುಲಿಹೈದರ್​ ಗುಂಪು ಘರ್ಷಣೆ ಪ್ರಕರಣ: 15ಕ್ಕೂ ಹೆಚ್ಚು ಆರೋಪಿಗಳ ಬಂಧನ
ಸಂಘರ್ಷದ ವೇಳೆ ಪರಿಸ್ಥಿತಿ ನಿಯಂತ್ರಿಸಿದ ಪೊಲೀಸರು
TV9 Web
| Updated By: Rakesh Nayak Manchi|

Updated on:Aug 13, 2022 | 9:16 AM

Share

ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್​ ಗ್ರಾಮದಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಇಬ್ಬರ ಸಾವನ್ನಪ್ಪಿದ ಪ್ರಕರಣ ಸಂಬಂಧ 15ಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಕ್ಷುಲ್ಲಕ ಕಾರಣಕ್ಕೆ ನಡೆದಿದ್ದ ಜಗಳದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಪೊಲೀಸರು ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಂಧಿಸಿದ್ದಾರೆ. ತಿರುಪತಿ, ಧರ್ಮಸ್ಥಳದಲ್ಲೂ ಆರೋಪಿಗಳು ತಲೆಮರೆಸಿಕೊಂಡಿರುವ ಮಾಹಿತಿ ತಿಳಿದುಬಂದಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸ್ ಅಧೀಕ್ಷಕರು ರಚಿಸಿದ 6 ತನಿಖಾ ತಂಡಗಳು ಶೋಧಕಾರ್ಯದಲ್ಲಿ ತೊಡಗಿವೆ.

ಜಿಲ್ಲೆಯ ಹುಲಿಹೈದರ್ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಅನ್ಯಕೋಮಿನ ನಡುವೆ ನಡೆದ ಗುಂಪು ಘರ್ಷಣೆಯಲ್ಲಿ ಯಂಕಪ್ಪ ತಳವಾರ (60), ಭಾಷಾಸಾಬ್ (22) ಎಂಬವರು ಸಾವನ್ನಪ್ಪಿದ್ದರು. ಅಲ್ಲದೆ ಘರ್ಷಣೆಯಲ್ಲಿ ಹಲವರು ಗಾಯಗೊಂಡಿದ್ದು, ಓರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಘಟನೆಯ ನಂತರ ಘರ್ಷಣೆಯಲ್ಲಿ ಭಾಗಿಯಾಗಿದ್ದ ಅನೇಕರು ಬೇರೆಬೇರೆ ಜಿಲ್ಲೆಗಳಲ್ಲಿ ತಲೆಮರೆಸಿಕೊಂಡಿದ್ದರು. ನಡೆದ ಗುಂಪು ಘರ್ಷಣೆ ಸಂಬಂಧ 58 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಪೈಕಿ 15ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು, ಬಾಗಲಕೋಟೆ, ಬದಾಮಿ ಜಿಲ್ಲೆಯಲ್ಲಿ ಈ ಆರೋಪಿಗಳು ತಲೆಮರೆಸಿಕೊಂಡಿದ್ದರು. ಇವರ ಸುಳಿವು ಪಡೆದ ಪೊಲೀಸರು ಇದೀಗ ಬಂಧಿಸಿದ್ದಾರೆ.

ಪ್ರಕರಣದ ಇನ್ನುಳಿದ ಆರೋಪಿಗಳು ತಿರುಪತಿ, ಧರ್ಮಸ್ಥಳ ಸೇರಿದಂತೆ ಅನೇಕ ಕಡೆಗಳಲ್ಲಿ ತಲೆಮರೆಸಿಕೊಂಡಿರುವ ಮಾಹಿತಿ ತಿಳಿದುಬಂದಿದ್ದು, ಆರೋಪಿಗಳ ಬಂಧನಕ್ಕೆ ಕೊಪ್ಪಳ ಎಸ್​ಪಿ ಅರುಣಾಂಗ್ಷು ಗಿರಿ ಅವರು 6 ವಿಶೇಷ ತಂಡಗಳನ್ನು ರಚಿಸಿದ್ದಾರೆ. ಸದ್ಯ ಬಂಧಿತರಾಗಿರುವ ಆರೋಪಿಗಳನ್ನು ಪೊಲೀಸರು ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:16 am, Sat, 13 August 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ