AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದ ಹುಲಿಗೆಮ್ಮ ದೇವಸ್ಥಾನದ ಆವರಣದಲ್ಲಿ ನೂಕುನುಗ್ಗಲು; ಕಾಲ್ತುಳಿತದಂತಹ ಸ್ಥಿತಿ ನಿರ್ಮಾಣ

ಕೊಪ್ಪಳದ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಿ ದೇವಾಲಯಕ್ಕೆ ಸೀಗೆ ಹುಣ್ಣಿಮೆಯ ಹಿನ್ನಲೆಯಲ್ಲಿ ಲಕ್ಷಾಂತರ ಭಕ್ತಾದಿಗಳು ಆಗಮಿಸಿದ್ದರು. ಈ ಸಂದರ್ಭದಲ್ಲಿ ನೂಕುನುಗ್ಗಲು ಸಂಭವಿಸಿದ್ದು, ಕಾಲ್ತುಳಿತದಂತಹ ಸ್ಥಿತಿ ನಿರ್ಮಾಣವಾಗಿತ್ತು. ಜನರಲ್ಲಿ ಉಸಿರಾಟದ ಸಮಸ್ಯೆಯೂ ಎದುರಾಗಿತ್ತು. ಇದರೊಂದಿಗೆ ವಾಹನ ದಟ್ಟಣೆಯಿಂದಾಗಿ ಟ್ರಾಫಿಕ್ ಜಾಮ್ ಆಗಿದ್ದು, ಪೊಲೀಸರು ಘಟನೆಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಪ್ಪಳದ ಹುಲಿಗೆಮ್ಮ ದೇವಸ್ಥಾನದ ಆವರಣದಲ್ಲಿ ನೂಕುನುಗ್ಗಲು; ಕಾಲ್ತುಳಿತದಂತಹ ಸ್ಥಿತಿ ನಿರ್ಮಾಣ
ಕೊಪ್ಪಳ ಹುಲಿಗೆಮ್ಮ ದೇವಾಲಯದಲ್ಲಿ ಜನಸ್ತೋಮ
ಭಾವನಾ ಹೆಗಡೆ
|

Updated on:Oct 08, 2025 | 11:09 AM

Share

ಕೊಪ್ಪಳ, ಅಕ್ಟೋಬರ್ 8: ಇತ್ತೀಚೆಗೆ  ಕಾಲ್ತುಳಿತಗಳ (Stampede) ಪ್ರಕರಣಗಳು ಹೆಚ್ಚಾಗಿವೆ. ಇದೀಗ ಕೊಪ್ಪಳದ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಿ ದರ್ಶನಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತ ಸಾಗರ ಹರಿದುಬಂದಿದ್ದು,ಕಾಲ್ತುಳಿತಂದಹ ಸ್ಥಿತಿ ನಿರ್ಮಾಣವಾಗಿತ್ತು. ಈ ಸಂದರ್ಭದಲ್ಲಿ ಮಹಿಳೆಯರು ಮತ್ತು ಮಕ್ಕಳೂ ಸೇರಿದಂತೆ ಹಲವು ಭಕ್ತರು ಜನಜಂಗುಳಿಯಲ್ಲಿ ಸಿಲುಕಿ ಉಸಿರಾಟ ತೊಂದರೆಯಿಂದ ಬಳಲಿದ್ದಾರೆ.

ದೇವಿ ದರ್ಶನಕ್ಕೆ ಬಂದ ಜನಸಂದಣಿಯಲ್ಲಿ ನೂಕುನುಗ್ಗಲು

ಸೀಗೆ ಹುಣ್ಣಿಮೆ ಹಿನ್ನೆಲೆ ಕಲ್ಯಾಣ ಕರ್ನಾಟಕ ಹಾಗೂ ಕೊಪ್ಪಳದ ಆರಾಧ್ಯದೇವಿ ರಾಜ್ಯದಲ್ಲಿ ಶಕ್ತಿ ದೇವತೆಗಳಲ್ಲಿ ಒಂದಾಗಿರುವ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಿ ದರ್ಶನಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತ ಸಾಗರ ಹರಿದು ಬಂದಿತ್ತು. ದರ್ಶನಕ್ಕೆ ಬಂದ ಭಕ್ತರಿಂದ ಒಂದಿಷ್ಟು ನೂಕುನುಗ್ಗಲು, ಕಾಲ್ತುಳಿತಂದಹ ಸ್ಥಿತಿ ನಿರ್ಮಾಣವಾಗಿತ್ತು. ದೇವಿ ದರ್ಶನಕ್ಕೆ ಮಂಗಳವಾರ ಸುಮಾರು ನಾಲ್ಕು ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸಿದ್ದ ಹಿನ್ನೆಲೆ ಟ್ರಾಫಿಕ್ ಜಾಮ್​ನಿಂದ ಭಕ್ತರು ಪರದಾಡುವಂತಾಯಿತು. ಸೋಮವಾರ ರಾತ್ರಿಯಿಂದಲೇ ಭಕ್ತರು ಹುಲಿಗೆಮ್ಮ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಅದಲ್ಲದೇ ದೇವಸ್ಥಾನದ ಆವರಣದಲ್ಲಿ ಭಕ್ತರ ಹಾಗೂ ವಾಹನಗಳ ದಟ್ಟಣೆ ಹೆಚ್ಚಾದ ಹಿನ್ನೆಲೆ ಜನಜಂಗುಳಿಯಲ್ಲಿ ಸಿಲುಕಿ ಉಸಿರಾಟ ತೊಂದರೆಯಿಂದ ಹಲವು ಭಕ್ತರು ಪರದಾಡಿದ ಘಟನೆ ಕಂಡುಬಂದಿದೆ.

ಜನಸ್ತೋಮ ನಿಯಂತ್ರಿಸಲು ಪೊಲೀಸರ ಪರದಾಟ

ಈ ಮಾಹಿತಿ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಎಸ್ಪಿ ಡಾ. ರಾಮ್ ಎಲ್ ಅರಸಿದ್ದಿ ವಾಹನಗಳ ದಟ್ಟಣೆಯನ್ನು ನಿಯಂತ್ರಣ ಮಾಡಿದರು. ಲಾಠಿ ಹಿಡಿದ ಅವರು ನಿಲ್ಲಿಸಿದ ವಾಹನಗಳಿಗೆ ಎಚ್ಚರಿಕೆ ನೀಡಿ ಮುಂದಕ್ಕೆ ಸಾಗಿಸುವಂತೆ ಸೂಚಿಸಿದರು.  ಪ್ರತಿ ಹುಣ್ಣಿಮೆ, ಮಂಗಳವಾರ, ಶುಕ್ರವಾರದ ದಿನಗಳಂದು ಮಹಾರಾಷ್ಟ್ರ, ತೆಲಂಗಾಣ, ಆಂಧ್ರ, ಕರ್ನಾಟಕದಿಂದ ಲಕ್ಷಾಂತರ ಭಕ್ತರು ಹುಲಿಗೆಮ್ಮ ದೇವಸ್ಥಾನಕ್ಕೆ ಬರುತ್ತಾರೆ. ಹತ್ತಿರದಲ್ಲಿಯೇ  ರೈಲ್ವೆ ಮೇಲ್ಸೆತುವೆ ನಿರ್ಮಾಣ ಆಗುತ್ತಿದ್ದು, ಸಾಕಷ್ಟು ವಿಳಂಬವಾಗುತ್ತಿದೆ. ಇದರಿಂದ ಸಾಕಷ್ಟು ಟ್ರಾಫಿಕ್ ಸಮಸ್ಯೆ ಎದುರಾಗುತ್ತಿದೆ. ಕೋಟಿ ಆದಾಯವಿದ್ದರೂ, ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಭಕ್ತರು ಪರದಾಡುವ ಸ್ಥತಿ ಇದೆ. ಹಾಗಾಗಿ ಭಕ್ತರು ದೇವಸ್ಥಾನ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:18 am, Wed, 8 October 25

ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ