ದೆಹಲಿಯಲ್ಲಿ ಧರಣಿ ಮಾಡುವ ರೈತರು ಭಯೋತ್ಪಾದಕರು, ಇವರಿಗೆ ಪಾಕ್​ ಬೆಂಬಲ ಇದೆ: ಕೃಷಿ ಸಚಿವ ಬಿ.ಸಿ.ಪಾಟೀಲ್ ವಿವಾದಿತ ಹೇಳಿಕೆ

ದೆಹಲಿಯಲ್ಲಿ ಪ್ರತಿಭಟನೆ ಮಾಡುವ ರೈತರು ಸಂಪೂರ್ಣ ಭಯೋತ್ಪಾದಕರು. ಧರಣಿ ನಿರತ ರೈತರಿಗೆ ಪಾಕಿಸ್ತಾನ ಹಾಗೂ ಕಾಂಗ್ರೆಸ್​ನವರ ಬೆಂಬಲವಿದೆ ಎಂದು ಬಿಸಿ ಪಾಟಿಲ್ ಆರೋಪಿಸಿದ್ದಾರೆ.

ದೆಹಲಿಯಲ್ಲಿ ಧರಣಿ ಮಾಡುವ ರೈತರು ಭಯೋತ್ಪಾದಕರು, ಇವರಿಗೆ ಪಾಕ್​ ಬೆಂಬಲ ಇದೆ: ಕೃಷಿ ಸಚಿವ ಬಿ.ಸಿ.ಪಾಟೀಲ್ ವಿವಾದಿತ ಹೇಳಿಕೆ
ಸಚಿವ ಬಿ.ಸಿ.ಪಾಟೀಲ್​
Edited By:

Updated on: Jun 23, 2021 | 1:37 PM

ಕೊಪ್ಪಳ: ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕೃಷಿ ತಿದ್ದುಪಡಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ದೆಹಲಿಯ ಕೆಂಪುಕೋಟೆ ಮೇಲೆ ರೈತರ ಧ್ವಜ ಹಾರಾಡಿದೆ. ಈ ಮಧ್ಯೆ ಕೊಪ್ಪಳದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ವಿವಾದಿತ ಹೇಳಿಕೆ ನೀಡಿದ್ದು, ದೆಹಲಿಯಲ್ಲಿ ಧರಣಿ ಮಾಡುವ ರೈತರು ಭಯೋತ್ಪಾದಕರು‌ ಎಂದು ಜರಿದಿದಿದ್ದಾರೆ.

ದೆಹಲಿಯಲ್ಲಿ ಪ್ರತಿಭಟನೆ ಮಾಡುವ ರೈತರು ಸಂಪೂರ್ಣ ಭಯೋತ್ಪಾದಕರು. ಧರಣಿ ನಿರತ ರೈತರಿಗೆ ಪಾಕಿಸ್ತಾನ ಹಾಗೂ ಕಾಂಗ್ರೆಸ್​ನವರ ಬೆಂಬಲವಿದೆ. ರೈತರು ಎಂದಿಗೂ ಕಾನೂನು ಕೈಗೆ ತೆಗೆದುಕೊಂಡವರಲ್ಲ. ಆದರೆ, ದೆಹಲಿ ರೈತ ಪ್ರತಿಭಟನಾಕಾರರು ಕೆಂಪುಕೋಟೆ ಬಳಿ ಹೋಗಿ ಬಾವುಟ ಹಾರಿಸಿದ್ದಾರೆ. ಇದನ್ನು ನೋಡಿದಾಗ ಇವರಿಗೆ ಭಯೋತ್ಪಾದಕರ ಬೆಂಬಲ ಇರುವುದು ಅರ್ಥವಾಗುತ್ತದೆ. ಇದೊಂದು ಭಯೋತ್ಪಾದಕ ಕೃತ್ಯ ಎನ್ನುವ ಮೂಲಕ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆ ಕಂಡು ಕಾಂಗ್ರೆಸ್​ನವರು ಹತಾಶರಾಗಿದ್ದಾರೆ. ಮೋದಿ ಸರ್ಕಾರ ಅಲುಗಾಡಿಸಲು ಸಾಧ್ಯವಿಲ್ಲ ಅಂದುಕೊಂಡವರು, ಭಯೋತ್ಪಾದಕರನ್ನು ಕರೆತಂದು ಅವರಿಗೆ ರೈತರ ಹೆಸರಿಟ್ಟು ಭಯೋತ್ಪಾದನೆ ಮಾಡಿಸಿದ್ದಾರೆ. ನಾವು ಇದನ್ನು ಖಂಡಿಸುತ್ತೇವೆ. ಯಾರೇ ಕಾನೂನು ಕೈಗೆ ತಗೆದುಕೊಂಡರು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವದು ಎಂದು ಎಚ್ಚರಿಕೆ ನೀಡಿದರು.

Published On - 3:49 pm, Tue, 26 January 21

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us