AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಫೋನ್ ಬದಲು ಡಿಟರ್ಜೆಂಟ್ ಸೋಪ್: ಗ್ರಾಹಕನಿಗೆ 74,000 ರೂ. ನೀಡುವಂತೆ ಫ್ಲಿಪ್‌ಕಾರ್ಟ್​ಗೆ​ ಕೋರ್ಟ್ ಸೂಚನೆ

ಐಫೋನ್ ಬದಲು ಡಿಟರ್ಜೆಂಟ್ ಸೋಪ್ ಕಳುಹಿಸಿದ್ದ ಫ್ಲಿಪ್‌ಕಾರ್ಟ್​ ವಿರುದ್ಧ ಕೊಪ್ಪಳದ ವಿದ್ಯಾರ್ಥಿಯೋರ್ವ ಸತತ ಮೂರು ವರ್ಷಗಳ ಕಾನೂನು ಹೋರಾಟದಲ್ಲಿ ಗೆಲುವು ಸಾಧಿಸಿದ್ದಾನೆ.

ಐಫೋನ್ ಬದಲು ಡಿಟರ್ಜೆಂಟ್ ಸೋಪ್: ಗ್ರಾಹಕನಿಗೆ 74,000 ರೂ. ನೀಡುವಂತೆ ಫ್ಲಿಪ್‌ಕಾರ್ಟ್​ಗೆ​ ಕೋರ್ಟ್ ಸೂಚನೆ
ರಮೇಶ್ ಬಿ. ಜವಳಗೇರಾ
|

Updated on: Mar 23, 2023 | 8:51 AM

Share

ಕೊಪ್ಪಳ: ಐಫೋನ್ 11 ( iPhone 11)ಬದಲು ಡಿಟರ್ಜೆಂಟ್ ಸೋಪ್ ಕಳುಹಿಸಿ ವಂಚಿಸಿದ್ದ ಫ್ಲಿಪ್‌ಕಾರ್ಟ್​ಗೆ 74,000 ರೂ. ನೀಡುವಂತೆ ಕರ್ನಾಟಕ ಗ್ರಾಹಕರ ನ್ಯಾಯಾಲಯ ಸೂಚಿಸಿದೆ. ಕೊಪ್ಪಳ(Koppal) ಜಿಲ್ಲೆಯ ಹರ್ಷ ಎನ್ನುವ ವಿದ್ಯಾರ್ಥಿ 2021ರ ಜನವರಿಯಲ್ಲಿ ಫ್ಲಿಪ್‌ಕಾರ್ಟ್‌ನಲ್ಲಿ 48,999 ರೂಪಾಯಿ ಮೌಲ್ಯದ iPhone 11 ಆರ್ಡರ್ ಮಾಡಿದ್ದ. ಆದರೆ, ಬಾಕ್ಸ್​ನಲ್ಲಿ ಒಂದು ಸಣ್ಣ ಕೀಪ್ಯಾಡ್ ಫೋನ್ ಮತ್ತು 140 ಗ್ರಾಂನ ಡಿಟರ್ಜೆಂಟ್ ಸೋಪ್ ಬಂದಿತ್ತು. ಬಳಿಕ ಹರ್ಷ ಸತತ ಕಾನೂನು ಹೋರಾಟ ನಡೆಸಿದ್ದ. ಅಂತಿಮವಾಗಿ ಇದೀಗ ಬರೋಬ್ಬರಿ ಮೂರು ವರ್ಷಗಳ ಬಳಿಕ ಹರ್ಷನಿಗೆ 74,000 ರೂ. ನೀಡುವಂತೆ ಗ್ರಾಹಕರ ನ್ಯಾಯಾಲಯವು ಫ್ಲಿಪ್‌ಕಾರ್ಟ್​ಗೆ ಆದೇಶಿಸಿದೆ. ಮಾರ್ಚ್ 17ರಂದು ನ್ಯಾಯಾಲಯವು 48,999 ರೂ (ಮೊಬೈಲ್ ಫೋನ್ ವೆಚ್ಚ) ಮರುಪಾವತಿಗೆ ಆದೇಶ ನೀಡಿದೆ. ಮತ್ತು ವಂಚನೆ ಮಾಡಿದ್ದಕ್ಕಾಗಿ 10,000 ರೂ. ಹಾಗೂ ದೂರು ದಾಖಲಿಸಲು ತಗುಲಿದ ವೆಚ್ಚಕ್ಕಾಗಿ 15,000 ರೂ. ಪರಿಹಾರ ನೀಡುವಂತೆ ಫ್ಲಿಪ್‌ಕಾರ್ಟ್​ಗೆ ಸೂಚಿಸಿದೆ.

ಕೊಪ್ಪಳ ಜಿಲ್ಲೆಯ ಹರ್ಷ ಎನ್ನುವ ವಿದ್ಯಾರ್ಥಿ 2021ರ ಜನವರಿಯಲ್ಲಿ ಫ್ಲಿಪ್‌ಕಾರ್ಟ್‌ನಲ್ಲಿ 48,999 ರೂಪಾಯಿ ಮೌಲ್ಯದ iPhone 11 ಆರ್ಡರ್ ಮಾಡಿದ್ದ. ಆದರೆ, ಬಾಕ್ಸ್​ನಲ್ಲಿ ಒಂದು ಸಣ್ಣ ಕೀಪ್ಯಾಡ್ ಫೋನ್ ಮತ್ತು 140 ಗ್ರಾಂನ ಡಿಟರ್ಜೆಂಟ್ ಸೋಪ್ ಬಂದಿತ್ತು. ಇದರಿಂದ ಅಚ್ಚರಿಗೊಂಡ ಯುವಕ ಫ್ಲಿಪ್‌ಕಾರ್ಟ್ ಟೋಲ್​ ಫ್ರೀ ಸಂಖ್ಯೆಗೆ ಕರೆ ಮಾಡಿ ಈ ಬಗ್ಗೆ ದೂರು ನೀಡಿದ್ದ. ಅವರು ಸಹ ಸಮಸ್ಯೆಯನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದರು. ಆದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲದಿದ್ದರಿಂದ ಕಂಪನಿಗೆ ಲೀಗಲ್ ನೋಟಿಸ್ ಕಳುಹಿಸಿದ್ದ. ಕಳೆದ ವರ್ಷ ಜುಲೈನಲ್ಲಿ ಫ್ಲಿಪ್‌ಕಾರ್ಟ್ ಇಂಟರ್ನೆಟ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮೂರನೇ ವ್ಯಕ್ತಿಯ ಮಾರಾಟಗಾರ ರಿಟೇಲ್ಸ್ ಪ್ರೈವೇಟ್ ಲಿಮಿಟೆಡ್‌ನ ಮ್ಯಾನೇಜರ್ ವಿರುದ್ಧ ಗ್ರಾಹಕ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು.

ಇದೀಗ ಅಂತಿಮವಾಗಿ ಗ್ರಾಹಕ ನ್ಯಾಯಾಲವು ಫೋನಿನ ಹಣದ ಜೊತೆಗೆ ದೂರು ಸಲ್ಲಿಕೆಗೆ ತಗುಲಿದ ಖರ್ಚು ವೆಚ್ಚಗಳು ಸೇರಿದಂತೆ ಒಟ್ಟು 74,000 ರೂ. ಪಾವತಿಸಲು ಹೇಳಿದೆ. ಇದರಿಂದ ವಿದ್ಯಾರ್ಥಿಗೆ ಸತತ ಮೂರು ವರ್ಷಗಳ ಬಳಿಕ ಕಾನೂನು ಹೋರಾಟದಲ್ಲಿ ಗೆಲುವು ಸಿಕ್ಕಂತಾಗಿದೆ.

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ