AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ವಿದ್ಯಾರ್ಥಿಗಳ ಖಾತೆಗೆ ಹಾಕಬೇಕಿದ್ದ ಹಣ ತಾವೇ ಬಳಸಿಕೊಂಡ ಶಿಕ್ಷಕ

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬೈಲಕ್ಕಂಪುರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಬ್ಯಾಂಕ್ ಖಾತೆಗೆ ಹಾಕಬೇಕಾದ ಹಣವನ್ನು ಮುಖ್ಯ ಶಿಕ್ಷಕ ತಾನೇ ಬಳಸಿಕೊಂಡಿರುವಂತ ಘಟನೆ ನಡೆದಿದೆ. ಕೊರೊನಾ ಸಂದರ್ಭದಲ್ಲಿ ಬಿಸಿಯೂಟದ ಹಣವನ್ನು ವಿದ್ಯಾರ್ಥಿಗಳ ಖಾತೆಗೆ ಹಾಕಲು ಸರ್ಕಾರ ಸೂಚನೆ ನೀಡಿತ್ತು. ತನಿಖೆಗೆ ಹೆದರಿ ರಾತ್ರೋರಾತ್ರಿ ವಿದ್ಯಾರ್ಥಿಗಳ ಕುಟುಂಬದವರಿಗೆ ಮುಖ್ಯ ಶಿಕ್ಷಕ ಹಣ ನೀಡಿದ್ದಾರೆ. 

ಕೊಪ್ಪಳ: ವಿದ್ಯಾರ್ಥಿಗಳ ಖಾತೆಗೆ ಹಾಕಬೇಕಿದ್ದ ಹಣ ತಾವೇ ಬಳಸಿಕೊಂಡ ಶಿಕ್ಷಕ
ವಿದ್ಯಾರ್ಥಿಗಳ ಕುಟುಂಬದವರಿಗೆ ಹಣ ನೀಡಿದ ಶಿಕ್ಷಕ
ಸಂಜಯ್ಯಾ ಚಿಕ್ಕಮಠ
| Edited By: |

Updated on: Mar 13, 2024 | 5:03 PM

Share

ಕೊಪ್ಪಳ, ಮಾರ್ಚ್​​ 13: ಮಕ್ಕಳ ಬ್ಯಾಂಕ್ ಖಾತೆಗೆ ಹಾಕಬೇಕಾದ ಹಣ (money) ವನ್ನು ಮುಖ್ಯ ಶಿಕ್ಷಕ ತಾನೇ ಬಳಸಿಕೊಂಡಿರುವಂತ ಘಟನೆ ಜಿಲ್ಲೆಯ ಕನಕಗಿರಿ ತಾಲೂಕಿನ ಬೈಲಕ್ಕಂಪುರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಉಮೇಶ ಎಂಬ ಮುಖ್ಯ ಶಿಕ್ಷಕರಿಂದ ಹಣ ದುರ್ಬಳಕೆ ಮಾಡಲಾಗಿದೆ. ಸುಮಾರು 20 ಸಾವಿರ ರೂಪಾಯಿ ಸ್ವಂತಕ್ಕೆ ಬಳಸಿಕೊಂಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ಬಿಸಿಯೂಟದ ಹಣವನ್ನು ವಿದ್ಯಾರ್ಥಿಗಳ ಖಾತೆಗೆ ಹಾಕಲು ಸರ್ಕಾರ ಸೂಚನೆ ನೀಡಿತ್ತು.

ಪ್ರತಿ ವಿದ್ಯಾರ್ಥಿಗೆ 248 ರೂಪಾಯಿ ಡಿಬಿಟಿ ಮೂಲಕ ನೀಡಬೇಕಿತ್ತು. ಡಿಬಿಟಿ ಮಾಡಬೇಕಾದ ಹಣವನ್ನು ಸ್ವಂತ ಖಾತೆಗೆ ಮುಖ್ಯ ಶಿಕ್ಷಕ ಹಾಕಿಸಿಕೊಂಡಿದ್ದಾರೆ. ಆದರೆ ಇಲಾಖೆಯಿಂದ ತನಿಖೆ ಹಿನ್ನೆಲೆ ಎಚ್ಚೆತ್ತು ಬಳಿಕ ರಾತ್ರೋರಾತ್ರಿ ವಿದ್ಯಾರ್ಥಿಗಳ ಕುಟುಂಬದವರಿಗೆ ಮುಖ್ಯ ಶಿಕ್ಷಕ ಹಣ ನೀಡಿದ್ದಾರೆ.

ಎಟಿಎಂ ನಲ್ಲಿ ಹಣ ಡ್ರಾ ಮಾಡಿಕೊಡ್ತಿನಿ ಅಂತಾ ಕಾರ್ಡ್ ಬದಲಿಸಿ ವಂಚನೆ 

ದೇವನಹಳ್ಳಿ: ಇತ್ತೀಚೆಗೆ ಬ್ಯಾಂಕ್ಗಳ ಬಳಿ ಅಪರಿಚಿತರು ಹಣ ಡ್ರಾ ಮಾಡಿಕೊಡುವ ನೆಪದಲ್ಲಿ ಅಮಾಯಕರ ಬಳಿ ಸಾಕಷ್ಟು ಹಣವನ್ನ ದೋಚುತ್ತಿದ್ದಾರೆ. ಹೀಗೆ ಬಡ ರೈತನೊಬ್ಬ ತಾನು ಕಷ್ಟ ಪಟ್ಟು ದುಡಿದು ಮಾರಾಟ ಮಾಡಿದ ರೇಷ್ಮೆ ಬೆಳೆ ಹಣವನ್ನ ಎಟಿಎಂನಲ್ಲಿ ತೆಗೆದುಕೊಳ್ಳಲು ಹೋಗಿದ್ದಾಗ ಎಟಿಎಂ ಕಾರ್ಡ್ ಬದಲಿಸಿದ ಖದೀಮನೊಬ್ಬ ರೈತನಿಗೆ ಟೋಪಿ ಹಾಕಿ ಎಸ್ಕೆಪ್ ಆಗಿದ್ದಾನೆ.

ಇದನ್ನೂ ಓದಿ: ಗದಗ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆಗೆ ಬಿಗ್ ಟ್ವಿಸ್ಟ್, ಪ್ರಕರಣದ ಹಿಂದೆ ಹೆಣ್ಣಿನ ಕೈವಾಡ ಶಂಕೆ..!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಭಟ್ರೇನಹಳ್ಳಿ ಗ್ರಾಮದ ನಿವಾಸಿಯಾದ ಈತ ಹಣ ಡ್ರಾ ಮಾಡಿಕೊಳ್ಳಲು ಎಟಿಎಂಗೆ ಹೋಗಿದ್ದಾಗ ಈತನ ಯಾಮಾರಿಸಿದ ಖದೀಮನೊಬ್ಬ ಎಟಿಎಂ ಕಾರ್ಡ್ ಬದಲಿಸಿ ಸಾವಿರಾರು ರೂ ಹಣ ಎಗರಿಸಿ ಎಸ್ಕೇಪ್ ಆಗಿರುವಂತಹ ಘಟನೆ ನಡೆದಿದೆ. ಅಂದಹಾಗೆ ರೈತ ರಾಜಣ್ಣ ರೇಷ್ಮೆ ಬೆಳೆಗಾರನಾಗಿದ್ದು ತಿಂಗಳೆಲ್ಲಾ ಕಷ್ಟ ಪಟ್ಟು ರೇಷ್ಮೆ ಬೆಳೆದು ತನ್ನ ದುಡಿಮೆಯಲ್ಲಿ ಜೀವನ ಕಟ್ಟಿಕೊಂಡಿದ್ದರು.

ಇದನ್ನೂ ಓದಿ: ಬೆಳಗಾವಿ: ಹುಕ್ಕಾ ಬಾರ್ & ತಂಬಾಕಿನ ಉತ್ಪನ್ನ ಮಾರಾಟ ಮಳಿಗೆ ಮೇಲೆ ದಾಳಿ; 5 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ವಶಕ್ಕೆ

ಹೀಗೆ ಬೆಳೆದ ಬೆಳೆಯನ್ನ ಮಾರುಕಟ್ಟೆಗೆ ಹೋಗಿ ಗೂಡನ್ನ ಮಾರಿದ್ದು ಅಕೌಂಟ್ಗೆ ಬಂದಿದ್ದ ಹಣವನ್ನ ಡ್ರಾ ಮಾಡಿಕೊಳ್ಳಲು ವಿಜಯಪುರ ಪಟ್ಟಣದ ಕರ್ನಾಟಕ ಬ್ಯಾಂಕ್ ಎಟಿಂಗೆ ತೆರಳಿದ್ದ. ಈ ವೇಳೆ ಅಪರಿಚಿತ ನಾನು ಹಣ ಡ್ರಾ ಮಾಡಿಕೊಡ್ತಿನಿ ಅಂತ ರೈತನಿಂದ ಎಟಿಎಂ ಪಡೆದಿದ್ದು ಮೊದಲು 10 ಸಾವಿರ ಹಣ ಡ್ರಾ ಮಾಡಿಕೊಟ್ಟಿದ್ದಾನೆ. ರೈತ ಹಣವನ್ನ ಎಣಿಕೆ ಮಾಡಿಕೊಳ್ಳುಷ್ಟರಲ್ಲಿ ಕೈಯಲ್ಲಿದ್ದ ಎಟಿಎಂ ಬದಲಿಸಿದ ಖದೀಮ ಬೇರೆಯೊಂದು ಬ್ಯಾಂಕ್ ನ ಎಟಿಎಂ ಕಾರ್ಡ ಅನ್ನ ರೈತನ ಕೈಗಿಟ್ಟು ಅಲ್ಲಿಂದ ಎಸ್ಕೆಪ್ ಆಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್