AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Selling Kidney to Lead Life ಜೀವನ ನಿರ್ವಹಣೆಗೆ ಕಿಡ್ನಿ ಮಾರಲು ಮುಂದಾದ ಸಾರಿಗೆ ನೌಕರ …

ಕಳೆದ ನಾಲ್ಕು ವರ್ಷದಿಂದ ಗಂಗಾವತಿ ಡಿಪೋದಲ್ಲಿ ನಿರ್ವಾಕಹನಾಗಿ ಕೆಲಸ ಮಾಡ್ತಿರೋ ಹನುಮಂತಪ್ಪ ಜೀವನ ನಿರ್ವಹಣೆಗೆ ಕಿಡ್ನಿ ಮಾರಲು ಮುಂದಾಗಿದ್ದಾರೆ. ಮನೆ ಬಾಡಿಗೆ, ರೇಷನ್ ತರಲು ಹಣ ಇಲ್ಲದೆ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಬಗ್ಗೆ ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.

Selling Kidney to Lead Life ಜೀವನ ನಿರ್ವಹಣೆಗೆ ಕಿಡ್ನಿ ಮಾರಲು ಮುಂದಾದ ಸಾರಿಗೆ ನೌಕರ ...
ಹನುಮಂತಪ್ಪ ಮತ್ತು ಕುಟುಂಬ
ಆಯೇಷಾ ಬಾನು
|

Updated on: Feb 10, 2021 | 2:34 PM

Share

ಕೊಪ್ಪಳ: ಕರ್ನಾಟಕ ಸಾರಿಗೆ ಇಲಾಖೆ ದಿವಾಳಿ ಎದ್ದಿದೆ. ನೌಕರರಂತೂ ಪೂರ್ಣ ಸಂಬಳವಿಲ್ಲದೆ ಬರ್ಬಾದ್ ಆಗಿದ್ದಾರೆ. ಅವರ ಸ್ಥಿತಿ ಹೇಗಿದೆ ಎಂಬ ಬಗ್ಗೆ ತಾಜಾ ಉದಾಹರಣೆ ಇಲ್ಲಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ವಾಯವ್ಯ ಸಾರಿಗೆ ಡಿಪೋ ನಿರ್ವಾಹಕ ಹನುಮಂತಪ್ಪನ ಪರಿಸ್ಥಿತಿ ಆ ದೇವರಿಗೇ ಪ್ರೀತಿ ಎಂಬಂತಿದೆ. ಏಕೆಂದರೆ ಈತ ಮನೆಯ ಬಾಡಿಗೆ ಕಟ್ಟಲೂ ಹಣವಿಲ್ಲದೆ ಕುಳಿತಿದ್ದಾನೆ. ಒಂದು ಹೊತ್ತಿನ ಊಟಕ್ಕೂ ಪರಿತಪಿಸುವಂತಹ ಪರಿಸ್ಥಿತಿ ಈತನ ಕುಟುಂಬಕ್ಕೆ ಬಂದಿದೆ. ಹೀಗಾಗಿ ಈತ ಕೈಗೊಂಡ ನಿರ್ಧಾರವೆಂತದು ಗೊತ್ತಾ? ಈತ ತನ್ನ ಕಿಡ್ನಿ ಮಾರಿ ಜೀವನ ನಿರ್ವಾಹಣೆಗೆ ಮುಂದಾಗಿದ್ದಾನೆ.

ಹೌದು ಕಳೆದ ನಾಲ್ಕು ವರ್ಷದಿಂದ ಗಂಗಾವತಿ ಡಿಪೋದಲ್ಲಿ ನಿರ್ವಾಹಕನಾಗಿ ಕೆಲಸ ಮಾಡ್ತಿರೋ ಹನುಮಂತಪ್ಪ ಜೀವನ ನಿರ್ವಹಣೆಗೆ ಕಿಡ್ನಿ ಮಾರಲು ಮುಂದಾಗಿದ್ದಾರೆ. ಮನೆ ಬಾಡಿಗೆ, ರೇಷನ್ ತರಲು ಹಣ ಇಲ್ಲದೆ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಬಗ್ಗೆ ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿಕೊಂಡಿದ್ದು ತನ್ನ ಪರಿಸ್ಥಿತಿಯನ್ನು ವ್ಯಕ್ತಪಡಿಸಿದ್ದಾನೆ. ಮೂಲತಃ ರಾಯಚೂರು ಜಿಲ್ಲೆಯವರಾಗಿರುವ ಹನುಮಂತಪ್ಪ 3 ತಿಂಗಳಿಂದ ಸಂಬಳ ಇಲ್ಲದೆ ಜೀವನ ನಿರ್ವಹಣೆಗೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಡಿಸೆಂಬರ್​ ತಿಂಗಳಲ್ಲಿ ಕೇವಲ ಅರ್ಧ ಸಂಬಳ ಮಾತ್ರ ಸಾರಿಗೆ ಇಲಾಖೆ ನೀಡಿತ್ತು. ಹೀಗಾಗಿ ಸಾರಿಗೆ ಸಿಬ್ಬಂದಿ ಜೀವನ ನಡೆಸುವುದೇ ಕಷ್ಟಕರವಾಗಿದೆ. ಇದಲ್ಲದೆ ಸಾರಿಗೆ ನೌಕರರು ಸಹ ಫೆಬ್ರವರಿ 10ರಂದು ಸಾರಿಗೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಆದ್ರೆ ಡಿಸಿಎಂ ಲಕ್ಷ್ಮಣ ಸವದಿ ನೌಕರರ ಮನವೊಲಿಸಿ ಪ್ರತಿಭಟನೆಯನ್ನು ಹಿಂಪಡೆಯುವಂತೆ ಮಾಡಿದ್ರು. ಆದ್ರೆ ನೌಕರರ ಕಷ್ಟ ನೌಕರರಿಗೆ ಮಾತ್ರ ಗೊತ್ತು. ತುತ್ತು ಜನ್ನಕ್ಕೂ ಪರದಾಡುತ್ತ ಜೀವನ ನಡೆಸುವುದು ಕಷ್ಟಕರವಾಗಿದೆ.

Koppal Selling kidney to lead Life

ಹನುಮಂತಪ್ಪರ ಫೇಸ್​ಬುಕ್​ ಪೋಸ್ಟ್

Bus strike in Bengaluru ಸರ್ಕಾರದ ವಿರುದ್ಧ ಮತ್ತೆ ಸಿಡಿದೇಳಲಿದ್ದಾರಾ ಸಾರಿಗೆ ಸಿಬ್ಬಂದಿ? ನಾಳೆ ಸಾರಿಗೆ ನೌಕರರಿಂದ ಪ್ರತಿಭಟನೆ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ