AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಅಂಗನವಾಡಿಯಲ್ಲಿ ಆಟವಾಡುತ್ತಿದ್ದ ಐದು ವರ್ಷದ ಬಾಲಕಿ ಸಾವು!

ಕುಷ್ಟಗಿ ತಾಲೂಕಿನ ಬಳೂಟಗಿ ಗ್ರಾಮದ ಅಂಗನವಾಡಿಯಲ್ಲಿ ಆಟವಾಡುತ್ತಿದ್ದ ಐದು ವರ್ಷದ ಅಲಿಯಾ ಮಹ್ಮದ್ ರಿಯಾಜ್ ಎಂಬ ಬಾಲಕಿ ದಿಢೀರನೆ ಮೃತಪಟ್ಟಿದ್ದಾಳೆ. ಆರಂಭದಲ್ಲಿ ಅಂಗನವಾಡಿ ಸಿಬ್ಬಂದಿಯನ್ನು ದೂಷಿಸಿದ್ದ ಪೋಷಕರು, ವೈದ್ಯರ ಪರೀಕ್ಷೆಯ ನಂತರ ಬಾಲಕಿಗೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಸಾವು ಸಂಭವಿಸಿದೆ ಎಂದು ತಿಳಿದುಕೊಂಡಿದ್ದಾರೆ. ಬಾಲಕಿಯ ಅಕಾಲಿಕ ಮರಣದಿಂದ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದಾರೆ.

ಕೊಪ್ಪಳ: ಅಂಗನವಾಡಿಯಲ್ಲಿ ಆಟವಾಡುತ್ತಿದ್ದ ಐದು ವರ್ಷದ ಬಾಲಕಿ ಸಾವು!
ಅಲಿಯಾ ಮಹ್ಮದ್ ರಿಯಾಜ್
ಸಂಜಯ್ಯಾ ಚಿಕ್ಕಮಠ
| Edited By: |

Updated on:Feb 18, 2025 | 9:39 AM

Share

ಕೊಪ್ಪಳ, ಫೆಬ್ರವರಿ 18: ಇತ್ತೀಚೆಗೆ ಚಿಕ್ಕ ಮಕ್ಕಳು, ಯುವಕರು ಅಕಾಲಿಕ ಸಾವಿಗೆ ತುತ್ತಾಗುತ್ತಿದ್ದಾರೆ. ಅಂಗನವಾಡಿಯಲ್ಲಿ (Anganwadi) ಆಟವಾಡುತ್ತಿದ್ದ ಬಾಲಕಿ ದಿಡೀರನೆ ಬಿದ್ದು ಮೃತಪಟ್ಟ ಘಟನೆ ಕುಷ್ಟಗಿ (Kushtagi) ತಾಲೂಕಿನ ಬಳೂಟಗಿ ಗ್ರಾಮದಲ್ಲಿ ನಡೆದಿದೆ. ಅಲಿಯಾ ಮಹ್ಮದ್ ರಿಯಾಜ್ (5) ಮೃತ ಬಾಲಕಿ. ಸೋಮವಾರ (ಫೆ.17) ಮುಂಜಾನೆ ದೈನಂದಿನಂತೆ ಬಾಲಕಿ ಅಂಗನವಾಡಿಗೆ ಹೋಗಿದ್ದಳು. ಮುಂಜಾನೆ ಉಪಹಾರ ಸೇವಿಸಿದ್ದ ಬಾಲಕಿ ಚಟುವಟಿಕೆಯಿಂದಲೇ ಇದ್ದಳು.‌ ಅಂಗನವಾಡಿಯಲ್ಲಿ ಎಲ್ಲ ಮಕ್ಕಳಂತೆ ಆಟವಾಡಿಕೊಂಡಿದ್ದಳು.

ಆದರೆ, ಮಧ್ಯಾಹ್ನ ಆಟವಾಡುತ್ತಿದ್ದಾಗ ದಿಢೀರನೆ ಕುಸಿದು ಬಿದ್ದಿದ್ದಾಳೆ. ಪೀಟ್ಸ್ ಬಂದವರಂತೆ ಆಡಿದ್ದಾಳೆ. ಬಾಲಕಿಯನ್ನು ನೋಡಿ ಅಂಗನವಾಡಿ ಸಹಾಯಕಿ ಓಡಿ ಬಂದಿದ್ದಾಳೆ. ಕೂಡಲೇ ಪಾಲಕರಿಗೆ ಮಾಹಿತಿ ನೀಡಲಾಗಿದೆ. ಕೂಡಲೆ ಬಾಲಕಿಯನ್ನು ಸಮೀಪದ ದೋಟಿಹಾಳ‌ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಗಿದೆ. ಆದರೆ, ಆಸ್ಪತ್ರೆಗೆ ಹೋಗುವ ಮುನ್ನವೇ ಬಾಲಕಿ ಮೃತಪಟ್ಟಿದ್ದಳು.

ದೋಟಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಬಾಲಕಿ ದೇಹವನ್ನು ಪರಿಶೀಲಿಸಿದ್ದಾರೆ. ಗಾಯದ ಗುರುತುಗಳೇನಾದರೂ ಇವೆಯಾ ಅಂತ ಪರಿಶೀಲಿಸಿದ್ದಾರೆ. ಜೊತೆಗೆ ಎಕ್ಸರೇ ಮಾಡಿ, ಬಾಲಕಿ ಏನಾದರೂ ನುಂಗಿದ್ದಾಳಾ ಎಂದು ಕೂಡ ಪರಿಶೀಲನೆ ಮಾಡಿದ್ದಾರೆ. ಆದರೆ, ದೇಹದೊಳಗೆ ಏನೇನು ಇರಲಿಲ್ಲ ಎಂಬುವುದು ಗೊತ್ತಾಗಿದೆ.

ಇದನ್ನೂ ಓದಿ: ಸಾಲ ವಾಪಸ್ ನೀಡದಿದ್ದಕ್ಕೆ 17 ವರ್ಷದ ಬಾಲಕಿಯನ್ನು ಮದುವೆಯಾದವ ಅರೆಸ್ಟ್​

ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಮಗು ಮೃತಪಟ್ಟಿದೆ ಅಂತ ವೈದ್ಯರು ಪಾಲಕರಿಗೆ ಮಾಹಿತಿ ನೀಡಿದ್ದಾರೆ. ದಿಢೀರನೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವುದರಿಂದ ಕೆಲವರಿಗೆ ಈ ರೀತಿಯಾಗುತ್ತದೆ. ಬಾಲಕಿ ಸಾವಿಗೆ ಇದೇ ಕಾರಣ ಅಂತ ಪೋಷಕರಿಗೆ ತಿಳಿಸಿದ್ದಾರೆ. ಆರಂಭದಲ್ಲಿ ಅಂಗನವಾಡಿ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದ ಪೋಷಕರು, ವೈದ್ಯರ ಮಾಹಿತಿ ನಂತರ ಸುಮ್ಮನಾಗಿದ್ದಾರೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:38 am, Tue, 18 February 25

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!