AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ಪೈಪ್​ಲೈನ್​ಗಾಗಿ ಅಗೆದಿದ್ದ ಗುಂಡಿಗೆ ಬಿದ್ದ ಮಗು! ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವು

ಕಳೆದ ಒಂದು ತಿಂಗಳ ಹಿಂದೆ ಗುಂಡಿ ಅಗೆದಿದ್ದರು. ಆಟವಾಡಲು ತೆರಳಿದ್ದ 13 ತಿಂಗಳ ಮಗು ಅನುಪಮಾ ಗುಂಡಿಗೆ ಬಿದ್ದಿದೆ. ಗುಂಡಿ ಅಗೆದು ಮುಚ್ಚದೆ ಇರುವುದೇ ದುರಂತಕ್ಕೆ ಕಾರಣ ಅಂತ ಆಕ್ರೋಶ ಹೊರಹಾಕಿದ್ದಾರೆ.

ಕೊಪ್ಪಳದಲ್ಲಿ ಪೈಪ್​ಲೈನ್​ಗಾಗಿ ಅಗೆದಿದ್ದ ಗುಂಡಿಗೆ ಬಿದ್ದ ಮಗು! ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವು
13 ತಿಂಗಳ ಮಗು ಅನುಪಮಾ, ಪೈಪ್​ಲೈನ್​ ಅಳವಡಿಕೆಗೆ ಗುಂಡಿ ಅಗೆದಿದ್ದರು
TV9 Web
| Edited By: sandhya thejappa|

Updated on:Feb 08, 2022 | 9:38 AM

Share

ಕೊಪ್ಪಳ: ಪೈಪ್ಲೈನ್ಗಾಗಿ (Pipeline) ಅಗೆದಿದ್ದ ಗುಂಡಿಗೆ ಹೆಣ್ಣು ಮಗು ಬಿದ್ದು ಸಾವನ್ನಪ್ಪಿರುವ ಘಟನೆ ಕೊಪ್ಪಳ (Koppal) ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುರುಡಿ ಗ್ರಾಮದಲ್ಲಿ ನಡೆದಿದೆ. ಜಲಜೀವನ್ ಮಿಷನ್ (Jal Jeevan Mission) ಪೈಪ್ಲೈನ್ ಅಳವಡಿಕೆಗೆ ಕಾಮಗಾರಿ ಮಾಡಲಾಗಿತ್ತು. ಕಾಮಗಾರಿ ಆಗುತ್ತಿದ್ದ ಗುಂಡಿಗೆ 13 ತಿಂಗಳ ಅನುಪಮಾ ಎಂಬ ಹೆಣ್ಣು ಮಗು ಬಿದ್ದಿತ್ತು. ಗುಂಡಿಗೆ ಬಿದ್ದ ಮಗು ಉಸಿರಾಡಲು ಆಗದೆ ಅಸ್ವಸ್ಥವಾಗಿತ್ತು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅನುಪಮಾ ಸಾವನ್ನಪ್ಪಿದ್ದು, ಬಾಲಕಿಯ ಸಾವಿಗೆ ಗುತ್ತಿಗೆದಾರನೇ ಕಾರಣವೆಂದು ಪೋಷಕರು ಕಿಡಿಕಾರಿದ್ದಾರೆ.

ಕಳೆದ ಒಂದು ತಿಂಗಳ ಹಿಂದೆ ಗುಂಡಿ ಅಗೆದಿದ್ದರು. ಆಟವಾಡಲು ತೆರಳಿದ್ದ 13 ತಿಂಗಳ ಮಗು ಅನುಪಮಾ ಗುಂಡಿಗೆ ಬಿದ್ದಿದೆ. ಗುಂಡಿ ಅಗೆದು ಮುಚ್ಚದೆ ಇರುವುದೇ ದುರಂತಕ್ಕೆ ಕಾರಣ ಅಂತ ಆಕ್ರೋಶ ಹೊರಹಾಕಿದ್ದಾರೆ. ಅನುಪಮಾ ಮೂಲತಃ ಕೊಪ್ಪಳ ತಾಲೂಕಿನ ಶಿವಪುರ. ಅಜ್ಜಿ ಮನೆಗೆ ಬಂದಿದ್ದಾಗ ಈ ಘಟನೆ ನಡೆದಿದೆ. ಬೇವೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿರತೆ ದಾಳಿಗೆ ಮೇಕೆಗಳು ಸಾವು: ರಾಮನಗರ: ಜಿಲ್ಲೆ ಮಾಗಡಿ ತಾಲೂಕಿನ ಪೂಜಾರಿಪಾಳ್ಯ ಗ್ರಾಮದಲ್ಲಿ ಚಿರತೆ ದಾಳಿಗೆ ಹತ್ತು ಮೇಕೆ, ಒಂದು ಸೀಮೆ ಕರು ಸಾವನ್ನಪ್ಪಿವೆ. ರವೀಂದ್ರ ಎಂಬುವವರಿಗೆ ಸೇರಿದ ಮೇಕೆಗಳು ಮೃತಪಟ್ಟಿವೆ. ತಡರಾತ್ರಿ ಮೇಕೆ ಶೆಟ್​ಗೆ ನುಗ್ಗಿ ಚಿರತೆ ದಾಳಿ ನಡೆಸಿದೆ. ಚಿರತೆ ಹಾವಳಿಗೆ ಗ್ರಾಮಸ್ಥರು ಹೈರಾಣಾಗಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ

ಮೃತ ಸ್ನೇಹಿನ ಹೆಂಡತಿಗೆ ಬಾಳು ಕೊಟ್ಟು ಮಾದರಿಯಾದ ವ್ಯಕ್ತಿ; ವಿಧವೆ ವರಿಸಿದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಜನ

‘ಅಲ್ಲು ಅರ್ಜುನ್​, ರಾಜಮೌಳಿ ಕನ್ನಡಿಗರಾಗಿದ್ದರೆ ಮೋದಿ ಸ್ಯಾಂಡಲ್​ವುಡ್​ನ ಹೊಗಳುತ್ತಿದ್ದರು’; ಆರ್​ಜಿವಿ ಟೀಕೆ

Published On - 9:35 am, Tue, 8 February 22

Follow Us
Web contact
Web contact

TV9 Kannada

Read More
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ