ಸರ್ಕಾರದಿಂದ ಇಡೋ-ಆಸೀಸ್ ಫೈನಲ್ ಪಂದ್ಯ ನೇರಪ್ರಸಾರ: 90 ಕಿ.ಮೀ. ದೂರದ ಹಳ್ಳಿಯಿಂದ ಕೊಪ್ಪಳಕ್ಕೆ ಬಂದ ಅಭಿಮಾನಿ

india australia world cup Final Match: ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಭಾರತ-ಆಸೀಸ್ ಹಣಾಹಣಿಗೆ ಕೌಂಟ್​​ಡೌನ್​​ ಶುರುವಾಗಿದೆ. ಫೈನಲ್​ ಪಂದ್ಯ ವೀಕ್ಷಣೆಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇನ್ನೊಂದೆಡೆ ರಾಜ್ಯ ಸರ್ಕಾರ, ವರ್ಲ್ಡ್​​​ ಕಪ್ ಅಂತಿಮ ಪಂದ್ಯವನ್ನು ಸಾರ್ವಜನಿಕರ ವೀಕ್ಷಣೆಗೆ ಆಯಾ ಜಿಲ್ಲಾ ಕ್ರೀಡಾಂಗಣದಲ್ಲಿ ದೊಡ್ಡ ಸ್ಕ್ರೀನ್​ ಅವಳಡಿಕೆಗೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಕ್ರಿಕೆಟ್ ಅಭಿಮಾನಿಯೋರ್ವ 90 ಕಿ.ಮೀ ದೂರದಿಂದ ಕೊಪ್ಪಳಕ್ಕೆ ಆಗಮಿಸಿದ್ದಾರೆ.

Follow us
| Edited By: ರಮೇಶ್ ಬಿ. ಜವಳಗೇರಾ

Updated on:Nov 19, 2023 | 11:39 AM

ಕೊಪ್ಪಳ, (ನವೆಂಬರ್ 19): ದೇಶದಾದ್ಯಂತ ವಿಶ್ವಕಪ್ ಕ್ರಿಕೆಟ್ ಫೀವರ್ ಜೋರಾಗಿದೆ. ಗುಜರಾತ್​ನ ಅಹಮದಾಬಾದ್​​​​​​ನಲ್ಲಿರೋ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ- ಆಸ್ಟ್ರೇಲಿಯಾ ಅಖಾಡಕ್ಕಿಳಿಯಲಿವೆ. ಮದಗಜಗಳ ಕಾಳಗವನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಗಿಫ್ಟ್​​ ನೀಡ್ತಿದೆ. ಫೈನಲ್ ಪಂದ್ಯದ ನೇರಪ್ರಸಾರವನ್ನ ಜಿಲ್ಲಾ ಕೇಂದ್ರಗಳಲ್ಲಿ ಮಾಡುವಂತೆ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಸುತ್ತೋಲೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಅಭಿಮಾನಿಯೋರ್ವ, 90 ಕಿ.ಮೀ. ದೂರದ ಹಳ್ಳಿಯಿಂದ ಕೊಪ್ಪಳ ನಗರಕ್ಕೆ ಆಗಮಿಸಿದ್ದಾನೆ.

ಕುಷ್ಟಗಿ ತಾಲೂಕಿನ ಅಡವಿಬಾವಿ ಗ್ರಾಮದ ನಿವಾಸಿ ರಮೇಶ್ , ತಮ್ಮೂರಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ 90 ಕಿ.ಮೀ. ದೂರದ ಕೊಪ್ಪಳ ನಗರಕ್ಕೆ ಬಂದಿದ್ದಾನೆ. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಮೇಶ್, ನಮ್ಮೂರಲ್ಲಿ ಕರೆಂಟ್ ಇರಲ್ಲ. ಹೀಗಾಗಿ ಕೊಪ್ಪಳಕ್ಕೆ ಬಂದಿದ್ದೇನೆ. ಸಂಬಂಧಿ ಮದುವೆ ಇತ್ತು. ಆದರೂ ಬಿಟ್ಟು ಕ್ರಿಕೆಟ್ ನೋಡಲು ಬಂದಿದ್ದೇನೆ. ನೂರು ರೂಪಾಯಿ ಬಸ್ ಚಾರ್ಜ್ ಹಾಕಿಕೊಂಡು ಕೊಪ್ಪಳಕ್ಕೆ ಬಂದಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: IND vs AUS Final: ಇತಿಹಾಸ ಸೃಷ್ಟಿಸಲು ಒಂದೇ ಹೆಜ್ಜೆ ಬಾಕಿ: ವಿಶ್ವಕಪ್ 2023 ರಲ್ಲಿ ಭಾರತದ ಪಯಣ ಹೇಗಿತ್ತು ನೋಡಿ

ರಾಜ್ಯದ ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸಾರ್ವಜನಿಕರು ಹಾಗೂ ಕ್ರೀಡಾಪಟುಗಳಿಗೆ ಪಂದ್ಯ ವೀಕ್ಷಿಸಲು ಅನುಕೂಲ ಕಲ್ಪಿಸುವಂತೆ ಸುತ್ತೋಲೆ ಹೊರಡಿಸಿದ್ದು, ಎಲ್​ಇಡಿ ಸ್ಕ್ರೀನ್ ಅಳವಡಿಸುವಂತೆ ಸೂಚನೆ ನೀಡಿದೆ. ಸರ್ಕಾರದ ಆದೇಶದಂತೆ ಆಯಾ ಜಿಲ್ಲಾ ಕ್ರೀಡಾಂಗಣದಲ್ಲಿ ನೇರಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕ ಉಚಿತವಾಗಿ ನೋಡಲು ಜಿಲ್ಲಾಡಳಿತವೂ ಬೃಹತ್ ಎಲ್​ಇಡಿ ಸ್ಕ್ರೀನ್​ನನ್ನು ಅಳವಡಿಸಲು ಸಿದ್ಧತೆ ಮಾಡಿಕೊಂಡಿದೆ. ಜೊತೆಗೆ ಭದ್ರತೆಗೆ ಪೊಲೀಸರನ್ನ ನಿಯೋಜಿಸಿದೆ.

ಇನ್ನಷ್ಟು ಕ್ರಿಕೆಟ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:33 am, Sun, 19 November 23

ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್
ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್
ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು