AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದಿಂದ ಇಡೋ-ಆಸೀಸ್ ಫೈನಲ್ ಪಂದ್ಯ ನೇರಪ್ರಸಾರ: 90 ಕಿ.ಮೀ. ದೂರದ ಹಳ್ಳಿಯಿಂದ ಕೊಪ್ಪಳಕ್ಕೆ ಬಂದ ಅಭಿಮಾನಿ

india australia world cup Final Match: ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಭಾರತ-ಆಸೀಸ್ ಹಣಾಹಣಿಗೆ ಕೌಂಟ್​​ಡೌನ್​​ ಶುರುವಾಗಿದೆ. ಫೈನಲ್​ ಪಂದ್ಯ ವೀಕ್ಷಣೆಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇನ್ನೊಂದೆಡೆ ರಾಜ್ಯ ಸರ್ಕಾರ, ವರ್ಲ್ಡ್​​​ ಕಪ್ ಅಂತಿಮ ಪಂದ್ಯವನ್ನು ಸಾರ್ವಜನಿಕರ ವೀಕ್ಷಣೆಗೆ ಆಯಾ ಜಿಲ್ಲಾ ಕ್ರೀಡಾಂಗಣದಲ್ಲಿ ದೊಡ್ಡ ಸ್ಕ್ರೀನ್​ ಅವಳಡಿಕೆಗೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಕ್ರಿಕೆಟ್ ಅಭಿಮಾನಿಯೋರ್ವ 90 ಕಿ.ಮೀ ದೂರದಿಂದ ಕೊಪ್ಪಳಕ್ಕೆ ಆಗಮಿಸಿದ್ದಾರೆ.

ಸಂಜಯ್ಯಾ ಚಿಕ್ಕಮಠ
| Edited By: |

Updated on:Nov 19, 2023 | 11:39 AM

Share

ಕೊಪ್ಪಳ, (ನವೆಂಬರ್ 19): ದೇಶದಾದ್ಯಂತ ವಿಶ್ವಕಪ್ ಕ್ರಿಕೆಟ್ ಫೀವರ್ ಜೋರಾಗಿದೆ. ಗುಜರಾತ್​ನ ಅಹಮದಾಬಾದ್​​​​​​ನಲ್ಲಿರೋ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ- ಆಸ್ಟ್ರೇಲಿಯಾ ಅಖಾಡಕ್ಕಿಳಿಯಲಿವೆ. ಮದಗಜಗಳ ಕಾಳಗವನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಗಿಫ್ಟ್​​ ನೀಡ್ತಿದೆ. ಫೈನಲ್ ಪಂದ್ಯದ ನೇರಪ್ರಸಾರವನ್ನ ಜಿಲ್ಲಾ ಕೇಂದ್ರಗಳಲ್ಲಿ ಮಾಡುವಂತೆ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಸುತ್ತೋಲೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಅಭಿಮಾನಿಯೋರ್ವ, 90 ಕಿ.ಮೀ. ದೂರದ ಹಳ್ಳಿಯಿಂದ ಕೊಪ್ಪಳ ನಗರಕ್ಕೆ ಆಗಮಿಸಿದ್ದಾನೆ.

ಕುಷ್ಟಗಿ ತಾಲೂಕಿನ ಅಡವಿಬಾವಿ ಗ್ರಾಮದ ನಿವಾಸಿ ರಮೇಶ್ , ತಮ್ಮೂರಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ 90 ಕಿ.ಮೀ. ದೂರದ ಕೊಪ್ಪಳ ನಗರಕ್ಕೆ ಬಂದಿದ್ದಾನೆ. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಮೇಶ್, ನಮ್ಮೂರಲ್ಲಿ ಕರೆಂಟ್ ಇರಲ್ಲ. ಹೀಗಾಗಿ ಕೊಪ್ಪಳಕ್ಕೆ ಬಂದಿದ್ದೇನೆ. ಸಂಬಂಧಿ ಮದುವೆ ಇತ್ತು. ಆದರೂ ಬಿಟ್ಟು ಕ್ರಿಕೆಟ್ ನೋಡಲು ಬಂದಿದ್ದೇನೆ. ನೂರು ರೂಪಾಯಿ ಬಸ್ ಚಾರ್ಜ್ ಹಾಕಿಕೊಂಡು ಕೊಪ್ಪಳಕ್ಕೆ ಬಂದಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: IND vs AUS Final: ಇತಿಹಾಸ ಸೃಷ್ಟಿಸಲು ಒಂದೇ ಹೆಜ್ಜೆ ಬಾಕಿ: ವಿಶ್ವಕಪ್ 2023 ರಲ್ಲಿ ಭಾರತದ ಪಯಣ ಹೇಗಿತ್ತು ನೋಡಿ

ರಾಜ್ಯದ ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸಾರ್ವಜನಿಕರು ಹಾಗೂ ಕ್ರೀಡಾಪಟುಗಳಿಗೆ ಪಂದ್ಯ ವೀಕ್ಷಿಸಲು ಅನುಕೂಲ ಕಲ್ಪಿಸುವಂತೆ ಸುತ್ತೋಲೆ ಹೊರಡಿಸಿದ್ದು, ಎಲ್​ಇಡಿ ಸ್ಕ್ರೀನ್ ಅಳವಡಿಸುವಂತೆ ಸೂಚನೆ ನೀಡಿದೆ. ಸರ್ಕಾರದ ಆದೇಶದಂತೆ ಆಯಾ ಜಿಲ್ಲಾ ಕ್ರೀಡಾಂಗಣದಲ್ಲಿ ನೇರಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕ ಉಚಿತವಾಗಿ ನೋಡಲು ಜಿಲ್ಲಾಡಳಿತವೂ ಬೃಹತ್ ಎಲ್​ಇಡಿ ಸ್ಕ್ರೀನ್​ನನ್ನು ಅಳವಡಿಸಲು ಸಿದ್ಧತೆ ಮಾಡಿಕೊಂಡಿದೆ. ಜೊತೆಗೆ ಭದ್ರತೆಗೆ ಪೊಲೀಸರನ್ನ ನಿಯೋಜಿಸಿದೆ.

ಇನ್ನಷ್ಟು ಕ್ರಿಕೆಟ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:33 am, Sun, 19 November 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!