ಸರ್ಕಾರದಿಂದ ಇಡೋ-ಆಸೀಸ್ ಫೈನಲ್ ಪಂದ್ಯ ನೇರಪ್ರಸಾರ: 90 ಕಿ.ಮೀ. ದೂರದ ಹಳ್ಳಿಯಿಂದ ಕೊಪ್ಪಳಕ್ಕೆ ಬಂದ ಅಭಿಮಾನಿ

india australia world cup Final Match: ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಭಾರತ-ಆಸೀಸ್ ಹಣಾಹಣಿಗೆ ಕೌಂಟ್​​ಡೌನ್​​ ಶುರುವಾಗಿದೆ. ಫೈನಲ್​ ಪಂದ್ಯ ವೀಕ್ಷಣೆಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇನ್ನೊಂದೆಡೆ ರಾಜ್ಯ ಸರ್ಕಾರ, ವರ್ಲ್ಡ್​​​ ಕಪ್ ಅಂತಿಮ ಪಂದ್ಯವನ್ನು ಸಾರ್ವಜನಿಕರ ವೀಕ್ಷಣೆಗೆ ಆಯಾ ಜಿಲ್ಲಾ ಕ್ರೀಡಾಂಗಣದಲ್ಲಿ ದೊಡ್ಡ ಸ್ಕ್ರೀನ್​ ಅವಳಡಿಕೆಗೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಕ್ರಿಕೆಟ್ ಅಭಿಮಾನಿಯೋರ್ವ 90 ಕಿ.ಮೀ ದೂರದಿಂದ ಕೊಪ್ಪಳಕ್ಕೆ ಆಗಮಿಸಿದ್ದಾರೆ.

ಕೊಪ್ಪಳ, (ನವೆಂಬರ್ 19): ದೇಶದಾದ್ಯಂತ ವಿಶ್ವಕಪ್ ಕ್ರಿಕೆಟ್ ಫೀವರ್ ಜೋರಾಗಿದೆ. ಗುಜರಾತ್​ನ ಅಹಮದಾಬಾದ್​​​​​​ನಲ್ಲಿರೋ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ- ಆಸ್ಟ್ರೇಲಿಯಾ ಅಖಾಡಕ್ಕಿಳಿಯಲಿವೆ. ಮದಗಜಗಳ ಕಾಳಗವನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಗಿಫ್ಟ್​​ ನೀಡ್ತಿದೆ. ಫೈನಲ್ ಪಂದ್ಯದ ನೇರಪ್ರಸಾರವನ್ನ ಜಿಲ್ಲಾ ಕೇಂದ್ರಗಳಲ್ಲಿ ಮಾಡುವಂತೆ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಸುತ್ತೋಲೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಅಭಿಮಾನಿಯೋರ್ವ, 90 ಕಿ.ಮೀ. ದೂರದ ಹಳ್ಳಿಯಿಂದ ಕೊಪ್ಪಳ ನಗರಕ್ಕೆ ಆಗಮಿಸಿದ್ದಾನೆ.

ಕುಷ್ಟಗಿ ತಾಲೂಕಿನ ಅಡವಿಬಾವಿ ಗ್ರಾಮದ ನಿವಾಸಿ ರಮೇಶ್ , ತಮ್ಮೂರಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ 90 ಕಿ.ಮೀ. ದೂರದ ಕೊಪ್ಪಳ ನಗರಕ್ಕೆ ಬಂದಿದ್ದಾನೆ. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಮೇಶ್, ನಮ್ಮೂರಲ್ಲಿ ಕರೆಂಟ್ ಇರಲ್ಲ. ಹೀಗಾಗಿ ಕೊಪ್ಪಳಕ್ಕೆ ಬಂದಿದ್ದೇನೆ. ಸಂಬಂಧಿ ಮದುವೆ ಇತ್ತು. ಆದರೂ ಬಿಟ್ಟು ಕ್ರಿಕೆಟ್ ನೋಡಲು ಬಂದಿದ್ದೇನೆ. ನೂರು ರೂಪಾಯಿ ಬಸ್ ಚಾರ್ಜ್ ಹಾಕಿಕೊಂಡು ಕೊಪ್ಪಳಕ್ಕೆ ಬಂದಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: IND vs AUS Final: ಇತಿಹಾಸ ಸೃಷ್ಟಿಸಲು ಒಂದೇ ಹೆಜ್ಜೆ ಬಾಕಿ: ವಿಶ್ವಕಪ್ 2023 ರಲ್ಲಿ ಭಾರತದ ಪಯಣ ಹೇಗಿತ್ತು ನೋಡಿ

ರಾಜ್ಯದ ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸಾರ್ವಜನಿಕರು ಹಾಗೂ ಕ್ರೀಡಾಪಟುಗಳಿಗೆ ಪಂದ್ಯ ವೀಕ್ಷಿಸಲು ಅನುಕೂಲ ಕಲ್ಪಿಸುವಂತೆ ಸುತ್ತೋಲೆ ಹೊರಡಿಸಿದ್ದು, ಎಲ್​ಇಡಿ ಸ್ಕ್ರೀನ್ ಅಳವಡಿಸುವಂತೆ ಸೂಚನೆ ನೀಡಿದೆ. ಸರ್ಕಾರದ ಆದೇಶದಂತೆ ಆಯಾ ಜಿಲ್ಲಾ ಕ್ರೀಡಾಂಗಣದಲ್ಲಿ ನೇರಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕ ಉಚಿತವಾಗಿ ನೋಡಲು ಜಿಲ್ಲಾಡಳಿತವೂ ಬೃಹತ್ ಎಲ್​ಇಡಿ ಸ್ಕ್ರೀನ್​ನನ್ನು ಅಳವಡಿಸಲು ಸಿದ್ಧತೆ ಮಾಡಿಕೊಂಡಿದೆ. ಜೊತೆಗೆ ಭದ್ರತೆಗೆ ಪೊಲೀಸರನ್ನ ನಿಯೋಜಿಸಿದೆ.

ಇನ್ನಷ್ಟು ಕ್ರಿಕೆಟ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:33 am, Sun, 19 November 23

Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us