AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತೆ ಮಗಳ ಜೊತೆ ಸರಸ, ಬೇರೊಬ್ಬಳ ಜತೆ ಸಂಸಾರ: ಇದೇನಿದು ವಿದ್ಯೆ ಕಲಿಸುವ ಗುರುವಿನ ಆಟ?

ಶಿಕ್ಷಕ ವೃತ್ತಿ ಸಮಾಜದಲ್ಲಿ ಅತ್ಯಂತ ಪವಿತ್ರವಾಗಿದ್ದು, ಶಿಕ್ಷಕ ಹುದ್ದೆ ಸಮಾಜವನ್ನು ಪರಿವರ್ತಿಸುವ ಶಕ್ತಿ ಹೊಂದಿದೆ. ಶಿಕ್ಷಕರು ವಿದ್ಯಾರ್ಥಿಗಳ ಮೂಲಕ ಸಮಾಜದ ದಿಕ್ಕನ್ನು ಬದಲಿಸುವ ಸಾಮರ್ಥ್ಯ ಹೊಂದಿರುತ್ತಾರೆ. ವೃತ್ತಿಯಲ್ಲಿನ ಪ್ರಾಮಾಣಿಕತೆಯಿಂದ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂಬ ಪರಿಕಲ್ಪನೆ ಇದೆ. ಹೀಗಾಗಿ ಶಿಕ್ಷಕರಿಗೆ ಸಮಾಜದಲ್ಲಿ ಬಹಳ ಗೌರವದ ಸ್ಥಾನವಿದ್ದು, ಶಿಕ್ಷಕರು ನಿರ್ವಹಿಸುವ ಕಾರ್ಯ ಅನನ್ಯವಾಗಿದೆ. ಆದ್ರೆ, ಇಲ್ಲೋರ್ವ ಕೊಪ್ಪಳದಲ್ಲಿ ಸರ್ಕಾರಿ ಶಿಕ್ಷಕ ಮನೆಹಾಳ ಕೆಲಸ ಮಾಡಿದ್ದು, ಶಿಕ್ಷಕ ವೃತ್ತಿಗೆ ಕಳಂಕ ತಂದಿದ್ದಾನೆ.

ಅತ್ತೆ ಮಗಳ ಜೊತೆ ಸರಸ, ಬೇರೊಬ್ಬಳ ಜತೆ ಸಂಸಾರ: ಇದೇನಿದು ವಿದ್ಯೆ ಕಲಿಸುವ ಗುರುವಿನ ಆಟ?
Koppal Teacher Basavaraj
ಶಿವಕುಮಾರ್ ಪತ್ತಾರ್
| Edited By: |

Updated on: Apr 25, 2026 | 3:04 PM

Share

ಕೊಪ್ಪಳ, (ಏಪ್ರಿಲ್ 25): ವಿದ್ಯೆ ಕಲಿಸಬೇಕಾದ ಗುರುವೇ ಇಲ್ಲಿ ಕಾಮಪಿಶಾಚಿಯಾಗಿದ್ದಾನೆ. ಮದುವೆಯಾಗುವುದಾಗಿ (Marriage)  ನಂಬಿಸಿ ಸ್ವಂತ ಅತ್ತೆ ಮಗಳನ್ನೇ ಐದು ವರ್ಷಗಳಿಂದ ಪ್ರೀತಿಸಿ, ದೈಹಿಕವಾಗಿ ಬಳಸಿಕೊಂಡು ಈಗ ಕೈಕೊಟ್ಟಿದ್ದಾನೆ. ಅಲ್ಲದೇ ಮತ್ತೊಬ್ಬಳ ಜೊತೆ ಮದುವೆಯಾಗಿದ್ದಾನೆ. ಹೌದು…ಕೊಪ್ಪಳ (Koppal) ಜಿಲ್ಲೆಯ ಕನಕಗಿರಿ ತಾಲೂಕಿನ ಕನ್ನೇರಮಡುವಿನಲ್ಲಿ ಬಸವರಾಜ ಎನ್ನುವ ಸರ್ಕಾರಿ ಶಿಕ್ಷಕ, ಅತ್ತೆ ಮಗಳ ಜೊತೆ ಹಿರಿಯರ ಸಮ್ಮುಖದಲ್ಲೇ ನಿಶ್ಚಿತಾರ್ಥ (engagement) ಮಾಡಿಕೊಂಡಿದ್ದ. ಆದ್ರೆ, ಇದೀಗ ಬಸವರಾಜ ಮತ್ತೋರ್ವಳ ಜೊತೆ ಮದುವೆಯಾಗಿದ್ದು, ವಿವಾಹ ನೋಂದಣಿ ಪತ್ರವನ್ನು ಅತ್ತೆ ಮಗಳಿಗೆ ಕಳುಹಿಸಿದ್ದಾನೆ. ಇದರಿಂದ ಕಂಗಾಲದ ಯುವತಿ, ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ಸರಕಾರಿ ಶಿಕ್ಷಕನಾಗಿ ಸಮಾಜಕ್ಕೆ ಮಾದರಿಯಾಗಬೇಕಿದ್ದ ಬಸವರಾಜ ಹರಿಜನ್ ಎಂಬಾತ ತನ್ನ ನೈತಿಕತೆಯನ್ನೇ ಮರೆತು ವರ್ತಿಸಿದ್ದಾನೆ. ಹುಲಸನಟ್ಟಿ ಮೂಲದ ಯುವತಿ ಕರೆಮ್ಮಾ ಕೊಪ್ಪಳದ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎಸ್ಸಿ ಓದುತ್ತಿದ್ದಾಗಿನಿಂದಲೂ ಬಸವರಾಜನ ಜೊತೆ ಸಂಪರ್ಕವಿತ್ತು. ಸ್ವಂತ ಅತ್ತೆ ಮಗ ಎನ್ನುವ ಕಾರಣಕ್ಕೆ ಯುವತಿ ಆತನನ್ನು ಕುರುಡಾಗಿ ನಂಬಿದ್ದಳು. ನೌಕರಿ ಸಿಕ್ಕ ತಕ್ಷಣ ಮದುವೆಯಾಗುವುದಾಗಿ ನಂಬಿಸಿದ್ದ ಬಸವರಾಜ, ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಇಷ್ಟೇ ಅಲ್ಲದೆ, ಕನಕಗಿರಿ ತಾಲೂಕಿನ ಕನ್ನೇರಮಡುವಿನಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ಕೂಡ ಮಾಡಿಕೊಂಡಿದ್ದ. ಆದರೆ, ಯಾವಾಗ ಸರಕಾರಿ ಶಿಕ್ಷಕನ ನೌಕರಿ ಭದ್ರವಾಯಿತೋ, ಆಗ ಈತನ ಬುದ್ಧಿ ಬದಲಾಗಿದೆ. ಪ್ರೀತಿಸಿದ ಅತ್ತೆ ಮಗಳನ್ನು ನಡುನೀರಲ್ಲಿ ಬಿಟ್ಟು, ರತ್ನವ್ವ ಎಂಬ ಯುವತಿಯೊಂದಿಗೆ ರಹಸ್ಯವಾಗಿ ವಿವಾಹವಾಗಿದ್ದಾನೆ.

ಇದನ್ನೂ ಓದಿ: ನವ ವಿವಾಹಿತೆ ನಾಪತ್ತೆ ಕೇಸ್​​ಗೆ ಟ್ವಿಸ್ಟ್​: ಮುಸ್ಲಿಂ ಯುವಕನ ಜೊತೆ ಯುವತಿ ಪತ್ತೆ; ಪೊಲೀಸ್​​ ಠಾಣೆಯಲ್ಲಿ ಹೈಡ್ರಾಮಾ

ಮೋಸ ಮಾಡಿದ್ದಷ್ಟೇ ಅಲ್ಲದೆ ಬಸವರಾಜ, ರತ್ನವ್ವಳೊಂದಿಗೆ ತಾನು ಮಾಡಿಕೊಂಡ ಮದುವೆಯ ನೋಂದಣಿ ಪತ್ರವನ್ನು ಸಂತ್ರಸ್ತ ಯುವತಿಯ ಮನೆಗೆ ಕಳುಹಿಸಿದ್ದಾನೆ. ಇದರಿಂದ ಕಂಗಾಲಾದ ಯುವತಿ ಮತ್ತು ಆಕೆಯ ಪೋಷಕರು ಈಗ ನ್ಯಾಯಕ್ಕಾಗಿ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಹಿರಿಯರ ಸಮ್ಮುಖದಲ್ಲಿ ನಿಶ್ವಯ ಮಾಡಿಕೊಂಡು ಇದೀಗ ಮತ್ತೊಂದು ಮದುವೆಯಾಗಿರುವ ಬಸವರಾಜ್ ಗೆ ತಕ್ಕ ಶಿಕ್ಷೆ ಆಗಬೇಕು ಆಗ್ರಹಿಸಿದ್ದಾರೆ. ಈ ಸಂಬಂಧ ಪೊಲೀಸರು ಸಹ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ
ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ
ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್
ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿ ಅವಘಡ
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿ ಅವಘಡ
ಶಾಸಕ ಲಕ್ಷ್ಮಣ ಸವದಿ ಕಣ್ಣೆದುರಲ್ಲೇ ಪ್ರಾಣಬಿಟ್ಟ ಆಪ್ತ!
ಶಾಸಕ ಲಕ್ಷ್ಮಣ ಸವದಿ ಕಣ್ಣೆದುರಲ್ಲೇ ಪ್ರಾಣಬಿಟ್ಟ ಆಪ್ತ!
ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಅಪಹರಿಸಿದ ಭೀಕರ ದೃಶ್ಯ ವೈರಲ್
ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಅಪಹರಿಸಿದ ಭೀಕರ ದೃಶ್ಯ ವೈರಲ್