ಮಹಿಳಾ ಉಪ ತಹಶೀಲ್ದಾರ್​ ಮೇಲೆ ಕಬ್ಬಿಣದ ರಾಡ್​​ನಿಂದ ದಾಳಿ: ಬೆಚ್ಚಿಬಿದ್ದ ಕಚೇರಿ ಸಿಬ್ಬಂದಿ

ವ್ಯಕ್ತಿಯೋರ್ವ ಕೊಪ್ಪಳದ ತಹಶೀಲ್ದಾರ್ ಕಚೇರಿಗೆ ನುಗ್ಗಿ ಏಕಾಏಕಿ ಉಪ ತಹಶೀಲ್ದಾರ್​ ಮೇಲೆ ಕಬ್ಬಿಣದ ರಾಡ್​ನಿಂದ ದಾಳಿ ಮಾಡಿರುವ ಘಟನೆ ನಡೆದಿದೆ. ಅಚ್ಚರಿ ಅಂದ್ರೆ ಪರಿಚಯಸ್ಥನೇ ಮಹಿಳಾ ಅಧಿಕಾರಿ ಮೇಲೆ ರಾಡ್​ನಿಂದ ಹಲ್ಲೆ ಮಾಡಿದ್ದಾನೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಮಹಿಳಾ ಉಪ ತಹಶೀಲ್ದಾರ್​ ಮೇಲೆ ಕಬ್ಬಿಣದ ರಾಡ್​​ನಿಂದ ದಾಳಿ: ಬೆಚ್ಚಿಬಿದ್ದ ಕಚೇರಿ ಸಿಬ್ಬಂದಿ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ರಮೇಶ್ ಬಿ. ಜವಳಗೇರಾ

Updated on: Nov 13, 2024 | 6:26 PM

ಕೊಪ್ಪಳ, (ನವೆಂಬರ್ 13): ವ್ಯಕ್ತಿಯೋರ್ವ ತಹಶೀಲ್ದಾರ್ ಕಚೇರಿಗೆ ನುಗ್ಗಿ ಏಕಾಏಕಿ ಉಪ ತಹಶೀಲ್ದಾರ್​ ಮೇಲೆ ಕಬ್ಬಿಣದ ರಾಡ್​ನಿಂದ ದಾಳಿ ಮಾಡಿರು ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ. ಕೊಪ್ಪಳ ನಗರದ ಉಪ ತಹಶೀಲ್ದಾರ್​ ರೇಖಾ ದೀಕ್ಷಿತ್ ಎನ್ನುವರ ಮೇಲೆ ವ್ಯಕ್ತಿಯೋರ್ವ ರಾಡ್​ನಿಂದ ಹಲ್ಲೆ ಮಾಡಿದ್ದಾನೆ. ಪ್ರಭು ಚೆನ್ನದಾಸರ್ ಎನ್ನುವನೇ ರೇಖಾ ಅವರ ಮೇಲೆ ದಾಳಿ ಮಾಡಿದ್ದು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಉಪತಹಶೀಲ್ದಾರ್ ರೇಖಾ ಅವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಂದಡೆ ಈ ಘಟನೆಯಿಂದ ಕಚೇರಿ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ.

ಪ್ರಭು ಚೆನ್ನದಾಸರ್ ರೇಖಾಳ ಅತ್ಯಾಪ್ತ. ನಿನ್ನೆ (ನವೆಂಬರ್ 12) ಸಂಜೆ 5 ಗಂಟೆ ಸುಮಾರಿಗೆ ಕಚೇರಿಯಲ್ಲಿ ರೇಖಾ ಬ್ಯುಸಿಯಾಗಿದ್ರು. ಈ ವೇಳೆ ಪ್ರಭು, ಕಬ್ಬಿಣದ ರಾಡ್ ಹಿಡಿದು ಕಚೇರಿಗೆ ನುಗ್ಗಿ ಏಕಾಏಕಿ ರೇಖಾ ಮೇಲೆ ದಾಳಿ ಮಾಡಿದ್ದು, ರಾಡ್​ನಿಂದ ರೇಖಾಳ ತಲೆಗೆ 3 ಬಾರಿ ಹೊಡೆದಿದ್ದಾನೆ. ರೇಖಾ ಕುಸಿದು ಬಿದ್ದರೂ ಸಹ ರಾಕ್ಷಸನಂತೆ ಥಳಿಸಿದ್ದಾನೆ. ಕೂಡಲೇ ಕಚೇರಿ ಸಿಬ್ಬಂದಿ ರೇಖಾರನ್ನ ರಕ್ಷಿಸಿ, ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳ ದಲಿತರ ಮೇಲೆ ದೌರ್ಜನ್ಯ: 97 ಅಪರಾಧಿಗಳಿಗೆ ಜಾಮೀನು ಮಂಜೂರು

ಇನ್ನು ಹಲ್ಲೆ ಮಾಡಿದ ಪ್ರಭು ಮೂರು ವರ್ಷದಿಂದ ರೇಖಾಗೆ ಪರಿಚಯಸ್ಥ. ಪ್ರತಿದಿನ ಈತನೇ ರೇಖಾಳನ್ನ ಕಚೇರಿಗೆ ಕರ್ಕೊಂಡು ಬರೋದು, ಕರ್ಕೊಂಡ್ ಹೋಗೋದ್ ಮಾಡ್ತಿದ್ನಂತೆ. ಜತೆಗೆ ಮನೆ ಕೆಲಸಗಳನ್ನ ನೋಡಿಕೊಳ್ತಿದ್ನಂತೆ. ಇನ್ನು ರೇಖಾ ಈತನಿಗೆ ಹಣಕಾಸಿನ ನೆರವನ್ನೂ ನೀಡಿದ್ರಂತೆ. ಆದ್ರೆ, ಇವರ ಮಧ್ಯೆ ಅದೇನಾಯ್ತೋ ಏನೋ, ನಿನ್ನೆ ಏಕಾಏಕಿ ಹಲ್ಲೆ ಮಾಡಿದ್ದಾನೆ. ಸದ್ಯ, ಪ್ರಭುನನ್ನು ಕೊಪ್ಪಳ ನಗರ ಠಾಣೆ ಪೊಲೀಸರು ಬಂಧಿಸಿದ್ದು, ಹಲ್ಲೆ ಹಿಂದಿನ ಕಾರಣ ಬಾಯ್ಬಿಡಿಸುತ್ತಿದ್ದಾರೆ.

ಇನ್ನು ಆಪ್ತನಾಗಿದ್ದವನು ಕಿರಾತಕನಾಗಿದ್ದೇಗೆ ಎಂಬ ಪ್ರಶ್ನೆ ಹುಟ್ಟುಹಾಕಿದೆ. ಹಣದ ಕಾರಣವೋ, ವೈಯಕ್ತಿಕ ವಿಚಾರದಿಂದ ಇದೆಲ್ಲ ನಡೆದಿದ್ಯಾ ಎನ್ನುವುದು ತನಿಖೆಯಿಂದ ತಿಳಿದುಬರಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್