AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Koppal News: ವಿದ್ಯುತ್ ಬಿಲ್ ವಸೂಲಿಗೆ ಹೋದ ಲೈನ್​ಮ್ಯಾನ್​ ಮೇಲೆ ಚಪ್ಪಲಿಯಿಂದ ಹಲ್ಲೆ

ಕರ್ನಾಟಕದಲ್ಲಿ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ವಿದ್ಯುತ್​ ಬಿಲ್​ ವಿಚಾರದಲ್ಲಿ ಲೈನ್​ಮ್ಯಾನ್​ ಮತ್ತು ಜನಸಾಮಾನ್ಯರ ನಡುವೆ ಜಟಾಪಟಿಗಳು ನಡೆಯುತ್ತಿದ್ದು, ಇದೀಗ ಜಗಳ ಹಲ್ಲೆ ಮಾಡುವ ಮಟ್ಟಿಗೆ ಹೋಗಿದೆ.

ರಮೇಶ್ ಬಿ. ಜವಳಗೇರಾ
|

Updated on: May 24, 2023 | 9:54 AM

Share

ಮುಖ್ಯಾಂಶಗಳು

  • ಆರು ತಿಂಗಳಿಂದ ವಿದ್ಯುತ್ ಬಿಲ್ ಬಾಕಿಯಿದ್ದಕ್ಕೆ ಲೈನ್ ಕಟ್ ಮಾಡಲು ಬಂದ ಲೈನ್ ಮೆನ್ ಮೇಲೆ ಹಲ್ಲೆ
  • ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ನಡೆದ ಘಟನೆ
  • ಲೈನಮ್ಯಾನ್ ಮಂಜುನಾಥ್ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ ಚಂದ್ರಶೇಖರ್ ಹಿರೇಮಠ ವಿರುದ್ಧ ದೂರು ದಾಖಲು

ಕೊಪ್ಪಳ: ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಘೋಷಿಸಿರುವ ಐದು ಗ್ಯಾರಂಟಿಗಳ(Congress guarantee) ಅನುಷ್ಠಾನಕ್ಕೆ ಹಣಕಾಸು ಹೊಂದಾಣಿಕೆ ಜತೆಗೆ ಅರ್ಹ ಫ‌ಲಾನುಭವಿಗಳ ಆಯ್ಕೆ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಗ್ಯಾರಂಟಿಗಳನ್ನು ಹೇಗೆಲ್ಲ ಜಾರಿಗೆ ತರಬೇಕು ಎನ್ನುವ ಮಾರ್ಗಸೂಚಿಗಳನ್ನು ತಯಾರಿಸುತ್ತಿದೆ. ಅದರಲ್ಲೂ ಮುಖ್ಯವಾಗಿ ಅಧಿಕಾರಕ್ಕೆ ಬಂದರೆ 200 ಯೂನಿಟ್​ ಉಚಿತ ಎಂದು ಕಾಂಗ್ರೆಸ್​ ಹೇಳಿತ್ತು. ಇದೀಗ ಕಾಂಗ್ರೆಸ್​ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಕೆಲ ಜನರು ವಿದ್ಯುತ್​ ಬಿಲ್ (ಛ)​ ಕಟ್ಟುವುದಿಲ್ಲ ಎಂದು ಲೈನ್​ಮ್ಯಾನ್​ಗಳ ಜತೆ ಜಗಳಕ್ಕೆ ಇಳಿದಿದ್ದಾರೆ. ಇಷ್ಟು ದಿನ ಬರೀ ತರಾಟೆ, ಮಾತಿನಲ್ಲಿ ನಡೆಯುತ್ತಿದ್ದ ಜಗಳ ಇದೀಗ ಹಲ್ಲೆ ಮಾಡುವ ಮಟ್ಟಕ್ಕೆ ಹೋಗಿದೆ.

ಇದನ್ನೂ ಓದಿ: ಕಾಂಗ್ರೆಸ್​ ವಿದ್ಯುತ್​ ಫ್ರೀ ಗ್ಯಾರಂಟಿ ಎಫೆಕ್ಟ್​: ಜೋರಾಯ್ತು ಕರೆಂಟ್ ಒಲೆ, ಫ್ಯಾನ್, ಕೂಲರ್​​​​​ಗಳ ಖರೀದಿ

ಹೌದು… ಕೊಪ್ಪಳದ ಕುಕನಪಲ್ಲಿ ಗ್ರಾಮದಲ್ಲಿ ವಿದ್ಯುತ್​ ಬಿಲ್​ ವಸೂಲಿಗೆ ಬಂದ ಲೈನ್​ಮ್ಯಾನ್​ ಮೇಲೆ ವ್ಯಕ್ತಿಯೊಬ್ಬ ಅವಾಚ್ಯ ಶಬ್ದದಿಂದ ನಿಂದಿಸಿದ್ದಲ್ಲದೆ, ಚಪ್ಪಲಿಯಿಂದ ಹೊಡೆದು ಹಲ್ಲೆ ಮಾಡಿದ್ದಾನೆ. ಚಂದ್ರಶೇಖರ್ ಹಿರೇಮಠ ಅವರದ್ದು ಆರು ತಿಂಗಳ 9990 ರೂಪಾಯಿ ವಿದ್ಯುತ್ ಬಿಲ್ ಬಾಕಿ ಇತ್ತು. ಈ ಹಿನ್ನಲೆಯಲ್ಲಿ ಬಾಕಿ ತುಂಬುವಂತೆ ಹೇಳಲು ಮಂಜುನಾಥ್, ಚಂದ್ರಶೇಖರ್ ಅವರ ಮನೆಗೆ ಹೋಗಿದ್ದ. ಈ ವೇಳೆ ಚಂದ್ರಶೇಖರ್ ನಾನು ಬಾಕಿ ತುಂಬಲ್ಲ ಎಂದಿದ್ದಾನೆ. ಅದೆಲ್ಲ ಆಗಲ್ಲ ಬಾಕಿ ತುಂಬಲೇಬೇಕೆಂದು ಲೈನಮ್ಯಾನ್ ಮಂಜುನಾಥ ಹೇಳಿದ್ದಾನೆ. ಬಳಿಕ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದ್ದು, ಏಕಾಏಕಿ ಚಂದ್ರಶೇಖರ್ ಲೈನ್​ಮ್ಯಾನ್ ಮಂಜುನಾಥನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾನೆ. ಮಂಜುನಾಥ ಮೇಲೆ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆಗಿದ್ದು, ಹಲ್ಲೆ ನಡೆಸಿದ ಚಂದ್ರಶೇಖರಯ್ಯ ವಿರುದ್ಧ ಮಂಜುನಾಥ್​ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಲ್ಲದೇ ಆರೋಪಿ ಚಂದ್ರಶೇಖರ್ ವಿರುದ್ಧ ಕ್ರಮಕ್ಕೆ ಜೆಸ್ಕಾಂ ಸಿಬ್ಬಂದಿ ಆಗ್ರಹಿಸಿದ್ದಾರೆ.

ಇದೇ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಜಮಾಪುರ ಗ್ರಾಮದ ಗ್ರಾಮಸ್ಥರು ಮೊನ್ನೇ ಅಷ್ಟೇ ಕರೆಂಟ್ ಬಿಲ್​ ಕಟ್ಟಲ್ಲವೆಂದು ಹೇಳಿದ್ದರು. ಬಿಲ್​ ಬೇಕಾದರೆ ಕಾಂಗ್ರೆಸ್ ಸರ್ಕಾರ ಬಂದಿದೆ ಅವರ ಬಳಿಯೆ ತಗೆದುಕೋ ಹಾಗೂ ಬೇಕಾದರೆ ಕಮರ್ಷಿಯಲ್ ಮೀಟರ್​ಗೆ ಮಾತ್ರ ಬಿಲ್ ಕೇಳು ಎಂದು ಲೈನ್​ಮ್ಯಾನ್​ಗೆ ಹೇಳಿದ್ದರು. ಅಲ್ಲದೇ ನಮ್ಮ ತಂಟೆಗೆ ಬರದಂತೆ ಬಿಲ್​ ಕಲೆಕ್ಟರ್​ಗೆ ಗಾಮಸ್ಥರು ಎಚ್ಚರಿಕೆ ನೀಡಿದ್ದರು.

ಲೈನ್​ಮ್ಯಾನ್​ ಮೇಲೆ ಹಲ್ಲೆ ಮಾಡಿದ ವಿಡಿಯೋ

ಕೊಪ್ಪಳ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ