AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಕರಿಗೇ ಪಾಠ – ಇದು ಶೈಕ್ಷಣಿಕವಾಗಿ ಹಿಂದುಳಿದ ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳ ಏಳಿಗೆಗಾಗಿ

ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಫಲಿತಾಂಶ ಬಂದಾಗ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಫಲಿತಾಂಶವನ್ನು ಮೇಲಿಂದ ನೋಡುವ ಬದಲು ಕೆಳಗಿನಿಂದಲೇ ನೋಡುವುದು ರೂಢಿಯಾಗಿದೆ! ಇದನ್ನು ಏರುಪೇರು ಮಾಡಲು ಹೊಸ ಯೋಜನೆ - ಮಕ್ಕಳ ಬದಲು ಟೀಚರ್ಸ್ ಗೆ ಪಾಠ!

ಶಿಕ್ಷಕರಿಗೇ ಪಾಠ - ಇದು ಶೈಕ್ಷಣಿಕವಾಗಿ ಹಿಂದುಳಿದ ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳ ಏಳಿಗೆಗಾಗಿ
ಶೈಕ್ಷಣಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳ ಏಳಿಗೆಗಾಗಿ
ಸಂಜಯ್ಯಾ ಚಿಕ್ಕಮಠ
| Edited By: |

Updated on:Feb 22, 2024 | 3:45 PM

Share

ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಫಲಿತಾಂಶ ಬಂದಾಗ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಫಲಿತಾಂಶವನ್ನು ಮೇಲಿಂದ ನೋಡುವ ಬದಲು ಕೆಳಗಿನಿಂದಲೇ ನೋಡುವುದು ರೂಢಿಯಾಗಿದೆ! ಇದಕ್ಕೆ ಕಾರಣ ಫಲಿತಾಂಶ ಪ್ರಕಟವಾದಾಗ ಕೊನೆಯ ಸ್ಥಾನದಲ್ಲಿರೋದು ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು. ಹೌದು ಕಲ್ಯಾಣ ಕರ್ನಾಟಕ ಭಾಗ ಶೈಕ್ಷಣಿಕವಾಗಿ ಹಿಂದುಳಿದಿದೆ. ಆದ್ರೆ ಈ ಹಣೆಪಟ್ಟಿಯನ್ನು ಬದಲಾಯಿಸಲು ಅನೇಕ ಪ್ರಯತ್ನಗಳು ಆರಂಭವಾಗಿವೆ. ಹೌದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಮುಂದೆ ತರಲು ಕೆ ಕೆ ಆರ್ ಡಿ ಬಿ ಹೊಸ ಪ್ಲ್ಯಾನ್ ರೂಪಿಸಿದೆ. ಮಕ್ಕಳ ಬದಲು ಟೀಚರ್ಸ್ ಗೆ ಪಾಠ ಹೇಳಲು ಮುಂದಾಗಿದೆ.

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ರಿಸಲ್ಟ್ ಬಂದಾಗ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಕೊನೆಯಿಂದ ಸ್ಥಾನ ಸಿಗೋದು ಮಾತ್ರ ಪ್ರತಿ ವರ್ಷ ಪಕ್ಕಾ ಆಗಿರುತ್ತೆ. ಅದಕ್ಕೆ ಕಾರಣ ಗುಣಮಟ್ಟದ ಶಿಕ್ಷಣ ಕೊರತೆ, ಮೂಲಭೂತ ಸೌಕರ್ಯ ಕೊರತೆ, ತಾಂಡವವಾಡುವ ಬಡತನ, ಶಿಕ್ಷಕರ ಕೊರತೆ ಸೇರಿದಂತೆ ಅನೇಕಾನೇಕ ಕಾರಣಗಳಿವೆ. ಆದ್ರೆ ಸದ್ಯ ಕಲ್ಯಾಣ ಕರ್ನಾಟಕ ಹೊತ್ತುಕೊಂಡಿರೋ ಈ ಹಣೆಪಟ್ಟಿಯನ್ನ ಹೋಗಲಾಡಿಸಲು ಸರ್ಕಾರ ಹೊಸ ಪ್ಲ್ಯಾನ್ ರೂಪಿಸಿದೆ.

ಶೈಕ್ಷಣಿಕವಾಗಿ ಹಿಂದುಳಿದ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಮೊದಲು ಮಕ್ಕಳ ಬದಲಿಗೆ ಶಿಕ್ಷಕರಿಗೆ ಪಾಠ ಮಾಡಲು ಮುಂದಾಗಿದೆ. ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಫಲಿತಾಂಶದ ಸುಧಾರಣೆಗೆ ಕೆಕೆಆರ್ ಡಿಬಿ ವಿಭಿನ್ನ ಯೋಜನೆ ರೂಪಿಸಿದೆ. ಮಕ್ಕಳ ಬದಲಾಗಿ ಈ ಭಾಗದ ಶಿಕ್ಷಕರಿಗೆ ವ್ಯಕ್ತಿತ್ವ ವಿಕಸನ ತರಬೇತಿ ನೀಡಲು ಮುಂದಾಗಿದ್ದಾರೆ. ಪ್ರಾಯೋಗಿಕವಾಗಿ ಕಲ್ಯಾಣ ಕರ್ನಾಟಕ ವ್ಯಾಪ್ತಿಯ 7 ಜಿಲ್ಲೆಗಳಲ್ಲಿ ಜಿಲ್ಲೆಗೆ ಒಂದರಂತೆ ತರಬೇತಿ ಶಿಬಿರ ಆಯೋಜಿಸಲಾಗುತ್ತಿದೆ. ಸ್ವತಃ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಜಯ್ ಸಿಂಗ್ ಶಿಬಿರ ಆಯೋಜನೆಗೆ ಆದೇಶಿಸಿದ್ದು ವಿಶೇಷವಾಗಿದೆ. ಅಂತಾರಾಷ್ಟ್ರೀಯ ತರಬೇತುದಾರ ಹಾಗೂ ಮಾರ್ಗದರ್ಶಕ ಜಯಪ್ರಕಾಶ ನಾಗತಿಹಳ್ಳಿ ಅವರು ಕಲ್ಯಾಣ ಕರ್ನಾಟಕದ ಶಿಕ್ಷಕರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಜನ ಸಾಕಷ್ಟು ಪ್ರತಿಭಾವಂತರಿದ್ದಾರೆ. ಆದರೆ ಶಾಲಾ ಹಂತದಲ್ಲಿ ಸೂಕ್ತ ಮಾರ್ಗದರ್ಶನದ ಕೊರತೆಯಿಂದ ಹೆಚ್ಚು ಫಲಿತಾಂಶ ಪಡೆಯಲು ಸಾಧ್ಯವಾಗುತ್ತಿಲ್ಲ. ಈ ಭಾಗದ ಮಕ್ಕಳಿಗೆ ತರಬೇತಿ ಸಿಗಬೇಕು ಎಂದಾದರೆ ಇಲ್ಲಿನ ಶಿಕ್ಷಕರಿಗೆ ವ್ಯಕ್ತಿತ್ವ ವಿಕಸನದ ತರಬೇತಿ ಅಗತ್ಯ ಎಂದು ನಿರ್ಧರಿಸಿ, ಶಿಕ್ಷಕರಿಗೆ ತರಬೇತಿ ಕೊಡಿಸಲು ಮುಂದಾಗಿದ್ದಾರೆ. ಯೋಜನೆಯನ್ನು ಪ್ರಾಯೋಗಿಕವಾಗಿ ಈಗಾಗಲೇ ಅನುಷ್ಠಾನಕ್ಕೆ ಮುಂದಾಗಿದ್ದಾರೆ.

ಕಲ್ಯಾಣ ಕರ್ನಾಟಕ 7 ಜಿಲ್ಲೆಯಲ್ಲಿ ಜಿಲ್ಲೆಗೆ ಒಂದರಂತೆ ಒಂದು ದಿನದ ತರಬೇತಿ ಶಿಬಿರ ಆಯೋಜಿಸಲಾಗಿದೆ. ಈಗಾಗಲೇ ಬಳ್ಳಾರಿ, ವಿಜಯನಗರ ಮುಗಿಸಿ, ಇಂದು ಕೊಪ್ಪಳದಲ್ಲಿ ಶಿಬಿರ ನಡೆಯಿತು. ಜಿಲ್ಲೆಯ ಆಯ್ದ 100 ಶಿಕ್ಷಕರು ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದರು. ಪ್ರಾಯೋಗಿಕ ಶಿಬಿರದಲ್ಲಿ ಭಾಗವಹಿಸಿದ ಶಿಕ್ಷಕರ ಪ್ರತಿಕ್ರಿಯೆ ನೋಡಿಕೊಂಡು ತಾಲೂಕು ಮಟ್ಟದಲ್ಲೂ ಶಿಬಿರ ನಡೆಸುವ‌ ಚಿಂತನೆ ಮಂಡಳಿಗೆ ಇದೆ ಅಂತಾರೆ. ಬುಧವಾರ ಕೊಪ್ಪಳದ ಗವಿಸಿದ್ದೇಶ್ವರ ಕಾಲೇಜಿನಲ್ಲಿ ಈ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ನಡೆದಿದ್ದು ನೂರಾರು ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.

Published On - 3:44 pm, Thu, 22 February 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್