AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇದಾರನಾಥ ಯಾತ್ರೆಗೆ ತೆರಳಿದ್ದ ಕೊಪ್ಪಳದ ಅರ್ಚಕ ಹೃದಯಾಘಾತದಿಂದ ಸಾವು

ಜೂನ್ 10ರಂದು ಕೇದಾರನಾಥ ಯಾತ್ರೆಗೆ ತೆರಳಿದ್ದ ಅರ್ಚಕ ಸಿದ್ದಯ್ಯ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ 10 ದಿನಗಳಿಂದ ಧಾರ್ಮಿಕ ಸ್ಥಳಗಳ ದರ್ಶನ ಪಡೆಯುತ್ತಿದ್ದ ಸಿದ್ದಯ್ಯ ಕೇದಾರನಾಥ ದರ್ಶನ ಮುಗಿಸಿ ಋಷಿಕೇಶ್​ಗೆ ಬಂದಾಗ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ.

ಕೇದಾರನಾಥ ಯಾತ್ರೆಗೆ ತೆರಳಿದ್ದ ಕೊಪ್ಪಳದ ಅರ್ಚಕ ಹೃದಯಾಘಾತದಿಂದ ಸಾವು
ಕೊಪ್ಪಳದ ಅರ್ಚಕ ಹೃದಯಾಘಾತದಿಂದ ಸಾವು
ಸಂಜಯ್ಯಾ ಚಿಕ್ಕಮಠ
| Edited By: ಆಯೇಷಾ ಬಾನು|

Updated on:Jun 20, 2024 | 11:12 AM

Share

ಕೊಪ್ಪಳ, ಜೂನ್.20: ಕೇದಾರನಾಥ ಯಾತ್ರೆಗೆ (Kedarnath Yatra) ತೆರಳಿದ್ದ ಕೊಪ್ಪಳ ಮೂಲದ ಅರ್ಚಕ ಸಿದ್ದಯ್ಯ ಹಿರೇಮಠ(32) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಜೂನ್ 10ರಂದು ಕೇದಾರನಾಥ ಯಾತ್ರೆಗೆ ತೆರಳಿದ್ದ ಅರ್ಚಕ ಸಿದ್ದಯ್ಯ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾರೆ. ಮೃತ ಸಿದ್ದಯ್ಯ ಕಳೆದ 10 ದಿನಗಳಿಂದ ಧಾರ್ಮಿಕ ಸ್ಥಳಗಳ ದರ್ಶನ ಪಡೆಯುತ್ತಿದ್ದರು. ಕೇದಾರನಾಥ ದರ್ಶನ ಮುಗಿಸಿ ಋಷಿಕೇಶ್​ಗೆ ಬಂದಾಗ ಹೃದಯಾಘಾತ ಸಂಭವಿಸಿದೆ.

ಸಿದ್ದಯ್ಯ ಅವರು ಈ ಮೊದಲು ಕೊಪ್ಪಳದ ಗವಿಸಿದ್ದೇಶ್ವರ ಮಠದಲ್ಲಿ ಅರ್ಚಕರಾಗಿದ್ದರು. ಸದ್ಯ ಈಗ ಕೊಪ್ಪಳ ಶಿವರಾತ್ರೇಶ್ವರ ದೇವಸ್ಥಾನದಲ್ಲಿ ಅರ್ಚಕರಾಗಿದ್ದರು. ಆದರೆ ಕೇದಾರನಾಥ ಯಾತ್ರೆಯಲ್ಲಿ ಮರಣ ಹೊಂದಿದ್ದಾರೆ.

ಹಜ್​ ಯಾತ್ರೆಗೆ ತೆರಳಿದ್ದ 90 ಮಂದಿ ಭಾರತೀಯರು ಸಾವು

ಹಜ್​ ಯಾತ್ರೆ ಮಾಡಲು ಸೌದಿ ಅರೇಬಿಯಾಗೆ ತೆರಳಿದ್ದ ಭಾರತೀಯರ ಪೈಕಿ 90 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಮೆಕ್ಕಾದಲ್ಲಿ ಗರಿಷ್ಠ ಉಷ್ಣಾಂಶ 50 ಡಿಗ್ರಿ ಸೆಲ್ಸಿಯಸ್​ಗಿಂತ ಹೆಚ್ಚಿರುವ ಪರಿಣಾಮ ಇದುವರೆಗೆ ಒಟ್ಟು 900ಕ್ಕೂ ಅಧಿಕ ಮಂದಿ ಯಾತ್ರಿಗಳು ಮೃತಪಟ್ಟಿದ್ದಾರೆ. ಅದರಲ್ಲಿ 90 ಮಂದಿ ಭಾರತದವರಾಗಿದ್ದಾರೆ. ಈಜಿಪ್ಟ್ ಅತೀ ಹೆಚ್ಚು ಯಾತ್ರಿಕರು ಬಿಸಿಗಾಳಿಗೆ ಸಾವು ಎಂದು ತಿಳಿದುಬಂದಿದೆ.

ಇದನ್ನೂ ಓದಿ: 7 ಮಂದಿ ಗಂಡಂದಿರು, ಮೂವರು ಮಕ್ಕಳಿದ್ದ ಮಹಿಳೆ ಮತ್ತೊಂದು ಮದುವೆಯಾಗಲು ಹೋಗಿ ಸಿಕ್ಕಿಬಿದ್ಲು

ಹೋಟೆಲ್ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಮಾಲೀಕ ವಿಜಯೇಂದ್ರ ಶೆಟ್ಟಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಿಲಿಕಾನ್ ಟೌನ್​ನಲ್ಲಿ ದುಷ್ಕೃತ್ಯ ನಡೆದಿದೆ. ಹಲ್ಲೆಯಿಂದ ವಿಜಯೇಂದ್ರ ಶೆಟ್ಟಿ ಕೋಮಾಗೆ ಜಾರಿದ್ದಾರೆ. ಮಂಜುನಾಥ ಟಿಫನ್ ಸೆಂಟರ್ ಮಾಲೀಕನಾಗಿರುವ ವಿಜಯೇಂದ್ರ ಶೆಟ್ಟಿ, ಮೊನ್ನೆ ರಾತ್ರಿ ಮಲಗುವಾಗ ಕಿಟಕಿ ಬಳಿ ರೂಂ ಕೀ ಇಟ್ಟು ಮಲಗಿದ್ದಾರೆ. ಇದನ್ನು ಗಮನಿಸಿದ್ದವರು ಕಿಟಕಿ ಬಳಿಯಿಟ್ಟಿದ್ದ ಕೀ ಮೂಲಕ ಡೋರ್ ತೆಗೆದು ಹಲ್ಲೆ ನಡೆಸಿ ಮತ್ತೆ ಬೀಗಹಾಕಿಕೊಂಡು ಪರಾರಿಯಾಗಿದ್ದಾರೆ.

ದೇವಸ್ಥಾನದ ಬಳಿ ಕರಡಿ ಪ್ರತ್ಯಕ್ಷ

ದಾವಣಗೆರೆ ಜಿಲ್ಲೆ ಜಗಳೂರಿನ ಕೊಡದಗುಡ್ಡ ವೀರಭದ್ರೇಶ್ವರ ದೇವಸ್ಥಾನ ಬಳಿ ಕರಡಿ ಪ್ರತ್ಯಕ್ಷವಾಗಿದೆ. ನಾಯಿಗಳು ಬೊಗಳುತಿದ್ದಂತೆ ಕರಡಿ ಕಾಲ್ಕಿತ್ತಿದೆ. ಸ್ಥಳೀಯರೊಬ್ಬರು ಕರಡಿ ಎಂಟ್ರಿಕೊಟ್ಟಿದ್ದ ದೃಶ್ಯವನ್ನ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ದೇವಸ್ಥಾನದ ಬಳಿ ಕರಡಿ ಕಾಣಿಸಿಕೊಂಡಿರುವುದು ಜನರಲ್ಲಿ ಆತಂಕ ಮೂಡಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:08 am, Thu, 20 June 24

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್