AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ವಿದ್ಯುತ್ ದೀಪಗಳಿಂದ ಜಗಮಗಿಸುತ್ತಿದೆ ಅಂಜನಾದ್ರಿ ಬೆಟ್ಟ

ವಿದ್ಯುತ್ ದೀಪಗಳಿಂದ ಅಂಜನಾದ್ರಿ ಬೆಟ್ಟ ಕಂಗೊಳಿಸಿತ್ತಿದ್ದು ನೋಡುಗರ ಕಣ್ಣಿಗೆ ವೈಭವಯುತವಾಗಿ ಕಾಣುತ್ತಿದೆ. ರಾತ್ರಿ ಸಮಯದಲ್ಲಿ ಜಗಮಗಿಸೋ ದೀಪಗಳಲ್ಲಿ‌ ಕಂಗೊಳಿಸಿದ ಅಂಜನಾದ್ರಿ ಬೆಟ್ಟವನ್ನು ನೋಡಿ ಆಂಜನೇಯನ ಭಕ್ತರು ಆನಂದಿಸುತ್ತಿದ್ದಾರೆ.

ಕೊಪ್ಪಳ: ವಿದ್ಯುತ್ ದೀಪಗಳಿಂದ ಜಗಮಗಿಸುತ್ತಿದೆ ಅಂಜನಾದ್ರಿ ಬೆಟ್ಟ
ಅಂಜನಾದ್ರಿ ಬೆಟ್ಟ
ಸಂಜಯ್ಯಾ ಚಿಕ್ಕಮಠ
| Edited By: |

Updated on: Dec 23, 2023 | 10:22 AM

Share

ಕೊಪ್ಪಳ, ಡಿ.23: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟ ರಾಮನ ಬಂಟ ಹನುಮನ ಜನ್ಮಸ್ಥಳ ಅಂತಲೇ ಪ್ರಸಿದ್ಧಿ ಪಡೆದಿದೆ. ನಾಳೆ (ಡಿ.24) ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ (Hanuman Male) ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ದೇಶದ ವಿವಿಧ ಮೂಲೆಗಳಿಂದ ಹನುಮ ಮಾಲಾಧಾರಿಗಳು ಅಂಜನಾದ್ರಿಗೆ ಬರಲಿದ್ದಾರೆ. ಹೀಗಾಗಿ ಕೊಪ್ಪಳ ಜಿಲ್ಲಾಡಳಿತ ಮತ್ತು ಮುಜರಾಯಿ ಇಲಾಖೆಯಿಂದ ಅಂಜನಾದ್ರಿ ಬೆಟ್ಟದಲ್ಲಿ ಸಾಕಷ್ಟು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಹನುಮ ಮಾಲೆ ವಿಸರ್ಜನೆ ಹಿನ್ನೆಲೆಯಲ್ಲಿ ಅಂಜನಾದ್ರಿ ಬೆಟ್ಟ ಇದೀಗ ವಿದ್ಯುತ್ ದೀಪಗಳಿಂದ‌ ಕಂಗೊಳಿಸುತ್ತಿದೆ.

ವಿದ್ಯುತ್ ದೀಪಗಳಿಂದ ಅಂಜನಾದ್ರಿ ಬೆಟ್ಟ ಕಂಗೊಳಿಸಿತ್ತಿದ್ದು ನೋಡುಗರ ಕಣ್ಣಿಗೆ ವೈಭವಯುತವಾಗಿ ಕಾಣುತ್ತಿದೆ. ರಾತ್ರಿ ಸಮಯದಲ್ಲಿ ಜಗಮಗಿಸೋ ದೀಪಗಳಲ್ಲಿ‌ ಕಂಗೊಳಿಸಿದ ಅಂಜನಾದ್ರಿ ಬೆಟ್ಟವನ್ನು ನೋಡಿ ಆಂಜನೇಯನ ಭಕ್ತರು ಆನಂದಿಸುತ್ತಿದ್ದಾರೆ.

ಚಾತುರ್ಮಾಸ್ಸದಲ್ಲಿ ರಾವಣನ ವಿರುದ್ಧ ಯುದ್ದಕ್ಕೆ ಹೋಗಲು ಹನುಮ ಸಂಕಲ್ಪವನ್ನು ಮಾಡಿ ತಪಸ್ಸು ಮಾಡುತ್ತಾನೆ. ಇದೇ ಕಾರಣಕ್ಕೆ ಹನುಮನ ಭಕ್ತರು ಚಾತುರ್ಮಾಸದ ಸಮಯದಲ್ಲಿ ತಮ್ಮ ಇಷ್ಟಾರ್ಥಗಳ ಈಡೇರಿಕೆಗೆ ಸಂಕಲ್ಪ ಮಾಡಿ ಹನುಮ ಮಾಲೆಯನ್ನು ಧರಿಸುತ್ತಾರೆ. ಡಿಸೆಂಬರ್ 24 ರಂದು ‌ಅಂಜನಾದ್ರಿ ಬೆಟ್ಟಕ್ಕೆ ಬಂದು ಹನುಮ ಮಾಲೆಯನ್ನು ವಿಸರ್ಜಿಸಲಿದ್ದಾರೆ.

ಇದನ್ನೂ ಓದಿ: ಪಂಪಾ ಸರೋವರದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹನುಮ ಮಾಲೆ ಧರಿಸಿದ ಶಾಸಕ ಜನಾರ್ದನ ರೆಡ್ಡಿ

ಕೆಆರ್​ಪಿಪಿ ಸಂಸ್ಥಾಪಕ ಮತ್ತು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ನಿನ್ನೆ ಹನುಮ ಮಾಲೆ ಧರಿಸಿದರು. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪಂಪಾ ಸರೋವರದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ‌ ಹನುಮ ಮಾಲೆ ಧರಿಸಿದರು. ಕಳೆದ ವರ್ಷ ಹನುಮ ಮಾಲೆ ಧರಿಸಿಯೇ ಗಂಗಾವತಿ ಕ್ಷೇತ್ರದಲ್ಲಿ ಚುನಾವಣೆ ಗೆ ಸ್ಪರ್ಧಿಸೋದಾಗಿ ಜನಾರ್ದನ ರೆಡ್ಡಿ ಘೋಷಿಸಿದ್ದರು. ನಂತರ ಗಂಗಾವತಿ ಕೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!