AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ವಿದ್ಯುತ್ ದೀಪಗಳಿಂದ ಜಗಮಗಿಸುತ್ತಿದೆ ಅಂಜನಾದ್ರಿ ಬೆಟ್ಟ

ವಿದ್ಯುತ್ ದೀಪಗಳಿಂದ ಅಂಜನಾದ್ರಿ ಬೆಟ್ಟ ಕಂಗೊಳಿಸಿತ್ತಿದ್ದು ನೋಡುಗರ ಕಣ್ಣಿಗೆ ವೈಭವಯುತವಾಗಿ ಕಾಣುತ್ತಿದೆ. ರಾತ್ರಿ ಸಮಯದಲ್ಲಿ ಜಗಮಗಿಸೋ ದೀಪಗಳಲ್ಲಿ‌ ಕಂಗೊಳಿಸಿದ ಅಂಜನಾದ್ರಿ ಬೆಟ್ಟವನ್ನು ನೋಡಿ ಆಂಜನೇಯನ ಭಕ್ತರು ಆನಂದಿಸುತ್ತಿದ್ದಾರೆ.

ಕೊಪ್ಪಳ: ವಿದ್ಯುತ್ ದೀಪಗಳಿಂದ ಜಗಮಗಿಸುತ್ತಿದೆ ಅಂಜನಾದ್ರಿ ಬೆಟ್ಟ
ಅಂಜನಾದ್ರಿ ಬೆಟ್ಟ
Follow us
ಸಂಜಯ್ಯಾ ಚಿಕ್ಕಮಠ
| Updated By: ಆಯೇಷಾ ಬಾನು

Updated on: Dec 23, 2023 | 10:22 AM

ಕೊಪ್ಪಳ, ಡಿ.23: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟ ರಾಮನ ಬಂಟ ಹನುಮನ ಜನ್ಮಸ್ಥಳ ಅಂತಲೇ ಪ್ರಸಿದ್ಧಿ ಪಡೆದಿದೆ. ನಾಳೆ (ಡಿ.24) ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ (Hanuman Male) ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ದೇಶದ ವಿವಿಧ ಮೂಲೆಗಳಿಂದ ಹನುಮ ಮಾಲಾಧಾರಿಗಳು ಅಂಜನಾದ್ರಿಗೆ ಬರಲಿದ್ದಾರೆ. ಹೀಗಾಗಿ ಕೊಪ್ಪಳ ಜಿಲ್ಲಾಡಳಿತ ಮತ್ತು ಮುಜರಾಯಿ ಇಲಾಖೆಯಿಂದ ಅಂಜನಾದ್ರಿ ಬೆಟ್ಟದಲ್ಲಿ ಸಾಕಷ್ಟು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಹನುಮ ಮಾಲೆ ವಿಸರ್ಜನೆ ಹಿನ್ನೆಲೆಯಲ್ಲಿ ಅಂಜನಾದ್ರಿ ಬೆಟ್ಟ ಇದೀಗ ವಿದ್ಯುತ್ ದೀಪಗಳಿಂದ‌ ಕಂಗೊಳಿಸುತ್ತಿದೆ.

ವಿದ್ಯುತ್ ದೀಪಗಳಿಂದ ಅಂಜನಾದ್ರಿ ಬೆಟ್ಟ ಕಂಗೊಳಿಸಿತ್ತಿದ್ದು ನೋಡುಗರ ಕಣ್ಣಿಗೆ ವೈಭವಯುತವಾಗಿ ಕಾಣುತ್ತಿದೆ. ರಾತ್ರಿ ಸಮಯದಲ್ಲಿ ಜಗಮಗಿಸೋ ದೀಪಗಳಲ್ಲಿ‌ ಕಂಗೊಳಿಸಿದ ಅಂಜನಾದ್ರಿ ಬೆಟ್ಟವನ್ನು ನೋಡಿ ಆಂಜನೇಯನ ಭಕ್ತರು ಆನಂದಿಸುತ್ತಿದ್ದಾರೆ.

ಚಾತುರ್ಮಾಸ್ಸದಲ್ಲಿ ರಾವಣನ ವಿರುದ್ಧ ಯುದ್ದಕ್ಕೆ ಹೋಗಲು ಹನುಮ ಸಂಕಲ್ಪವನ್ನು ಮಾಡಿ ತಪಸ್ಸು ಮಾಡುತ್ತಾನೆ. ಇದೇ ಕಾರಣಕ್ಕೆ ಹನುಮನ ಭಕ್ತರು ಚಾತುರ್ಮಾಸದ ಸಮಯದಲ್ಲಿ ತಮ್ಮ ಇಷ್ಟಾರ್ಥಗಳ ಈಡೇರಿಕೆಗೆ ಸಂಕಲ್ಪ ಮಾಡಿ ಹನುಮ ಮಾಲೆಯನ್ನು ಧರಿಸುತ್ತಾರೆ. ಡಿಸೆಂಬರ್ 24 ರಂದು ‌ಅಂಜನಾದ್ರಿ ಬೆಟ್ಟಕ್ಕೆ ಬಂದು ಹನುಮ ಮಾಲೆಯನ್ನು ವಿಸರ್ಜಿಸಲಿದ್ದಾರೆ.

ಇದನ್ನೂ ಓದಿ: ಪಂಪಾ ಸರೋವರದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹನುಮ ಮಾಲೆ ಧರಿಸಿದ ಶಾಸಕ ಜನಾರ್ದನ ರೆಡ್ಡಿ

ಕೆಆರ್​ಪಿಪಿ ಸಂಸ್ಥಾಪಕ ಮತ್ತು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ನಿನ್ನೆ ಹನುಮ ಮಾಲೆ ಧರಿಸಿದರು. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪಂಪಾ ಸರೋವರದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ‌ ಹನುಮ ಮಾಲೆ ಧರಿಸಿದರು. ಕಳೆದ ವರ್ಷ ಹನುಮ ಮಾಲೆ ಧರಿಸಿಯೇ ಗಂಗಾವತಿ ಕ್ಷೇತ್ರದಲ್ಲಿ ಚುನಾವಣೆ ಗೆ ಸ್ಪರ್ಧಿಸೋದಾಗಿ ಜನಾರ್ದನ ರೆಡ್ಡಿ ಘೋಷಿಸಿದ್ದರು. ನಂತರ ಗಂಗಾವತಿ ಕೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ