AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಜನಾದ್ರಿ ದೇವಸ್ಥಾನಕ್ಕೆ ಬಂಗಾರದ ಕವಚ ದೇಣಿಗೆ: ದಾಖಲೆಗಳ ಪುನರ್ ಪರಿಶೀಲನೆಗೆ ಮುಂದಾದ ಜಿಲ್ಲಾಡಳಿತ!

ಅಂಜನಾದ್ರಿ ದೇವಸ್ಥಾನಕ್ಕೆ ಉದ್ಯಮಿ ಮಹೇಶ್ ರೆಡ್ಡಿ ನೀಡಿದ 2.50 ಕೋಟಿ ರೂ. ಮೌಲ್ಯದ ಬಂಗಾರದ ಕವಚಗಳ ತೂಕದಲ್ಲಿ ವ್ಯತ್ಯಾಸ ಕಂಡುಬಂದಿದೆ. ದಾನಿಗಳು ನೀಡಿದ 1280 ಗ್ರಾಂ ಬಂಗಾರದ ತೂಕದ ಹೇಳಿಕೆ ಮತ್ತು ಮೌಲ್ಯಮಾಪಕರ ಅಂದಾಜಿನ ನಡುವೆ ಗೊಂದಲ ಉಂಟಾಗಿದ್ದು, ಜಿಲ್ಲಾಧಿಕಾರಿಗಳು ದಾಖಲೆಗಳ ಪುನರ್ ಪರಿಶೀಲನೆಗೆ ಆದೇಶಿಸಿದ್ದಾರೆ.

ಅಂಜನಾದ್ರಿ ದೇವಸ್ಥಾನಕ್ಕೆ ಬಂಗಾರದ ಕವಚ ದೇಣಿಗೆ: ದಾಖಲೆಗಳ ಪುನರ್ ಪರಿಶೀಲನೆಗೆ ಮುಂದಾದ ಜಿಲ್ಲಾಡಳಿತ!
ಅಂಜನಾದ್ರಿ ದೇವಸ್ಥಾನಕ್ಕೆ ಬಂಗಾರದ ಕವಚ ದೇಣಿಗೆ: ದಾಖಲೆಗಳ ಪುನರ್ ಪರಿಶೀಲನೆಗೆ ಮುಂದಾದ ಜಿಲ್ಲಾಡಳಿತ!
ಶಿವಕುಮಾರ್ ಪತ್ತಾರ್
| Edited By: |

Updated on: May 12, 2026 | 12:04 PM

Share

ಕೊಪ್ಪಳ, ಮೇ 12: ಹನುಮ ಜನ್ಮಸ್ಥಳ ಎಂದೇ ಪ್ರಸಿದ್ಧವಾಗಿರುವ ಅಂಜನಾದ್ರಿ (Anjanadri) ಬೆಟ್ಟದ ಆಂಜನೇಯ ದೇವಸ್ಥಾನಕ್ಕೆ ಹೈದರಾಬಾದ್ ಮೂಲದ ಉದ್ಯಮಿ ಮಹೇಶ್ ರೆಡ್ಡಿ ನೀಡಿದ ಸುಮಾರು 2.50 ಕೋಟಿ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳ ವಿಚಾರದಲ್ಲಿ ಈಗ ಗೊಂದಲ ಮೂಡಿದ್ದು, ಜಿಲ್ಲಾಡಳಿತವು ದಾಖಲೆಗಳ ಮರುಪರಿಶೀಲನೆಗೆ ಮುಂದಾಗಿದೆ. ಪಂಚನಾಮ ಪ್ರಕ್ರಿಯೆಯ ನಂತರ ಎಲ್ಲಾ ಆಭರಣಗಳನ್ನು ದೇವಸ್ಥಾನದ ಸಮಿತಿಯ ಸುಪರ್ದಿಗೆ ತೆಗೆದುಕೊಳ್ಳುವ ಬಗ್ಗೆ ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಮುಖ್ಯಾಂಶಗಳು

  • ಉದ್ಯಮಿ ನೀಡಿದ ಬಂಗಾರದ ತೂಕದ ಬಗ್ಗೆ ಮೌಲ್ಯಮಾಪಕರಿಂದ ಭಿನ್ನ ವರದಿ ಸಲ್ಲಿಕೆ.
  •  ದಾನಿಗಳು ನೀಡಿದ ದಾಖಲೆಗಳನ್ನು ಮರುಪರಿಶೀಲಿಸಲು ಕೊಪ್ಪಳ ಜಿಲ್ಲಾಡಳಿತದ ಮಹತ್ವದ ನಿರ್ಧಾರ.
  •  ಬಿಲ್ ಹಾಗೂ ದಾಖಲೆಗಳ ಆಧರಿಸಿ ಆಭರಣಗಳನ್ನು ದೇವಸ್ಥಾನದ ಸುಪರ್ದಿಗೆ ಪಡೆಯುವ ಪ್ರಕ್ರಿಯೆ.

ಪ್ರಕರಣದ ಹಿನ್ನೆಲೆ

ಜನಾರ್ದನ ರೆಡ್ಡಿ ಅವರ ಆಪ್ತರೆನ್ನಲಾದ ಎಎಂಆರ್ ಪ್ರೈವೇಟ್ ಲಿಮಿಟೆಡ್‌ನ ಉದ್ಯಮಿ ಮಹೇಶ್ ರೆಡ್ಡಿ ಅವರು ಕಳೆದ ಮೇ 8ರಂದು ದೇವಸ್ಥಾನಕ್ಕೆ ವಿವಿಧ ಆಭರಣ ಹಾಗೂ ಕವಚಗಳನ್ನು ದೇಣಿಗೆಯಾಗಿ ನೀಡಿದ್ದರು. ಈ ಕವಚಗಳನ್ನು ತಾಮ್ರದಿಂದ ತಯಾರಿಸಲಾಗಿದ್ದು, ಇವುಗಳಿಗೆ ಬಂಗಾರದ ಲೇಪನಕ್ಕಾಗಿ 60 ಗೇಜ್ ಉಳ್ಳ ಬಂಗಾರದ ಹಾಳೆಗಳನ್ನು ಬಳಸಲಾಗಿದೆ ಎಂದು ದಾನಿಗಳ ಪರವಾಗಿ ಹಾಜರಿದ್ದ ವಾಸ್ತುಶಿಲ್ಪಿ ಗುಂಡಾಚಾರಿ ಸ್ಥಪತಿ ತಿಳಿಸಿದ್ದರು. ಅವರ ಪ್ರಕಾರ ಈ ಬಂಗಾರದ ಅಂದಾಜು ತೂಕ 1280 ಗ್ರಾಂ ಆಗಿತ್ತು.

ಟ್ವಿಸ್ಟ್ ನೀಡಿದ ಮೌಲ್ಯಮಾಪನ

ಆದರೆ ಸರ್ಕಾರದ ಪರವಾಗಿ ಆಭರಣಗಳನ್ನು ಪರಿಶೀಲಿಸಿದ ಅಕ್ಕಸಾಲಿಗರು ಮತ್ತು ಬ್ಯಾಂಕ್ ಮೌಲ್ಯಮಾಪಕರು ಭಿನ್ನವಾದ ವರದಿ ನೀಡಿದ್ದಾರೆ. ತಾಮ್ರದ ಕವಚಗಳಿಗೆ ಲೇಪನ ಮಾಡಲಾದ ಬಂಗಾರದ ತೂಕವು ಅಂದಾಜು 250 ಗ್ರಾಂನಿಂದ 300 ಗ್ರಾಂ ಮಾತ್ರ ಇರಬಹುದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದಾನಿಗಳು ಹೇಳಿದ ತೂಕಕ್ಕೂ ಮತ್ತು ತಜ್ಞರ ಅಂದಾಜಿಗೂ ಭಾರಿ ವ್ಯತ್ಯಾಸ ಕಂಡುಬಂದಿರುವುದರಿಂದ ಗೊಂದಲ ಉಂಟಾಗಿದೆ.

ಇದನ್ನೂ ಓದಿ ಅಂಜನಾದ್ರಿಗೆ 2 ಕೋಟಿ ರೂ. ಚಿನ್ನಾಭರಣ ಕಾಣಿಕೆ: ಹಲವು ಅನುಮಾನಗಳಿಗೆ ಕಾರಣವಾಯ್ತು ಉದ್ಯಮಿಯ ಬಿಲ್

ಜಿಲ್ಲಾಧಿಕಾರಿಗಳ ಕ್ರಮ

ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಆಭರಣಗಳಿಗೆ ಸಂಬಂಧಿಸಿದ ಬಿಲ್, ಇನ್‌ವಾಯ್ಸ್ ಮತ್ತು ಪ್ರಮಾಣಪತ್ರಗಳನ್ನು ಸಲ್ಲಿಸಲು ಮೇ 12ರ ಗಡುವು ನೀಡಿದ್ದರು. ಅದರಂತೆ ಉದ್ಯಮಿಯ ಪರವಾಗಿ ಗುಂಡಾಚಾರಿ ಸ್ಥಪತಿ ಅವರು ಮೇ 11ರಂದು ಅಗತ್ಯ ದಾಖಲೆಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದಾರೆ. ಈಗ ದಾನಿಗಳು ನೀಡಿದ ಬಿಲ್‌ಗಳು ಮತ್ತು ಮಜೂರಿ ವಿವರಗಳನ್ನು ಆಧರಿಸಿ, ಜಿಲ್ಲಾಡಳಿತವು ಎಲ್ಲಾ ದಾಖಲೆಗಳನ್ನು ಪುನಃ ಪರಿಶೀಲಿಸಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು