AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗಾಲ ಆರಂಭವಾಗ್ತಿದ್ದಂತೆ ಸಾಂಕ್ರಾಮಿಕ ರೋಗಗಳ ಭೀತಿ; ಗ್ರಾಮೀಣ ಭಾಗದಲ್ಲಿ ಹೆಚ್ಚಾದ ಡೆಂಗ್ಯೂ, ಚಿಕನಗುನ್ಯಾ

ಮಳೆಗಾಲ ಆರಂಭವಾಗಿದ್ದು, ಇದರ ಜೊತೆಗೆ ಅನೇಕ ಸಾಂಕ್ರಾಮಿಕ ರೋಗಗಳ ಭೀತಿ ಕೂಡ ಶುರುವಾಗಿದೆ. ಕೊಪ್ಪಳದಲ್ಲಿ ಒಂದೆಡೆ ಡೆಂಗ್ಯೂ, ಚಿಕನಗುನ್ಯಾ ಸೇರಿದಂತೆ ಅನೇಕ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗುತ್ತಿದೆ. ಇನ್ನೊಂದೆಡೆ ಗ್ರಾಮೀಣ ಭಾಗದಲ್ಲಿ ಮಳೆಗಾಲ ಆರಂಭವಾಗುತ್ತಿದ್ದಂತೆ ಕಲುಷಿತ ನೀರಿನ ಭೀತಿ ಕೂಡ ಆರಂಭವಾಗಿದೆ. ಹೀಗಾಗಿ ಜನರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಮಳೆಗಾಲ ಆರಂಭವಾಗ್ತಿದ್ದಂತೆ ಸಾಂಕ್ರಾಮಿಕ ರೋಗಗಳ ಭೀತಿ; ಗ್ರಾಮೀಣ ಭಾಗದಲ್ಲಿ ಹೆಚ್ಚಾದ ಡೆಂಗ್ಯೂ, ಚಿಕನಗುನ್ಯಾ
ಮಳೆಗಾಲ ಆರಂಭವಾಗ್ತಿದ್ದಂತೆ ಹೆಚ್ಚಾಸ ಸಾಂಕ್ರಾಮಿಕ ರೋಗಗಳ ಭೀತಿ
ಸಂಜಯ್ಯಾ ಚಿಕ್ಕಮಠ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jun 11, 2024 | 3:05 PM

Share

ಕೊಪ್ಪಳ, ಜೂ.11: ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಬೇಸಿಗೆ ನಾಡು ಕೊಪ್ಪಳ(Koppal) ಇದೀಗ ಮನಲೆನಾಡಿನಂತಾಗಿದೆ. ಬೇಸಿಗೆಯ ಬೇಸಿಲಿಗೆ ಬಸವಳಿದಿದ್ದ ಜನರಿಗೆ ಮಳೆ ತಂಪೆರೆಯುತ್ತಿದೆ. ಆದ್ರೆ, ಮಳೆಗಾಲ ಆರಂಭ ಆಗಿರುವುದು ಜನರ ಸಂತಸ ಎಷ್ಟು ಹೆಚ್ಚಿಸಿದೆಯೋ ಅಷ್ಟೇ ಆತಂಕವನ್ನು ಕೂಡ ಹೆಚ್ಚಿಸುತ್ತಿದೆ. ಹೌದು, ಅನೇಕ ಸಾಂಕ್ರಾಮಿಕ ರೋಗಗಳ ಆತಂಕ ಇದೀಗ ಎದುರಾಗಿದೆ. ಮಳೆಗಾಲದಲ್ಲಿ ಸೊಳ್ಳೆಗಳ ಸಂಖ್ಯೆ ಹೆಚ್ಚಾಗುವುದರಿಂದ ಡೆಂಗ್ಯೂ(Dengue), ಚಿಕನಗುನ್ಯಾ(Chikungunya), ಮಲೇರಿಯಾ ಪ್ರಕರಣಗಳು ಹೆಚ್ಚಾಗುವ ಆತಂಕ ಜನರಿಗೆ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂಧಿಯನ್ನು ಕಾಡುತ್ತಿದೆ.

ಜನವರಿ ಯಿಂದ ಇವರೆಗೆ 80 ಡೆಂಗ್ಯೂ ಪ್ರಕರಣ

ಕೊಪ್ಪಳ ನಗರ ಸೇರಿದಂತೆ ಜಿಲ್ಲೆಯ ಹಲವಡೆ ನೀರು ಸರಿಯಾಗಿ ಹರಿದುಕೊಂಡು ಹೋಗಲು ಸರಿಯಾದ ವ್ಯವಸ್ಥೆಯಿಲ್ಲ. ಹೀಗಾಗಿ ಅನೇಕ ಕಡೆ ನೀರು ನಿಂತಲ್ಲಿಯೇ ನಿಲ್ಲುತ್ತದೆ. ಇದರಿಂದ ಸೊಳ್ಳೆಗಳು ಸಂಖ್ಯೆ ದಿಢೀರನೆ ಹೆಚ್ಚಾಗುತ್ತಿದೆ. ಇನ್ನು ಕಳೆದ ಜನವರಿ ತಿಂಗಳಿಂದ ಇಂದಿನವರೆಗೆ ಜಿಲ್ಲೆಯಲ್ಲಿ 80 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಜುಲೈ ತಿಂಗಳಲ್ಲಿ ಕೂಡ ಹೆಚ್ಚಿನ ಪ್ರಕರಣಗಳು ಕಂಡು ಬಂದಿವೆಯಂತೆ. ಅದರಲ್ಲೂ ಕೊಪ್ಫಳ ತಾಲೂಕು, ಗಂಗಾವತಿ ತಾಲೂಕಿನಲ್ಲಿಯೇ ಹೆಚ್ಚಿನ ಪ್ರಕರಣಗಳು ವರದಿಯಾಗಿದ್ದು, ಜನರು ಜಾಗೃತಿ ವಹಿಸಬೇಕು, ಇಲ್ಲದಿದ್ದರೆ ಸಮಸ್ಯೆ ಹೆಚ್ಚಾಗುತ್ತದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಹೇಳುತ್ತಿದ್ದಾರೆ.

ಇದನ್ನೂ ಓದಿ:ಕ್ಯೂಲೆಕ್ಸ್ ಸೊಳ್ಳೆಗಳಿಂದ ಬೆಂಗಳೂರಿಗೂ ವೆಸ್ಟ್ ನೈಲ್ ಜ್ವರದ ಆತಂಕ

ಇನ್ನು ಮಳೆಗಾಲ ಆರಂಭವಾಗುತ್ತಿದ್ದಂತೆ ಜ್ವರ, ನೆಗಡಿ, ಕೆಮ್ಮಿನಿಂದ ಬಳಲುವವರ ಸಂಖ್ಯೆ ಹೆಚ್ಚಾಗಿದ್ದು, ಇದೀಗ ಆಸ್ಪತ್ರೆಗಳು ರೋಗಿಗಳಿಂದ ತುಂಬುತ್ತಿವೆ. ಪ್ರತಿನಿತ್ಯ ಸಾವಿರಾರು ಜನರು ಜಿಲ್ಲಾ ಆಸ್ಪತ್ರೆ, ಸೇರಿದಂತೆ ಅನೇಕ ಖಾಸಗಿ ಆಸ್ಪತ್ರೆಗಳಿಗೆ ಬಂದು ಚಿಕಿತ್ಸೆ ಪೆಡದುಕೊಂಡು ಹೋಗುತ್ತಿದ್ದಾರೆ. ಒಂದೆಡೆ ಕೊಪ್ಪಳ ಜಿಲ್ಲೆಯಲ್ಲಿ ಚಿಕನಗುನ್ಯಾ, ಡೆಂಗ್ಯೂ ಜ್ವರದ ಭೀತಿ ಹೆಚ್ಚಾದ್ರೆ, ಇನ್ನೊಂದೆಡೆ ಕಲುಷಿತ ನೀರಿನ ಸಮಸ್ಯೆ ಕೂಡ ಹೆಚ್ಚಾಗುವ ಆತಂಕ ಇದೆ. ಈ ಹಿಂದಿನ ವರ್ಷದಲ್ಲಿ ಚರಂಡಿ ನೀರು ಕುಡಿಯುವ ನೀರಿನ ಜೊತೆ ಸೇರಿದ್ದರಿಂದ ಜಿಲ್ಲೆಯ ಅನೇಕ ಕಡೆ ಕೆಲ ಜನರು ಪ್ರಾಣ ಕಳೆದುಕೊಂಡಿದ್ದರು.

ಈ ಬಾರಿ ಕೂಡ ಗ್ರಾಮೀಣ ಭಾಗದಲ್ಲಿ ಕಲುಷಿತ ನೀರಿನ ಆತಂಕ ಆರಂಭವಾಗಿದೆ. ಹೀಗಾಗಿ ನೀರನ್ನು ಪರೀಕ್ಷೆ ಮಾಡುವುದು, ಜೊತೆಗೆ ನೀರನ್ನು ಸಂಗ್ರಹಿಸಿಡದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳು ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಕೊಪ್ಪಳದಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಳವಾಗುತ್ತಿರುವುದರಿಂದ ಜನರು ಸ್ವಲ್ಪ ಜಾಗೃತಿ ವಹಿಸಬೇಕಿದೆ. ಸೊಳ್ಳೆಗಳ ಉತ್ಪತ್ತಿಯಾಗುವ ಸ್ಥಳಗಳನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕಿದೆ. ಇನ್ನೊಂದೆಡೆ ಆರೋಗ್ಯ ಇಲಾಖೆ ಕೂಡ ಇನ್ನಷ್ಟು ಕ್ರಮಗಳನ್ನು ಕೈಗೊಂಡು, ಜನರನ್ನು ರೋಗಗಳಿಂದ ದೂರವಾಗಿಡುವಂತೆ ನೋಡಿಕೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:02 pm, Tue, 11 June 24

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ