AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿಗರ ಮೇಲೆ ಹಲ್ಲೆ, ಮಹಿಳೆಯರಿಬ್ಬರ ಮೇಲೆ ಗ್ಯಾಂಗ್​ರೇಪ್: ​ಇಬ್ಬರ ಬಂಧನ, ಓರ್ವ ಪ್ರವಾಸಿಗ ಶವವಾಗಿ ಪತ್ತೆ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಪ್ರವಾಸಿಗರ ಮೇಲೆ ನಡೆದ ಹಲ್ಲೆ ಮತ್ತು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಬಲೆ ಬಿಸಿದ್ದಾರೆ. ಈ ಘಟನೆ ಮಾರ್ಚ್ 6 ರಂದು ರಾತ್ರಿ ನಡೆದಿದೆ. ದೇಶ, ವಿದೇಶಿ ಪ್ರವಾಸಿಗರ ಪೈಕಿ ಓರ್ವ ಪ್ರವಾಸಿಗ ಶವವಾಗಿ ಪತ್ತೆಯಾಗಿದ್ದಾರೆ.

ಪ್ರವಾಸಿಗರ ಮೇಲೆ ಹಲ್ಲೆ, ಮಹಿಳೆಯರಿಬ್ಬರ ಮೇಲೆ ಗ್ಯಾಂಗ್​ರೇಪ್: ​ಇಬ್ಬರ ಬಂಧನ, ಓರ್ವ ಪ್ರವಾಸಿಗ ಶವವಾಗಿ ಪತ್ತೆ
ಮೃತ ಪ್ರವಾಸಿಗ ಬಿಬಾಶ್
ಸಂಜಯ್ಯಾ ಚಿಕ್ಕಮಠ
| Edited By: |

Updated on:Mar 08, 2025 | 9:38 PM

Share

ಕೊಪ್ಪಳ, ಮಾರ್ಚ್​​ 08: ಪ್ರವಾಸಿಗರ (Tourist) ಮೇಲೆ ಹಲ್ಲೆ, ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್​ರೇಪ್​​​ ಪ್ರಕರಣ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಜಿಲ್ಲೆಯ ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ (. ಮಲ್ಲೇಶ್(22) ಮತ್ತು ಚೇತನ್​ಸಾಯಿ ಸಿಳ್ಳೇಕ್ಯಾತರ್(21) ಬಂಧಿತರು. ಬಂಧಿತರಿಬ್ಬರು (Arrested) ಗಂಗಾವತಿ ತಾಲೂಕಿನ ಸಾಯಿನಗರದ ನಿವಾಸಿಗಳು. ಪರಾರಿಯಾದ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಮಾರ್ಚ್ 6ರಂದು ರಾತ್ರಿ 11 ಗಂಟೆ ಸುಮಾರಿಗೆ ಗಂಗಾವತಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಓರ್ವ ಪ್ರವಾಸಿಗ ಶವವಾಗಿ ಪತ್ತೆ  

ಇನ್ನು ದೇಶ, ವಿದೇಶದ ಐವರು ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದರು. ಆ ಪೈಕಿ ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಪ್ರವಾಸಿಗ ಇಂದು ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಬಳಿ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಶವವಾಗಿ ಪತ್ತೆ ಆಗಿದ್ದಾರೆ.

ಇದನ್ನೂ ಓದಿ
Image
ಕೊಪ್ಪಳ: ವಿದೇಶಿ, ದೇಶಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ
Image
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
Image
ಯಾರನ್ನ ಕೇಳಿ ಟಿಕೆಟ್​ ದರ ಹೆಚ್ಚಿಸಿದ್ದೀರಿ? ಕಂಡಕ್ಟರ್​​ ಮೇಲೆ ಹಲ್ಲೆ
Image
ಪ್ರವಾಸಿಗರ ಸಾಲು ಸಾಲು ಸಾವು, ಮೃತ್ಯುಕೂಪಾದ ತುಂಗಭದ್ರಾ ನದಿ

ಇದನ್ನೂ ಓದಿ: ಕೊಪ್ಪಳ: ವಿದೇಶಿ, ದೇಶಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ, ಓರ್ವ ಪ್ರವಾಸಿಗ ನಾಪತ್ತೆ

ಒರಿಸ್ಸಾ ಮೂಲದ ಬಿಬಾಸ್ (33) ಮೃತ ಪ್ರವಾಸಿಗ. ದುಷ್ಕರ್ಮಿಗಳು ಹಣಕ್ಕಾಗಿ ಹಲ್ಲೆ ಮಾಡಿ ಎಡದಂಡೆ ಕಾಲುವೆಗೆ ದೂಡಿದ್ದರು. ನಾಲ್ವರು ಸುರಕ್ಷಿತವಾಗಿದ್ದರೆ,  ಬಿಬಾಸ್ ನಾಪತ್ತೆಯಾಗಿದ್ದರು. ಬಿಬಾಸ್​​ಗಾಗಿ ಹುಡುಕಾಟ ನಡೆಸಲಾಗಿತ್ತು. ಆದರೆ ಸಿಕ್ಕಿರಲಿಲ್ಲ. ಇಂದು ಮುಂಜಾನೆ ಶವವಾಗಿ ಪತ್ತೆಯಾಗಿದ್ದಾರೆ.

ಕೊಪ್ಪಳ ಘಟನೆ ಖಂಡಿಸಿದ ಸಿಎಂ ಸಿದ್ದರಾಮಯ್ಯ

ಈ ಪ್ರಕರಣ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದು, ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ. ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೆ ಎಂದಿದ್ದಾರೆ.

ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ. ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.

ಕೃತ್ಯ ಮಾಡಿದ್ದನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದ ಎಸ್​​ಪಿ

ಗಂಗಾವತಿಯಲ್ಲಿ ಎಸ್​​ಪಿ ಡಾ.ರಾಮ್ ಅರಸಿದ್ದಿ ಪ್ರತಿಕ್ರಿಯಿಸಿದ್ದು, ಗಾರೆ ಕೆಲಸ ಮಾಡುವ ಆರೋಪಿಗಳಿಬ್ಬರು ಕುಡಿದು ಗಲಾಟೆ ಮಾಡಿದ್ದಾರೆ. ಪ್ರವಾಸಿಗರನ್ನು ನೋಡಿ ಹಣ ಕಸಿದುಕೊಳ್ಳುವುದಕ್ಕೆ ಮುಂದಾಗಿದ್ದರು. ಈ ವೇಳೆ ಪ್ರವಾಸಿಗರ ಮತ್ತು ದುಷ್ಕರ್ಮಿಗಳ ನಡುವೆ ಗಲಾಟೆಯಾಗಿದೆ. ಕೃತ್ಯ ಮಾಡಿದ್ದನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಬಳ್ಳಾರಿ ವಲಯ ಐಜಿಪಿ ಲೋಕೇಶ ಕುಮಾರ್ ಹೇಳಿದ್ದಿಷ್ಟು 

ಬಳ್ಳಾರಿ ವಲಯ ಐಜಿಪಿ ಲೋಕೇಶ ಕುಮಾರ್ ಹೇಳಿಕೆ ನೀಡಿದ್ದು, ನಿನ್ನೆ ರಾತ್ರಿ ನಾಲ್ವರು ಪ್ರವಾಸಿಗರು, ಓರ್ವ ಹೋಮ್ ಸ್ಟೇ ಮಹಿಳೆ ಬಂದಿದ್ದರು. ಇಸ್ರೇಲ್ ಮಹಿಳೆ, ಅಮೆರಿಕದ ಪ್ರವಾಸಿಗ, ಮಹರಾಷ್ಟ್ರ ಮತ್ತು ಒರಿಸ್ಸಾ ಪ್ರವಾಸಿಗರು ಸಾಣಾಪುರ ಕೆರೆ ಬಳಿಯಿರೋ ಎಡದಂಡೆ ಕಾಲುವೆಗೆ ಬಂದಿದ್ದು, ವಾಯುವಿಹಾರಕ್ಕೆ ಬಂದು ನಕ್ಷತ್ರ ನೋಡ್ತಾ ಕೂತಿದ್ದರಂತೆ. ಈ ಸಮಯದಲ್ಲಿ ಮೂವರು ಯುವಕರು ಬಂದಿದ್ದರು ಎಂದರು.

ಇದನ್ನೂ ಓದಿ: ಯಾರನ್ನ ಕೇಳಿ ಬಸ್ ಟಿಕೆಟ್​ ದರ ಹೆಚ್ಚಿಸಿದ್ದೀರಿ? ಅಂತ ಕುಡಿದ ಮತ್ತಿನಲ್ಲಿ ಕಂಡಕ್ಟರ್​​ ಮೇಲೆ ಹಲ್ಲೆ

ಪೆಟ್ರೋಲ್​​ಗಾಗಿ ತಮಗೆ ದುಡ್ಡು ಬೇಕು ಅಂತ ಕೇಳಿದ್ದರು. ಇಪ್ಪತ್ತು ರೂಪಾಯಿ ಕೊಟ್ಟರೆ, ನೂರು ರೂಪಾಯಿ ಕೇಳಿದ್ದರಂತೆ. ಈ ಸಮಯದಲ್ಲಿ ಮೂವರು ಪ್ರವಾಸಿಗರ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ ದುಷ್ಕರ್ಮಿಗಳು ಬಳಿಕ ಎಡದಂಡೆ ಕಾಲುವೆಗೆ ದೂಡಿ ಓಡಿ ಹೋಗಿದ್ದರು. ಡೇನಿಯಲ್ ಮತ್ತು ಪಂಕಜ್ ಈಜಿ ದಡಕ್ಕೆ ಬಂದಿದ್ದಾರೆ. ಇನ್ನು ಹೋಮಸ್ಟೇ ಮಹಿಳಾ ಓನರ್​, ಇಸ್ರೆಲ್ ಪ್ರವಾಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ. ಈ ಬಗ್ಗೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಗಾಗಿ ಆರು ತಂಡ ರಚನೆ ಮಾಡಿದ್ದೇವೆ ಎಂದು ತಿಳಿಸಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:19 pm, Sat, 8 March 25

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?