ಕೊಪ್ಪಳ: ಕ್ಷುಲ್ಲಕ ವಿಚಾರಕ್ಕೆ ಗ್ರಾಮ ಪಂಚಾಯತಿ ಪಿಡಿಒ ಮೇಲೆ ಹಲ್ಲೆ; ವಿಡಿಯೋ ವೈರಲ್​

Edited By: ಕಿರಣ್ ಹನುಮಂತ್​ ಮಾದಾರ್

Updated on: Oct 13, 2023 | 5:18 PM

ನಿವೇಶನದ ದಾಖಲೆ ಒದಗಿಸಲು ಗ್ರಾಮ ಪಂಚಾಯತಿಗೆ ಮರಿಸ್ವಾಮಿ ಅರ್ಜಿ ಸಲ್ಲಿಸಿದ್ದ. ಆದರೆ, ಪಿಡಿಒ ಹನುಮಂತಪ್ಪ ದಾಖಲೆ ನೀಡಲು ವಿಳಂಬ ಮಾಡಿದ್ದರು. ಈ ಕುರಿತು ವಿಚಾರಿಸಲು ಬಂದಾಗ ಪಿಡಿಒ ಹಾಗೂ ಮರಿಸ್ವಾಮಿ ನಡುವೆ  ಮಾತಿನ ಚಕಮಕಿ ನಡೆದಿದೆ. ಈ ವೇಳೆ ರೊಚ್ಚಿಗೆದ್ದ ಮರಿಸ್ವಾಮಿ, ಹನುಮಂತಪ್ಪ ಮೇಲೆ ಹಲ್ಲೆ ಮಾಡಿದ್ದಾನೆ.

ಕೊಪ್ಪಳ, ಅ.13: ಕ್ಷುಲ್ಲಕ ವಿಚಾರಕ್ಕೆ ಗ್ರಾಮ ಪಂಚಾಯತಿ ಪಿಡಿಒ(PDO) ಮೇಲೆ ಹಲ್ಲೆ ಮಾಡಿದ ಘಟನೆ ಕೊಪ್ಪಳ (Koppala) ಜಿಲ್ಲೆಯ ಕುಕನೂರು ತಾಲೂಕಿನ ಕುದರಿಮೋತಿ ಗ್ರಾಮದಲ್ಲಿ ನಡೆದಿದೆ.  ಪಿಡಿಒ ಹನುಮಂತಪ್ಪ ನಾಯಕ್ ಎಂಬುವವರ ಮೇಲೆ ಮರಿಸ್ವಾಮಿ ಎಂಬಾತ ಹಲ್ಲೆ ಮಾಡಿದ್ದಾನೆ. ನಿವೇಶನದ ದಾಖಲೆ ಒದಗಿಸಲು ಗ್ರಾಮ ಪಂಚಾಯತಿಗೆ ಮರಿಸ್ವಾಮಿ ಅರ್ಜಿ ಸಲ್ಲಿಸಿದ್ದ. ಆದರೆ, ಪಿಡಿಒ ಹನುಮಂತಪ್ಪ ದಾಖಲೆ ನೀಡಲು ವಿಳಂಬ ಮಾಡಿದ್ದರು. ಈ ಕುರಿತು ವಿಚಾರಿಸಲು ಬಂದಾಗ ಪಿಡಿಒ ಹಾಗೂ ಮರಿಸ್ವಾಮಿ ನಡುವೆ  ಮಾತಿನ ಚಕಮಕಿ ನಡೆದಿದೆ. ಈ ವೇಳೆ ರೊಚ್ಚಿಗೆದ್ದ ಮರಿಸ್ವಾಮಿ, ಹನುಮಂತಪ್ಪ ಮೇಲೆ ಹಲ್ಲೆ ಮಾಡಿದ್ದಾನೆ. ಇದೀಗ ಪಿಡಿಒ ಮೇಲೆ ಹಲ್ಲೆ ನಡೆಸಿದ ಮರಿಸ್ವಾಮಿ ವಿರುದ್ಧ ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇನ್ನು ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್​ ಮಾಡಿ

Follow Us
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More