AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮ ಜನ್ಮ ಸ್ಥಳ ಗಂಗಾವತಿ ತಾಲೂಕಿನಲ್ಲೂ ಇದೆ ಅಯೋಧ್ಯೆ ಗ್ರಾಮ; ಕುತೂಹಲ ಕೆರಳಿಸಿದೆ ಇಲ್ಲಿರುವ ಪುರಾತನ ರಾಮ ಮಂದಿರ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಯೋಧ್ಯೆ ಗ್ರಾಮವು ತುಂಗಭದ್ರಾ ನದಿ ದಡದಲ್ಲಿದೆ. ಈ ಗ್ರಾಮ ವಿಜಯನಗರ ಅರಸರ ಕಾಲದಲ್ಲಿಯೇ ಅಸ್ತಿತ್ವದಲ್ಲಿತ್ತು. ಇದೀಗ ಹಳೆ ಅಯೋಧ್ಯೆ, ಹೊಸ ಅಯೋಧ್ಯೆ ಎಂದು ಎರಡು ಗ್ರಾಮಗಳಾಗಿ ವಿಂಗಡಿಸಲಾಗಿದೆ. ಎರಡು ಗ್ರಾಮಗಳಲ್ಲಿ ಒಟ್ಟು ಮೂರು ರಾಮನ ದೇವಸ್ಥಾನಗಳಿವೆ.

ಸಂಜಯ್ಯಾ ಚಿಕ್ಕಮಠ
| Edited By: |

Updated on:Jan 18, 2024 | 2:59 PM

Share

ಕೊಪ್ಪಳ, ಜ.18: ಜನವರಿ 22ಕ್ಕೆ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಇದೆ. ಹೀಗಾಗಿ ಇಡೀ ದೇಶದಲ್ಲೇ ಈಗ ರಾಮನಾಮ ಸ್ಮರಣೆ ನಡೀತಿದೆ (Ayodhya Ram Mandir). ಇದೇ ವೇಳೆ ಇದೀಗ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಯೋಧ್ಯೆ ಎನ್ನುವ ಗ್ರಾಮವೊಂದು ಭಾರಿ ಚರ್ಚೆಗೆ ಕಾರಣವಾಗಿದೆ (Koppal Ayodhya). ಅಯೋಧ್ಯೆ ರಾಮನಿಗೂ ಗಂಗಾವತಿ ತಾಲೂಕಿನಲ್ಲಿರುವ ಅಯೋಧ್ಯೆ ಎನ್ನುವ ಗ್ರಾಮಕ್ಕೂ ನಂಟಿದೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಗ್ರಾಮ ತುಂಗಭದ್ರಾ ನದಿ ದಡದಲ್ಲಿದೆ. ಆದರೆ ಈ ಗ್ರಾಮದ ಇತಿಹಾಸದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಮತ್ತೊಂದೆಡೆ ಇದೇ ತಾಲೂಕಿನಲ್ಲಿ ರಾಮನ ಭಂಟ ಹನುಮ ಜನಿಸಿದ ಸ್ಥಳವಾದ ಅಂಜನಾದ್ರಿ ಬೆಟ್ಟ, ಐತಿಹಾಸಿಕ ಪಂಪಾಸರೋವರ ಸೇರಿದಂತೆ ರಾಮಾಯಣಕ್ಕೆ ಸಂಬಂಧಿಸಿದ ಊರುಗಳು, ಕುರುಹುಗಳಿವೆ. ಈಗ ಇದೇ ತಾಲೂಕಿನಲ್ಲಿ ಅಯೋಧ್ಯೆ ಎನ್ನುವ ಹೆಸರು ಇರುವ ಗ್ರಾಮ ಕೂಡ ಇರುವುದು ಭಾರೀ ಕುತೂಹಲ ಕೆರಳಿಸಿದೆ. ವಾಲ್ಮೀಕಿ ರಾಮಾಯಣದಲ್ಲಿ ಉಲ್ಲೇಖವಿರುವ ಕಿಷ್ಕಿಂದೆ ಪ್ರದೇಶದಲ್ಲಿ ಇದೆ ಅಯೋಧ್ಯೆ ಗ್ರಾಮ ಎನ್ನಲಾಗುತ್ತಿದೆ. ಆದರೆ ಈ ಗ್ರಾಮಕ್ಕೆ ಯಾಕೆ ಈ ಹೆಸರು ಬಂತು ಎನ್ನುವುದ ಕುರಿತು ಸಂಪೂರ್ಣ ಮಾಹಿತಿ ಇಲ್ಲ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಯೋಧ್ಯೆ ಗ್ರಾಮವು ತುಂಗಭದ್ರಾ ನದಿ ದಡದಲ್ಲಿದೆ. ಈ ಗ್ರಾಮ ವಿಜಯನಗರ ಅರಸರ ಕಾಲದಲ್ಲಿಯೇ ಅಸ್ತಿತ್ವದಲ್ಲಿತ್ತು. ಇದೀಗ ಹಳೆ ಅಯೋಧ್ಯೆ, ಹೊಸ ಅಯೋಧ್ಯೆ ಎಂದು ಎರಡು ಗ್ರಾಮಗಳಾಗಿ ವಿಂಗಡಿಸಲಾಗಿದೆ. ಎರಡು ಗ್ರಾಮಗಳಲ್ಲಿ ಒಟ್ಟು ಮೂರು ರಾಮನ ದೇವಸ್ಥಾನಗಳಿವೆ. ಹಳೆ ಅಯೋಧ್ಯೆ ಗ್ರಾಮದಲ್ಲಿ ಇಂದಿಗೂ ರಾಮ, ಲಕ್ಷ್ಮಣ, ಸೀತೆ, ಆಂಜನೇಯ ದೇವಸ್ಥಾನಗಳಿವೆ. ಮೂರು ದೇವಸ್ಥಾನದಲ್ಲಿ ಪ್ರತಿನಿತ್ಯ ಗ್ರಾಮಸ್ಥರು ಪೂಜೆ ಸಲ್ಲಿಸುತ್ತಿದ್ದಾರೆ. ಇನ್ನು ಇದೇ ಗ್ರಾಮದಲ್ಲಿ ಹಂಪಿಯಲ್ಲಿರುವಂತೆ ಪಂಪಾಪತಿ, ಈಶ್ವರ, ಭೀಮಕೊಂಡ, ಆಂಜನೇಯ, ಗಂಗಾಮಾತಾ ದೇವಾಲಯಗಳಿವೆ. ಇದೇ ಗ್ರಾಮದ ತುಂಗಭದ್ರಾ ನದಿಯಲ್ಲಿ ಚಿದಾನಂದ ಅವಧೂತರ ಕಟ್ಟೆಯು ಇದೆ.

ಇದನ್ನೂ ಓದಿ: ಅಯೋಧ್ಯೆ, 1992-ಡಿಸೆಂಬರ್ 6ರಂದು ಆಗಿದ್ದೇನು: ಕರಸೇವಕನ ನೆನಪಿನ ಪುಟದಿಂದ

ತಮ್ಮೂರಿಗೆ ಅಯೋಧ್ಯೆ ಅಂತ ಹೆಸರು ಯಾಕೆ ಬಂತು ಅಂತ ಗೊತ್ತಿಲ್ಲಾ. ಆದರೆ ಹನುಮ ಜನಿಸಿದ ನಾಡಿನಲ್ಲಿಯೇ ಅಯೋಧ್ಯೆ ಎನ್ನುವ ಹೆಸರಿನ ಊರು ಇರುವುದು ನಮ್ಮಲ್ಲಿಯೂ ಕುತೂಹಲ ಮೂಡಿಸಿದೆ. ಆದ್ದರಿಂದ ಇತಿಹಾಸ ತಜ್ಞರು ಹಾಗೂ ಸಂಶೋಧಕರು ಈ ಬಗ್ಗೆ ಸಂಶೋಧನೆ ಮಾಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಇನ್ನು ರಾಮ ಮಂದಿರ ಉದ್ಘಾಟನೆ ವೇಳೆ ತಮ್ಮೂರಿನಲ್ಲಿರುವ ರಾಮನ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಂಡಿರೋ ಗ್ರಾಮಸ್ಥರು, ತಮ್ಮ ಗ್ರಾಮದ ಹೆಸರು ಕೂಡ ಅಯೋಧ್ಯೆ ಅಂತ ಇರೋದಕ್ಕೆ ಹೆಮ್ಮೆ ಪಡ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:02 am, Thu, 18 January 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್