AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮ ಜನ್ಮ ಸ್ಥಳ ಗಂಗಾವತಿ ತಾಲೂಕಿನಲ್ಲೂ ಇದೆ ಅಯೋಧ್ಯೆ ಗ್ರಾಮ; ಕುತೂಹಲ ಕೆರಳಿಸಿದೆ ಇಲ್ಲಿರುವ ಪುರಾತನ ರಾಮ ಮಂದಿರ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಯೋಧ್ಯೆ ಗ್ರಾಮವು ತುಂಗಭದ್ರಾ ನದಿ ದಡದಲ್ಲಿದೆ. ಈ ಗ್ರಾಮ ವಿಜಯನಗರ ಅರಸರ ಕಾಲದಲ್ಲಿಯೇ ಅಸ್ತಿತ್ವದಲ್ಲಿತ್ತು. ಇದೀಗ ಹಳೆ ಅಯೋಧ್ಯೆ, ಹೊಸ ಅಯೋಧ್ಯೆ ಎಂದು ಎರಡು ಗ್ರಾಮಗಳಾಗಿ ವಿಂಗಡಿಸಲಾಗಿದೆ. ಎರಡು ಗ್ರಾಮಗಳಲ್ಲಿ ಒಟ್ಟು ಮೂರು ರಾಮನ ದೇವಸ್ಥಾನಗಳಿವೆ.

ಸಂಜಯ್ಯಾ ಚಿಕ್ಕಮಠ
| Edited By: |

Updated on:Jan 18, 2024 | 2:59 PM

Share

ಕೊಪ್ಪಳ, ಜ.18: ಜನವರಿ 22ಕ್ಕೆ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಇದೆ. ಹೀಗಾಗಿ ಇಡೀ ದೇಶದಲ್ಲೇ ಈಗ ರಾಮನಾಮ ಸ್ಮರಣೆ ನಡೀತಿದೆ (Ayodhya Ram Mandir). ಇದೇ ವೇಳೆ ಇದೀಗ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಯೋಧ್ಯೆ ಎನ್ನುವ ಗ್ರಾಮವೊಂದು ಭಾರಿ ಚರ್ಚೆಗೆ ಕಾರಣವಾಗಿದೆ (Koppal Ayodhya). ಅಯೋಧ್ಯೆ ರಾಮನಿಗೂ ಗಂಗಾವತಿ ತಾಲೂಕಿನಲ್ಲಿರುವ ಅಯೋಧ್ಯೆ ಎನ್ನುವ ಗ್ರಾಮಕ್ಕೂ ನಂಟಿದೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಗ್ರಾಮ ತುಂಗಭದ್ರಾ ನದಿ ದಡದಲ್ಲಿದೆ. ಆದರೆ ಈ ಗ್ರಾಮದ ಇತಿಹಾಸದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಮತ್ತೊಂದೆಡೆ ಇದೇ ತಾಲೂಕಿನಲ್ಲಿ ರಾಮನ ಭಂಟ ಹನುಮ ಜನಿಸಿದ ಸ್ಥಳವಾದ ಅಂಜನಾದ್ರಿ ಬೆಟ್ಟ, ಐತಿಹಾಸಿಕ ಪಂಪಾಸರೋವರ ಸೇರಿದಂತೆ ರಾಮಾಯಣಕ್ಕೆ ಸಂಬಂಧಿಸಿದ ಊರುಗಳು, ಕುರುಹುಗಳಿವೆ. ಈಗ ಇದೇ ತಾಲೂಕಿನಲ್ಲಿ ಅಯೋಧ್ಯೆ ಎನ್ನುವ ಹೆಸರು ಇರುವ ಗ್ರಾಮ ಕೂಡ ಇರುವುದು ಭಾರೀ ಕುತೂಹಲ ಕೆರಳಿಸಿದೆ. ವಾಲ್ಮೀಕಿ ರಾಮಾಯಣದಲ್ಲಿ ಉಲ್ಲೇಖವಿರುವ ಕಿಷ್ಕಿಂದೆ ಪ್ರದೇಶದಲ್ಲಿ ಇದೆ ಅಯೋಧ್ಯೆ ಗ್ರಾಮ ಎನ್ನಲಾಗುತ್ತಿದೆ. ಆದರೆ ಈ ಗ್ರಾಮಕ್ಕೆ ಯಾಕೆ ಈ ಹೆಸರು ಬಂತು ಎನ್ನುವುದ ಕುರಿತು ಸಂಪೂರ್ಣ ಮಾಹಿತಿ ಇಲ್ಲ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಯೋಧ್ಯೆ ಗ್ರಾಮವು ತುಂಗಭದ್ರಾ ನದಿ ದಡದಲ್ಲಿದೆ. ಈ ಗ್ರಾಮ ವಿಜಯನಗರ ಅರಸರ ಕಾಲದಲ್ಲಿಯೇ ಅಸ್ತಿತ್ವದಲ್ಲಿತ್ತು. ಇದೀಗ ಹಳೆ ಅಯೋಧ್ಯೆ, ಹೊಸ ಅಯೋಧ್ಯೆ ಎಂದು ಎರಡು ಗ್ರಾಮಗಳಾಗಿ ವಿಂಗಡಿಸಲಾಗಿದೆ. ಎರಡು ಗ್ರಾಮಗಳಲ್ಲಿ ಒಟ್ಟು ಮೂರು ರಾಮನ ದೇವಸ್ಥಾನಗಳಿವೆ. ಹಳೆ ಅಯೋಧ್ಯೆ ಗ್ರಾಮದಲ್ಲಿ ಇಂದಿಗೂ ರಾಮ, ಲಕ್ಷ್ಮಣ, ಸೀತೆ, ಆಂಜನೇಯ ದೇವಸ್ಥಾನಗಳಿವೆ. ಮೂರು ದೇವಸ್ಥಾನದಲ್ಲಿ ಪ್ರತಿನಿತ್ಯ ಗ್ರಾಮಸ್ಥರು ಪೂಜೆ ಸಲ್ಲಿಸುತ್ತಿದ್ದಾರೆ. ಇನ್ನು ಇದೇ ಗ್ರಾಮದಲ್ಲಿ ಹಂಪಿಯಲ್ಲಿರುವಂತೆ ಪಂಪಾಪತಿ, ಈಶ್ವರ, ಭೀಮಕೊಂಡ, ಆಂಜನೇಯ, ಗಂಗಾಮಾತಾ ದೇವಾಲಯಗಳಿವೆ. ಇದೇ ಗ್ರಾಮದ ತುಂಗಭದ್ರಾ ನದಿಯಲ್ಲಿ ಚಿದಾನಂದ ಅವಧೂತರ ಕಟ್ಟೆಯು ಇದೆ.

ಇದನ್ನೂ ಓದಿ: ಅಯೋಧ್ಯೆ, 1992-ಡಿಸೆಂಬರ್ 6ರಂದು ಆಗಿದ್ದೇನು: ಕರಸೇವಕನ ನೆನಪಿನ ಪುಟದಿಂದ

ತಮ್ಮೂರಿಗೆ ಅಯೋಧ್ಯೆ ಅಂತ ಹೆಸರು ಯಾಕೆ ಬಂತು ಅಂತ ಗೊತ್ತಿಲ್ಲಾ. ಆದರೆ ಹನುಮ ಜನಿಸಿದ ನಾಡಿನಲ್ಲಿಯೇ ಅಯೋಧ್ಯೆ ಎನ್ನುವ ಹೆಸರಿನ ಊರು ಇರುವುದು ನಮ್ಮಲ್ಲಿಯೂ ಕುತೂಹಲ ಮೂಡಿಸಿದೆ. ಆದ್ದರಿಂದ ಇತಿಹಾಸ ತಜ್ಞರು ಹಾಗೂ ಸಂಶೋಧಕರು ಈ ಬಗ್ಗೆ ಸಂಶೋಧನೆ ಮಾಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಇನ್ನು ರಾಮ ಮಂದಿರ ಉದ್ಘಾಟನೆ ವೇಳೆ ತಮ್ಮೂರಿನಲ್ಲಿರುವ ರಾಮನ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಂಡಿರೋ ಗ್ರಾಮಸ್ಥರು, ತಮ್ಮ ಗ್ರಾಮದ ಹೆಸರು ಕೂಡ ಅಯೋಧ್ಯೆ ಅಂತ ಇರೋದಕ್ಕೆ ಹೆಮ್ಮೆ ಪಡ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:02 am, Thu, 18 January 24

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ