AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2023ಕ್ಕೆ ನಾಯಕರ ಬದಲಾವಣೆ ಆಗಬೇಕು; ಕನಕಗಿರಿ ಬಿಜೆಪಿ ಶಾಸಕರ ವಿರುದ್ಧ ಕಾರ್ಯಕರ್ತರು ಕೆಂಡಾಮಂಡಲ

ದೊಡ್ಡ ಮೀಟಿಂಗ್ ಇದ್ದರೆ ಬೆಂಗಳೂರಲ್ಲಿ ಮಾಡುತ್ತಾರೆ ಎಂದು ಬಿಜೆಪಿ ಕಾರ್ಯಕರ್ತರು ಶಾಸಕ ಬಸವರಾಜ ದಡೇಸುಗೂರು ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

2023ಕ್ಕೆ ನಾಯಕರ ಬದಲಾವಣೆ ಆಗಬೇಕು; ಕನಕಗಿರಿ ಬಿಜೆಪಿ ಶಾಸಕರ ವಿರುದ್ಧ ಕಾರ್ಯಕರ್ತರು ಕೆಂಡಾಮಂಡಲ
ಶಾಸಕ ಬಸವರಾಜ ದಡೇಸುಗೂರು
TV9 Web
| Updated By: sandhya thejappa|

Updated on:Jul 17, 2022 | 10:37 AM

Share

ಕೊಪ್ಪಳ: ಕನಕಗಿರಿ ಬಿಜೆಪಿ (BJP) ಶಾಸಕರ ವಿರುದ್ಧ ಪಕ್ಷದ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ. ‘ಬಿಜೆಪಿ ಕನಕಗಿರಿ ಕ್ಷೇತ್ರ’ ಎಂಬ ವಾಟ್ಸಾಪ್ ಗ್ರೂಪ್​ನಲ್ಲಿ (Whatsapp Group) ಕಾರ್ಯಕರ್ತರು, ಕ್ಷೇತ್ರದಲ್ಲಿ ನಮ್ಮ ಸಮಸ್ಯೆಗಳನ್ನು ಯಾರೊಬ್ಬರೂ ಆಲಿಸುತ್ತಿಲ್ಲ. ಶಾಸಕ ಬಸವರಾಜ ದಡೇಸುಗೂರು ಯಾವ ಕ್ಷೇತ್ರದಿಂದ ಗೆದ್ದಿದ್ದು? ಕೊಪ್ಪಳ ಜಿಲ್ಲೆ ಕನಕಗಿರಿಯಿಂದನಾ ಅಥವಾ ಬೆಂಗಳೂರಿನಿಂದನಾ? ಬೆಂಗಳೂರಲ್ಲಿ ಬೇರೆ ಪಕ್ಷದ ನಾಯಕರನ್ನು ಗಣನೆಗೆ ತೆಗೆದುಕೊಳ್ತಿದ್ದಾರೆ. ಸಮಸ್ಯೆಗೆ ಪರಿಹಾರ ದೊರೆಯದಿದ್ದರೆ ಕೇಂದ್ರಕ್ಕೆ ಪತ್ರ ಬರೆಯೋಣ. 2023ಕ್ಕೆ ನಾಯಕರ ಬದಲಾವಣೆ ಆಗಬೇಕು ಎಂದು ಕೆಂಡಾಮಂಡಲರಾಗಿದ್ದಾರೆ.

ಕಾರ್ಯಕರ್ತರ ಸಣ್ಣ ಸಭೆಗಳೆಂದರೆ ನಾಯಕರಿಗೆ ಲೆಕ್ಕಕ್ಕಿಲ್ಲ, ದೊಡ್ಡ ಮೀಟಿಂಗ್ ಇದ್ದರೆ ಬೆಂಗಳೂರಲ್ಲಿ ಮಾಡುತ್ತಾರೆ ಎಂದು ಬಿಜೆಪಿ ಕಾರ್ಯಕರ್ತರು ಶಾಸಕ ಬಸವರಾಜ ದಡೇಸುಗೂರು ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಸಕರಿಗೆ ಮಾಕ್ ಓಟಿಂಗ್ ತರಬೇತಿ: ನಾಳೆ ರಾಷ್ಟ್ರಪತಿ ಚುನಾವಣೆ ಹಿನ್ನೆಲೆ ಬಿಜೆಪಿ ಶಾಸಕರ ವಾಸ್ತವ್ಯ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಮುಂದುವರಿದಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಆರೋಗ್ಯ ಸಚಿವ ಡಾ.ಕೆ‌ ಸುಧಾಕರ್ ಹೋಟೆಲ್​ಗೆ ಆಗಮಿಸಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಶಾಸಕರಿಗೆ ಮಾಕ್ ಓಟಿಂಗ್ ತರಬೇತಿ ನೀಡಲಾಗುತ್ತದೆ.

ಇದನ್ನೂ ಓದಿ
Image
ಇಂದು ವಿಶ್ವ ಎಮೋಜಿ ದಿನ: ಈ ಎಮೋಜಿಯನ್ನು ರಚಿಸಿದವರು ಯಾರು ಗೊತ್ತಾ?
Image
Weather: ಕರ್ನಾಟಕ, ಒಡಿಶಾ, ಗುಜರಾತ್, ಛತ್ತೀಸಗಡದಲ್ಲಿ ಭಾರೀ ಮಳೆ ನಿರೀಕ್ಷಿತ
Image
NEET Exam: ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್​ಗಳಿಗಾಗಿ ಇಂದು ನೀಟ್ ಪರೀಕ್ಷೆ
Image
ಮಕ್ಕಳು ತೀರದಲ್ಲಿ ಕಳೆದುಕೊಂಡ ಫುಟ್ಬಾಲ್ ಸಮುದ್ರದಲ್ಲಿ ಸಿಲುಕಿದ್ದ ವ್ಯಕ್ತಿಯೊಬ್ಬನಿಗೆ 18-ಗಂಟೆ ಕಾಲ ತೇಲುತ್ತಿರಲು ನೆರವಾಯಿತು!

ಇದನ್ನೂ ಓದಿ: T20 Blast Final: ರಣರೋಚಕ ಫೈನಲ್: ಗೆದ್ದು ಸಂಭ್ರಮಿಸಿದ ಬಳಿಕ ಅಂಪೈರ್ ನೋಬಾಲ್ ಅಂದ್ರು..!

ಕಳೆದ ಬಾರಿ ರಾಷ್ಟ್ರಪತಿ ಚುನಾವಣೆಯಲ್ಲಿ ಶಾಸಕರಿಂದ ಕೆಲವು ಯಡವಟ್ಟುಗಳಾಗಿದ್ದವು. ಮತದಾನದ ವೇಳೆ ಕೆಲವು ಅಸಿಂಧು ಮತದಾನ ನಡೆದಿತ್ತು. ಈ ಹಿನ್ನೆಲೆಯಲ್ಲಿ ಅಣಕು ಮತದಾನದ ಮೂಲಕ ಶಾಸಕರಿಗೆ ಮಾಹಿತಿ ನೀಡಲಾಗುತ್ತದೆ. ಅಣಕು ಮತದಾನದ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಹೋಟೆಲ್​ನಲ್ಲಿ ಹಾಜರಿರುತ್ತಾರೆ.

ಇದನ್ನೂ ಓದಿ: Chikmagalur News: ಮಳೆ ಮಧ್ಯೆ ಪ್ಲಾಸ್ಟಿಕ್ ಗುಡಿಸಲಿನಲ್ಲಿ ತಾಯಿ-ಮಕ್ಕಳ ಪರದಾಟ: ಟಿವಿ9 ವರದಿ ನೋಡಿ ಸಹಾಯಕ್ಕೆ ಮುಂದಾದ ರಾಣಾ ಜಾರ್ಜ್

Published On - 10:29 am, Sun, 17 July 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ